25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಶಿಕ್ಷಕ ರಕ್ಷಕ ಸಂಘದ ಸಭೆ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ನಿಟ್ಟಡೆ ವೇಣೂರು ಇಲ್ಲಿನ 2025-26 ನೇ ಸಾಲಿನ ಪೂರ್ವ ಪ್ರಾಥಮಿಕ, ಪ್ರಾಥಮಿಕ ಪ್ರೌಢಶಾಲಾ, ಕಾಲೇಜು ಇದರ ಶಿಕ್ಷಕ ರಕ್ಷಕ ಸಂಘದ ಸಭೆಯು ಆ. 02 ರಂದು ನಡೆಯಿತು.ಈ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಗೋಪಾಲ ಶೆಟ್ಟಿ ಆಯ್ಕೆಯಾದರು.ಶಾಲಾ ಶಿಕ್ಷಕ ರಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಚಂದ್ರಶೇಖರ ಅಯ್ಕೆಗೊಂಡರು. ಅದೇ ರೀತಿ ಉಪಾಧ್ಯಕ್ಷರು, ಸದಸ್ಯರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪೀಠೋಪಕರಣ ನೀಡಿ ಸಹಕರಿಸಿದ ಚಂದ್ರ ಶೇಖರ ಇವರಿಗೆ ಗೌರವಿಸಲಾಯಿತು.

ರಷ್ಯಾದಲ್ಲಿ ಎಂ ಬಿ ಬಿ ಎಸ್ ಮಾಡುತ್ತಿರುವ ಶಾಲಾ ಹಳೆ ವಿದ್ಯಾರ್ಥಿ ಪೂಜಿತ್ ಕುಲಾಲ್ ಇವರು ಮಕ್ಕಳಿಗೆ ಮೊಬೈಲ್ ನೀಡದೆ ಅವರ ಉತ್ತಮ ಭವಿಷ್ಯ ವನ್ನು ರೂಪಿಸಿಕೊಳ್ಳಲು ಅವಕಾಶ ಮಾಡಿಕೊಡಿ ಎಂದು ಪೋಷಕರಿಗೆ ಕಿವಿ ಮಾತು ನೀಡಿದರು.

ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡ ಶಾಲಾ ಸಂಸ್ಥಾಪಕ ಗಿರೀಶ್ ಕೆ ಹೆಚ್ ಕುಂಭಶ್ರೀಯು ಇಷ್ಟು ಎತ್ತರಕ್ಕೆ ಬೆಳೆಯಬೇಕಾದರೆ ಪೋಷಕರ ಸಹಕಾರವೇ ಕಾರಣ ಎಂದರು. ಸಭೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಓಮನ, ಮಾಜಿ ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಸುಜಾತ, ಕುಂಭಶ್ರೀ ವೈಭವ ಸಮಿತಿಯ ಅಧ್ಯಕ್ಷ ಹರೀಶ್ ಪೊಕ್ಕಿ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಮಮತಾ ಶಾಂತಿ, ಪ್ರಾಥಮಿಕ ವಿಭಾಗದ ಶ್ರೀಮತಿ ಶುಭ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶೋಭಾ ಎಲ್. ಎನ್. ರಾವ್ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಮತ್ತು ಪೋಷಕರು ಉಪಸ್ಥಿತರಿದ್ದರು.

ಪ್ರಾಥಮಿಕ ವಿಭಾಗದ ಶಿಕ್ಷಕಿ ಶ್ರೀಮತಿ ಭವಾನಿ ದಿವ್ಯ ಮತ್ತು ಪ್ರೌಢಶಾಲಾ ವಿಭಾಗದ ಶಿಕ್ಷಕ ಸುಮನ್ ನಿರೂಪಿಸಿ, ಪ್ರೌಢಶಾಲಾ ವಿಭಾಗದ ಶಿಕ್ಷಕಿ ಶ್ರೀಮತಿ ಅಕ್ಷತ ಸ್ವಾಗತಿಸಿ, ಪ್ರಾಥಮಿಕ ವಿಭಾಗದ ಶಿಕ್ಷಕಿ ಶ್ವೇತ ಬಿ ವಂದಿಸಿದರು.

Related posts

ಭಾರತೀಯ ಭೂ ಸೇನೆ ಅಗ್ನಿವೀರ್‌ಗೆ ನಡ ಗ್ರಾಮದ ರಂಜಿತ್ ಆಯ್ಕೆ

Suddi Udaya

ನಂದಿನಿ ಹಾಲಿನ ದರ 4 ರೂ. ಏರಿಕೆ

Suddi Udaya

ಬೆಳ್ತಂಗಡಿ ತರಬೇತಿ ಕೇಂದ್ರದ ವಾರ್ಷಿಕ ವರದಿ ಬಿಡುಗಡೆ

Suddi Udaya

ಎ.6 : ಇಳಂತಿಲ ವಾಣಿಶ್ರೀ ಗೆಳೆಯರ ಸಂಘದ 30ನೇ ವರ್ಷದ ವಾರ್ಷಿಕೋತ್ಸವ “ಇಳೋತ್ಸವ 2024” : ಪೂರ್ವಭಾವಿ ಸಭೆ, ಹಾಗೂ ನೂತನ ಸಮಿತಿ ರಚನೆ

Suddi Udaya

ಮೇ. 6: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರ ಚುನಾವಣಾ ಪ್ರಚಾರದ ಅಂಗವಾಗಿ ಬೃಹತ್ ರೋಡ್ ಶೋ

Suddi Udaya

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ನಗರ ಮತ್ತು ಗ್ರಾಮೀಣ ಸಮಿತಿಗಳ ವತಿಯಿಂದ ‘ಮತಕಳ್ಳರೇ ಅಧಿಕಾರ ಬಿಟ್ಟು ತೊಲಗಿ’ ಪ್ರತಿಭಟನೆ

Suddi Udaya
error: Content is protected !!