25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮನೆಯೊಳಗೆ ಅಕ್ರಮ ಗಾಂಜಾ ದಾಸ್ತಾನು: ಪುಂಜಾಲಕಟ್ಟೆ ಪೊಲೀಸರಿಂದ ದಾಳಿ

ಬೆಳ್ತಂಗಡಿ : ಅಕ್ರಮವಾಗಿ ಕಟ್ಟಡದೊಳಗಡೆ ದಾಸ್ತಾನು ಇರಿಸಿದ್ದ ಗಾಂಜಾವನ್ನು ಪುಂಜಾಲಕಟ್ಟೆ ಪೊಲೀಸರು ದಾಳಿ ಮಾಡಿದ್ದು, ಶೇಖರಿಸಿಟ್ಟ ಗಾಂಜಾವನ್ನು ಪತ್ತೆಹಚ್ಚಿ ದಾಳಿ ವೇಳೆ ಆರೋಪಿ ಪರಾರಿಯಾದ ಘಟನೆ ಆ. 3ರಂದು ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದಡ್ಕ ಚಿಲಿಂಬಿ ಎಂಬಲ್ಲಿ ರಫೀಕ್ ಎಂಬಾತನ ಮನೆಯೊಳಗೆ 160 ಗ್ರಾಂ ಗಾಂಜಾ ಶೇಖರಿಸಿಟ್ಟ ಬಗ್ಗೆ ಪುಂಜಾಲಕಟ್ಟೆ ಪಿಎಸ್ಐ ಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಗಾಂಜಾ ವಶಕ್ಕೆ ಪಡೆದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ8C,20B NDPS Act ಅಡಿಯಲ್ಲಿ ಆರೋಪಿ ರಫೀಕ್ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿ ರಫೀಕ್ ವಿರುದ್ಧ ಈ ಹಿಂದೆ ಹಲವು ಗಾಂಜಾ ಪ್ರಕರಣ ದಾಖಲಾಗಿದೆ.

ಘಟನೆ ವಿವರ: ಆಗಸ್ಟ್ 03 ರಂದು 06:45 ಗಂಟೆಗೆ ಪುಂಜಾಲಕಟ್ಟೆ ಪಿಎಸ್ಐ ರಾಜೇಶ್.ಕೆ.ವಿ ಸಿಬ್ಬಂದಿಗಳೊಂದಿಗೆ ಪಣಕಜೆ ಎಂಬಲ್ಲಿ ರೌಂಡ್ಸ್ ಕರ್ತವ್ಯದಲ್ಲಿರುವಾಗ ದೊರೆತ ಖಚಿತ ಮಾಹಿತಿಯಂತೆ ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಮದ್ದಡ್ಕ ಚಿಲಿಂಬಿ ಎಂಬಲ್ಲಿ ನಿರ್ಮಾಣ ಹಂತದ ಛಾವಣಿ ಇಲ್ಲದ ಕಟ್ಟಡದೊಳಗಡೆ ರಫೀಕ್ ಎಂಬಾತನು ಅಕ್ರಮವಾಗಿ ಸುಮಾರು ರೂ.15,000 ಮೌಲ್ಯದ ಒಟ್ಟು 160 ಗ್ರಾಂ ತೂಕದ ಗಾಂಜಾದ ಎಲೆ ಮೊಗ್ಗು, ಬೀಜವನ್ನು ತಂದಿಟ್ಟಿದ್ದನ್ನು ತಹಶೀಲ್ದಾರರು ಬೆಳ್ತಂಗಡಿ ಹಾಗೂ ಪಂಚರ ಸಮಕ್ಷಮ ವಿವರವಾದ ಮಹಜರು ನಡೆಸಿ ವಶಪಡಿಸಿಕೊಂಡು ಬೆಳ್ತಂಗಡಿ ಠಾಣಾ ಸರಹದ್ದಿನ ಆಧಾರದಲ್ಲಿ ಮಹಜರು ಹಾಗೂ ವರದಿಯನ್ನು ಮುಂದಿನ ಕ್ರಮದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.

Related posts

ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಕೋರ್ಟ್ ಗೆ ವರದಿ ಸಲ್ಲಿಕೆ: ಆರು ಮಂದಿ ಷಡ್ಯಂತ್ರ ಪ್ರಕರಣದಲ್ಲಿ ಭಾಗಿಯಾಗಿರುವುದು ಧೃಡ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವತಿಯಿಂದ ಶ್ರವಣಬೆಳಗೊಳ ಶ್ರೀ ಗಳಿಗೆ ವಿನಯಾಂಜಲಿ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ವರದ ಶಂಕರ ದಾಮ್ಲೆ, ಉಪಾಧ್ಯಕ್ಷರಾಗಿ ಸೀತಾ ಎ ಆಯ್ಕೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಪ್ರಪ್ರಥಮ ಬಾರಿಗೆ ಏಕಕಾಲದಲ್ಲಿ ಚಿತ್ರಮಂದಿರ ಮತ್ತು ಟಾಕೀಸ್ ಆ್ಯಪ್ ಒಟಿಟಿಯಲ್ಲಿ ಬಿಡುಗಡೆಗೊಳ್ಳುತ್ತಿರುವ “ಹೌದ್ದೋ ಹುಲಿಯ”

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಗೆ ರಾಜ್ಯಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!