July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಆಟಿದ ಕಮ್ಮೆನ

ಬೆಳ್ತಂಗಡಿ: ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಮಹಿಳಾ ಸಂಚಾಲನ ಸಮಿತಿ ಬೆಳ್ತಂಗಡಿ ತಾಲೂಕು ಆತಿಥ್ಯದಲ್ಲಿ ಆ.02 ರಂದು ಆಟಿದ ಕಮ್ಮೆನ ಕಾರ್ಯಕ್ರಮವು ಬೆಳ್ತಂಗಡಿಯ ಗುರುನಾರಾಯಣ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ನೆರವೇರಿಸಿ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಘಟಕದ ಸಲಹೆಗಾರರಾದ ಸುಧಾಮಣಿ ಆರ್ ಮಾತನಾಡಿ ಆಟಿ ತಿಂಗಳ ವಿಶೇಷತೆಗಳ ಬಗ್ಗೆ ತಿಳಿಸಿದರು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ವಹಿಸಿದ್ದರು. ವೇದಿಕೆಯಲ್ಲಿ ಮಹಿಳಾ ಸಂಚಾಲನ ಸಮಿತಿಯ ಪ್ರಧಾನ ಸಂಚಾಲಕಿ ಶ್ರೀಮತಿ ಲೀಲಾವತಿ ಪಣಕಜೆ, ಘಟಕದ ಕಾರ್ಯದರ್ಶಿ ಮಧುರ ರಾಘವ್ ಉಪಸ್ಥಿತರಿದ್ದರು.


ಕಾರ್ಯಕ್ರಮದ ಮೊದಲು ಘಟಕದ ಸದಸ್ಯರಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಕುಮಾರಿ ಶ್ರುತ ಮುಂಡೂರು ಗಾದೆ ಮಾತುಗಳನ್ನು ತಿಳಿಸಿದರು. ಘಟಕದ ಸದಸ್ಯರಿಂದ ನೃತ್ಯ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಸಂಚಾಲಕರಾದ ಅಶೋಕ ಕಲ್ಮಂಜ ಸ್ವಾಗತಿಸಿ, ಶ್ವೇತಾ ಯುವರಾಜ್ ಮಣಿಕೆ ನಿರೂಪಿಸಿ, ಲೀಲಾವತಿ ಪಣಕಜೆ ಧನ್ಯವಾದವಿತ್ತರು. ಕಾರ್ಯಕ್ರಮದ ನಂತರ ಘಟಕದ ಸದಸ್ಯರು ತಯಾರಿಸಿದ ಆಟಿ ತಿಂಗಳ ಸುಮಾರು 30 ಬಗೆಯ ವಿವಿಧ ತಿಂಡಿ ತಿನಿಸುಗಳೊಂದಿಗೆ ಭೋಜನದ ವ್ಯವಸ್ಥೆಯನ್ನು ಮಾಡಲಾಗಿತ್ತು.

Related posts

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ‘ತರಗತಿ ಕೋಣೆ ನಿರ್ವಹಣೆ’ ಕಾರ್ಯಾಗಾರ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಉಜ್ಜಲ ಉದ್ಯಮಿ ಪ್ರಶಸ್ತಿ

Suddi Udaya

ಕಲ್ಮಂಜ: ಪಲ್ಕೆ ಆಚಾರಿಬೆಟ್ಟು ನಿವಾಸಿ ಕಲ್ಯಾಣಿ ನಿಧನ

Suddi Udaya

ಪಿಲಿಚಾಮುಂಡಿಕಲ್ಲು ಮತ್ತು ಗುರುವಾಯನಕೆರೆ ಶಾಲೆ ಬಳಿ ಟ್ರಾಫಿಕ್ ಪೊಲೀಸ್ ನಿಯೋಜಿಸಿ: ಕುವೆಟ್ಟು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya

ಕೊಕ್ಕಡ ಸಂತ ಜೋನ್ ಬ್ಯಾಪ್ಟಿಸ್ಟ್ ಚರ್ಚ್ ನಲ್ಲಿ ಯುವದಿನಾಚರಣೆ ಪ್ರಯುಕ್ತ ಸ್ವ ಉದ್ಯೋಗ ಮಾಹಿತಿ ತರಬೇತಿ

Suddi Udaya
error: Content is protected !!