July 23, 2026
Uncategorized

ಬೆಳ್ತಂಗಡಿ: ತಾಲೂಕು ಪಂಚಾಯತ್‌ ನಲ್ಲಿ ಆಧಾರ್‌ ನೊಂದಣಿ ಮತ್ತು ತಿದ್ದುಪಡಿ ಶಿಬಿರ

ಬೆಳ್ತಂಗಡಿ: ತಾಲೂಕು ಪಂಚಾಯತಿ ಬೆಳ್ತಂಗಡಿ ಮತ್ತು ಗ್ಯಾರಂಟಿ ಯೋಜನೆಗಳ ತಾಲೂಕು ಅನುಷ್ಟಾನ ಸಮಿತಿ ಮತ್ತು ಭಾರತೀಯ ಅಂಚೆ ಇಲಾಖೆ, ಪುತ್ತೂರು ಇವರ ಸಹಯೋಗದಲ್ಲಿ ಅಧಾರ್‌ ನೊಂದಣಿ ಮತ್ತು ತಿದ್ದುಪಡಿ ಶಿಬಿರವು ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ಜರಗಿತು.

ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಸಮಿತಿ ಸದಸ್ಯ ಕಾರ್ಯದರ್ಶಿಯವರಾದ ಭವಾನಿಶಂಕರ್‌ ಎನ್‌ ಉಪಸ್ಥಿತಿಯಲ್ಲಿ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಬಿ.ಪದ್ಮನಾಭ ಸಾಲ್ಯಾನ್‌ ರವರು ಶಿಬಿರವನ್ನು ಉದ್ಘಾಟಿಸಿದರು.

ಬೆಸ್ಟ್‌ ಫೌಂಡೇಶನ್‌ ಅಧ್ಯಕ್ಷ ರಕ್ಷಿತ್‌ ಶಿವರಾಂ ರವರು ಕಾರ್ಯಕ್ರಮಕ್ಕೆ ಶುಭಕೋರಿದರು. ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಸಮಿತಿಯ ಉಪಾಧ್ಯಕ್ಷ ಶೇಖರ್‌ ಕುಕ್ಕೇಡಿ, ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಸುರೇಶ್‌ ವಿಟ್ಲ, ಭಾರತೀಯ ಅಂಚೆ ಇಲಾಖೆಯ ಪುತ್ತೂರು ವಿಭಾಗದ ಮಾರ್ಕೆಟಿಂಗ್‌ ಮ್ಯಾನೇಜರ್‌ ಗುರುಪ್ರಸಾದ್‌, ಯುವನಿಧಿ ಯೋಜನೆಯ ಜಿಲ್ಲಾ ತರಬೇತುದಾರರಾದ ಶ್ರೀಮತಿ ಮಂಜೂಷಾ ಹಾಗೂ ಗ್ಯಾರಂಟಿ ಯೋಜನೆಯ ತಾಲೂಕು ಅನುಷ್ಟಾನ ಸಮಿತಿಯ ಸದಸ್ಯರಾದ ನೇಮಿರಾಜ ಕಿಲ್ಲೂರು, ಸೌಮ್ಯ ಲಾಯಿಲ, ಮರಿಟಾ ಪಿಂಟೋ, ಶರೀಫ್‌ ಸಬರಬೈಲು, ಸತೀಶ್‌ ಹೆಗ್ಡೆ ವೇಣೂರು, ವಿಜಯ ಗೌಡ, ವಂದನಾ ಭಂಡಾರಿ, ವೀರಪ್ಪ ಮೊಯ್ಲಿ, ಕೇಶವ ನಾಯ್ಕ, ತಾಲೂಕು ಪಂಚಾಯತ್‌ ಅಧೀಕ್ಷಕರಾದ ಪ್ರಶಾಂತ್‌ ಡಿ ಬಳಂಜ ಮತ್ತು ನೋಡೆಲ್‌ ಅಧಿಕಾರಿಯಾದ ಹೆರಾಲ್ಡ್‌ ಸ್ವಿಕ್ವೇರಾ ಇವರು ಉಪಸ್ಥಿತರಿದ್ದರು.

ಅಂಚೆ ಇಲಾಖೆಯ ಮೇಲಂತಬೆಟ್ಟು ಶಾಖಾ ಅಂಚೆ ಮೇಲ್ವಿಚಾರಕರಾದ ಕುಮಾರಿ ಚೈತ್ರ, ಕೊಯ್ಯೂರು ಶಾಖಾ ಅಂಚೆ ಮೇಲ್ವಿಚಾರಕರಾದ ಕುಮಾರಿ ಸಂತೃಪ್ತಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕಾರ್ಯವನ್ನು ನಡೆಸಿಕೊಟ್ಟರು.ಸುಮಾರು ನೂರಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಭಾಗವಹಿಸಿ ಅಧಾರ್‌ ನೊಂದಣಿ ಮತ್ತು ತಿದ್ದುಪಡಿಯನ್ನು ಮಾಡಿಸಿಕೊಂಡು ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.

Related posts

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ವಿವಿಧ ಕಡೆ ಧಿಡೀರ್ ಭೇಟಿ

Suddi Udaya

ಮಾಲಾಡಿ ಗ್ರಾ.ಪಂ ಅಧ್ಯಕ್ಷ ಪುನೀತ್ ಕುಮಾರ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಂಟಾಗಿರುವ ದೊಡ್ಡ ಗಾತ್ರದ ಹೊಂಡಗಳನ್ನು ಮುಚ್ಚುವ ಕೆಲಸ, ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಕ್ಷೀರಸಂಗಮ ಉದ್ಘಾಟನೆ

Suddi Udaya

ಫೇಸ್‌ಬುಕ್ ಖಾತೆಯಲ್ಲಿ ಪೊಸ್ಟ್ ಹಾಕಿ ಮಾನಹಾನಿ ಆರೋಪ:ಯುವತಿ ದೂರು: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮೇಲಂತಬೆಟ್ಟು ಮೀಸಲು ಅರಣ್ಯದಿಂದ ಅಕ್ರಮವಾಗಿ ಪ್ರವೇಶಿಸಿ ಬೆಲೆಬಾಳುವ ಮರಕಡಿದ ಪ್ರಕರಣ : ಬೆಳ್ತಂಗಡಿ ಅರಣ್ಯ ಇಲಾಖೆ ದಾಳಿ ಮರ, ಹಿಟಾಚಿ, ಕಟ್ಟಿಂಗ್ ಮೆಷಿನ್ ಸಹಿತ ಸೋತ್ತುಗಳ ವಶ

Suddi Udaya

ನಾಪತ್ತೆಯಾಗಿದ್ದ ಬೆದ್ರಬೆಟ್ಟು ನಿವಾಸಿ ಮೋಹಿನಿ ರವರ ಮೃತದೇಹ ಬಂಗಾಡಿ ನದಿಯಲ್ಲಿ ಪತ್ತೆ

Suddi Udaya
error: Content is protected !!