23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ಪೋಷಕರ ಸಭೆ

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ವಿಶೇಷ ಮಕ್ಕಳ ಪೋಷಕರ ಸಭೆಯು ಆ. 2 ರಂದು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕ ವಂ.ಫಾ.ವಿನೋದ್ ಮಸ್ಕರೇನಸ್ ರವರು, ಶಾಲೆಯ ಆಪ್ತಸಮಾಲೋಚಕರಾದ ಮಿಸ್. ಮೆರಿನ್ ಹಾಗೂ ಪೋಷಕ ಪ್ರತಿನಿಧಿಯಾಗಿ ಶುಭಕರ್ ಉಪಸ್ಥಿತರಿದ್ದರು. ವಂ.ಫಾ. ವಿನೋದ್ ಮಸ್ಕರೇನಸ್ ರವರು ದಯಾ ವಿಶೇಷ ಶಾಲೆಯು ಹೇಗೆ ವಿಭಿನ್ನವಾಗಿ ವಿಶೇಷ ಮಕ್ಕಳಿಗಾಗಿ ವಿನೂತನವಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನಿಸ್ವಾರ್ಥ ಸೇವೆಯನ್ನು ಮಾಡುವುದರೊಂದಿಗೆ ಮಕ್ಕಳಿಗೆ ನೀಡಲಾಗುತ್ತಿರುವ ಫಿಸಿಯೋಥೆರಪಿ ಹಾಗೂ ವಾಕ್ ಮತ್ತು ಶ್ರವಣ ಥೆರಪಿಗಳನ್ನು ನುರಿತ ವೈಧ್ಯರ ಸಹಾಯದೊಂದಿಗೆ ನೀಡಲಾಗುತ್ತಿದೆ. ಪ್ರತೀ ದಿನವೂ ಮಕ್ಕಳು ಈ ಎಲ್ಲಾ ಸೌಲಭ್ಯಗಳನ್ನು ಪಡೆಯುವುದರೊಂದಿಗೆ ಮಕ್ಕಳು ತಮ್ಮ ದೈನಂದಿನ ಚಟುವಟಿಕೆಗಳನ್ನು ತಾವೇ ನಿಭಾಯಿಸಿಕೊಳ್ಳುವ ಸಾಮರ್ಥ್ಯವನ್ನು ಅವರಲ್ಲಿ ಬೆಳೆಸಲು ಸಹಾಯಕವಾಗುತ್ತದೆ. ಇದರೊಂದಿಗೆ ನಮ್ಮ ಪೋಷಕರನ್ನೂ ಸಶಕ್ತಗೊಳಿಸುವ ನಿಟ್ಟಿನಲ್ಲಿ ಸಂಸ್ಥೆಯು ಪೋಷಕರಿಗೆ ವಿವಿಧ ಕರಕುಶಲ ವಸ್ತುಗಳ ತಯಾರಿಕೆಯಲ್ಲಿ ತರಬೇತಿಯನ್ನು ನೀಡಲು ತೀರ್ಮಾನಿಸಿದ್ದು, ಆಸಕ್ತ ಪೋಷಕರು ಸಂಸ್ಥೆಗೆ ಭೇಟಿ ನೀಡಿ ತರಬೇತಿಯನ್ನು ಪಡೆದು ತಮ್ಮ ಕುಟುಂಬದ ಆರ್ಥಿಕ ಅಭಿವೃದ್ಧಿಯನ್ನು ಸಾಧಿಸುವ ನಿಟ್ಟಿನಲ್ಲಿ ಶ್ರಮಿಸುವಂತೆ ತಿಳಿಸಿದರು.

ಮೆರಿನ್ ರವರು 2025-26 ರ ಶಾಲಾ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿ, ಪೋಷಕರಿಂದ ಸಲಹೆ ಸೂಚನೆಗಳನ್ನು ಪಡೆಯುವುದರೊಂದಿಗೆ ಮುಂಬರುವ ವರ್ಷದ ಕಾರ್ಯ ವಿಧಾನಗಳನ್ನು ಚರ್ಚಿಸಿದರು. ತರಗತಿವಾರು ಮಕ್ಕಳ ಪ್ರಗತಿಯನ್ನು ಶಿಕ್ಷಕರೊಂದಿಗೆ ಚರ್ಚಿಸಿ, ಮನೆಯಲ್ಲಿ ಮಕ್ಕಳ ಶೈಕ್ಷಣಿಕ ಮತ್ತು ಇನ್ನಿತರ ಚಿಕಿತ್ಸೆಗಳ ಅನುಸರಣೆಯನ್ನು ಮಾಡುವ ಕುರಿತಾಗಿ ಪೋಷಕರಿಗೆ ತಿಳಿಸಲಾಯಿತು. ಕಚೇರಿ ಸಹಾಯಕ ಕಿರಣ್ ಮಿರಾಂದ ಸ್ವಾಗತಿಸಿ, ಕಳೆದ ಮಾಸಿಕ ಸಭೆಯ ವರದಿಯನ್ನು ವಾಚಿಸಿದರು. ಮಿಸ್. ಮೆರಿನ್ ರವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

Related posts

ಸುಲ್ಕೇರಿ ಶ್ರೀರಾಮ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಎಂಟು ದಿನಗಳ ಹಿಂದೆ ಮನೆಯಲ್ಲಿ ಇಲಿ ಪಾಷಾಣ ಸೇವಿಸಿದ್ದ ಗಡಾ೯ಡಿ ಗ್ರಾಮದ ಮಜಲು ನಿವಾಸಿ ಸಂಜೀವ ಪೂಜಾರಿ ಸಾವು

Suddi Udaya

ಬೆಳ್ತಂಗಡಿ : ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಅಹ್ವಾನ

Suddi Udaya

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ : ಲೆಕ್ಕಪತ್ರ ಮಂಡನೆ, ಸ್ಮರಣಸಂಚಿಕೆ ಬಿಡುಗಡೆ

Suddi Udaya

ಉಪ್ಪಾರಪಳಿಕೆ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya

ಅಳದಂಗಡಿ: ತೋಟದಲ್ಲಿ ಬೃಹತ್‌ ಗಾತ್ರದ ಕಾಳಿಂಗ ಸರ್ಪ ಪತ್ತೆ

Suddi Udaya
error: Content is protected !!