September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಆಟಿದ ಕಮ್ಮೆನ

ಬೆಳ್ತಂಗಡಿ: ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಮಹಿಳಾ ಸಂಚಾಲನ ಸಮಿತಿ ಬೆಳ್ತಂಗಡಿ ತಾಲೂಕು ಆತಿಥ್ಯದಲ್ಲಿ ಆ.02 ರಂದು ಆಟಿದ ಕಮ್ಮೆನ ಕಾರ್ಯಕ್ರಮವು ಬೆಳ್ತಂಗಡಿಯ ಗುರುನಾರಾಯಣ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ನೆರವೇರಿಸಿ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಘಟಕದ ಸಲಹೆಗಾರರಾದ ಸುಧಾಮಣಿ ಆರ್ ಮಾತನಾಡಿ ಆಟಿ ತಿಂಗಳ ವಿಶೇಷತೆಗಳ ಬಗ್ಗೆ ತಿಳಿಸಿದರು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ವಹಿಸಿದ್ದರು. ವೇದಿಕೆಯಲ್ಲಿ ಮಹಿಳಾ ಸಂಚಾಲನ ಸಮಿತಿಯ ಪ್ರಧಾನ ಸಂಚಾಲಕಿ ಶ್ರೀಮತಿ ಲೀಲಾವತಿ ಪಣಕಜೆ, ಘಟಕದ ಕಾರ್ಯದರ್ಶಿ ಮಧುರ ರಾಘವ್ ಉಪಸ್ಥಿತರಿದ್ದರು.


ಕಾರ್ಯಕ್ರಮದ ಮೊದಲು ಘಟಕದ ಸದಸ್ಯರಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಕುಮಾರಿ ಶ್ರುತ ಮುಂಡೂರು ಗಾದೆ ಮಾತುಗಳನ್ನು ತಿಳಿಸಿದರು. ಘಟಕದ ಸದಸ್ಯರಿಂದ ನೃತ್ಯ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಸಂಚಾಲಕರಾದ ಅಶೋಕ ಕಲ್ಮಂಜ ಸ್ವಾಗತಿಸಿ, ಶ್ವೇತಾ ಯುವರಾಜ್ ಮಣಿಕೆ ನಿರೂಪಿಸಿ, ಲೀಲಾವತಿ ಪಣಕಜೆ ಧನ್ಯವಾದವಿತ್ತರು. ಕಾರ್ಯಕ್ರಮದ ನಂತರ ಘಟಕದ ಸದಸ್ಯರು ತಯಾರಿಸಿದ ಆಟಿ ತಿಂಗಳ ಸುಮಾರು 30 ಬಗೆಯ ವಿವಿಧ ತಿಂಡಿ ತಿನಿಸುಗಳೊಂದಿಗೆ ಭೋಜನದ ವ್ಯವಸ್ಥೆಯನ್ನು ಮಾಡಲಾಗಿತ್ತು.

Related posts

ಕೊಕ್ಕಡ ಗ್ರಾ.ಪಂ. ನ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ನಿಡ್ಲೆ ಆಯುಷ್ಮಾನ್ ಉಪ ಆರೋಗ್ಯ ಕೇಂದ್ರ ರಾಷ್ಟ್ರಮಟ್ಟದಲ್ಲಿ ಆಯ್ಕೆ

Suddi Udaya

ಶಿಶಿಲ: ಕಂಚಿನಡ್ಕ ನಿವಾಸಿ ಸುಂದರಿ ನಿಧನ

Suddi Udaya

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಸುಲ್ಕೇರಿ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ನಾಳೆ(ಫೆ. 7): ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!