July 23, 2026
ವರದಿ

ಬೆಳ್ತಂಗಡಿ: ಯುವ ನಿಧಿ ನೋಂದಣಿ ಪ್ರಚಾರಕ್ಕೆ ಚಾಲನೆ

ಬೆಳ್ತಂಗಡಿ: ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ 2025ನೇ ಸಾಲಿನಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳ ಅರ್ಜಿ ಸಲ್ಲಿಕೆ ಪ್ರಾರಂಭವಾದ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ವತಿಯಿಂದ ನೋಂದಣಿ ಪ್ರಚಾರಕ್ಕೆ ಚಾಲನೆ ನೀಡಲಾಯಿತು.

ಬೆಳ್ತಂಗಡಿ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷರಾದ ಬಿ.ಪದ್ಮನಾಭ ಸಾಲ್ಯಾನ್‌ ಪೋಸ್ಟರ್ ಬಿಡುಗಡೆ ಮಾಡಿದರು.ಬೆಸ್ಟ್‌ ಫೌಂಡೇಶನ್‌ ಅಧ್ಯಕ್ಷರಾದ ರಕ್ಷಿತ್‌ ಶಿವರಾಂ ಶುಭ ಹಾರೈಸಿದರು.

ತಾಲೂಕು ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್‌ ಎನ್‌, ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನ ಪ್ರಾoಶುಪಾಲರಾದ ಸುರೇಶ್ ವಿಟ್ಲ,ಯುವನಿಧಿ ಯೋಜನೆಯ ಜಿಲ್ಲಾ ತರಬೇತುದಾರರಾದ ಶ್ರೀಮತಿ ಮಂಜೂಷಾ ಹಾಗೂ ಗ್ಯಾರಂಟಿ ಯೋಜನೆಯ ತಾಲೂಕು ಅನುಷ್ಟಾನ ಸಮಿತಿಯ ಸದಸ್ಯರಾದ ನೇಮಿರಾಜ ಕಿಲ್ಲೂರು, ಸೌಮ್ಯ ಲಾಯಿಲ, ಮರಿಟಾ ಪಿಂಟೋ, ಶರೀಫ್‌ ಸಬರಬೈಲು, ಸತೀಶ್‌ ಹೆಗ್ಡೆ ವೇಣೂರು, ವಿಜಯ ಗೌಡ, ವಂದನಾ ಭಂಡಾರಿ, ವೀರಪ್ಪ ಮೊಯ್ಲಿ, ತಾಲೂಕು ಪಂಚಾಯತ್‌ ಅಧೀಕ್ಷಕರಾದ ಡಿ.ಪ್ರಶಾಂತ್‌ ಬಳಂಜ ಮತ್ತು ನೋಡೆಲ್‌ ಅಧಿಕಾರಿ ಹೆರಾಲ್ಡ್‌ ಸಿಕ್ವೇರಾ ಇವರು ಉಪಸ್ಥಿತರಿದ್ದರು.

Related posts

ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯದ ಬಗ್ಗೆ ಗ್ರಾಮಸ್ಥರ ಸಭೆ: ಸಮಿತಿ ರಚನೆ

Suddi Udaya

ಬಂಗೇರ ಬ್ರಿಗೇಡ್ ಪಡಂಗಡಿ ಪಂಚಾಯತ್ ವ್ಯಾಪ್ತಿಯ ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶೃಂಗೇರಿ ಶಾರದಾ ಮಠಕ್ಕೆ ಭೇಟಿ, ಪುಂಡಿ ಪಣವು ಸಮರ್ಪಣೆ

Suddi Udaya

ಮದ್ದಡ್ಕ ಪೇಟೆಯಲ್ಲಿ 2 ತಿಂಗಳಿಂದ ಉರಿಯುತ್ತಿಲ್ಲ ದಾರಿ ದೀಪ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಬೆಸ್ಟ್ ಫೌಂಡೇಶನ್ ವತಿಯಿಂದ ಪೆರೋಡಿತ್ತಾಯಕಟ್ಟೆ ಸ.ಹಿ.ಪ್ರಾ. ಶಾಲಾ ಮಕ್ಕಳಿಗೆ ಉಚಿತ ನೋಟ್‌ ಪುಸ್ತಕ ವಿತರಣೆ

Suddi Udaya
error: Content is protected !!