25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹೇಂದ್ರ ಕಂಪನಿಯ ಹೊಸ ಮಾದರಿಯ ಕಾರು ಕೊಡುಗೆ

ಧರ್ಮಸ್ಥಳ: ದೇಶದ ಪ್ರತಿಷ್ಠಿತ ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯು ನೂತನವಾಗಿ ತಯಾರಿಸಿದ ಹೊಸ ಮಾದರಿಯ ಬಿ.ಇ. : ೬ ಕಾರನ್ನು (ಕೆ.ಎ. ೨೧ ಎಂ.ಎ.- ೬೦೩೩) ಉತ್ಪಾದನಾ ವಿಭಾಗದ ಮುಖ್ಯಸ್ಥರಾದ ವಿನಯ್‌ಖಾನೋಲ್ಕರ್ ಆ.3ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಕೊಡುಗೆಯಾಗಿ ಅರ್ಪಿಸಿದರು.


ಹೊಸ ಮಾದರಿಯ ವಾಹನ ತಯಾರಾದ ಕೂಡಲೆ ಅದನ್ನು ಕಾಣಿಕೆಯಾಗಿ ಧರ್ಮಸ್ಥಳಕ್ಕೆ ಅರ್ಪಿಸುವುದು ತಮ್ಮ ಕಂಪೆನಿಯ ಸಂಪ್ರದಾಯವಾಗಿದೆ. ಇದರಿಂದ ಕಂಪೆನಿ ಉನ್ನತ ಪ್ರಗತಿ ಸಾಧಿಸಿದೆ ಎಂದು ಹೊಸ ಕಾರಿನ ಕೀಯನ್ನು ಹೆಗ್ಗಡೆಯವರಿಗೆ ಹಸ್ತಾಂತರಿಸಿದ ಕಂಪೆನಿಯ ಉತ್ಪದನಾ ವಿಭಾಗದ ಮುಖ್ಯಸ್ಥ ವಿನಯ್ ಖಾನೋಲ್ಕರ್ ತಿಳಿಸಿದರು.


ಕಂಪೆನಿಯ ಉದಾರ ಕೊಡುಗೆಯನ್ನು ಸ್ವೀಕರಿಸಿದ ಹೆಗ್ಗಡೆಯವರು ಕಂಪೆನಿಯು ಈ ಹಿಂದೆ ತಯಾರಿಸಿದ ಹೊಸ ಮಾದರಿಯ ವಾಹನಗಳನ್ನು ಪ್ರಥಮವಾಗಿ ಧರ್ಮಸ್ಥಳಕ್ಕೆ ಅರ್ಪಿಸಿದ್ದು, ಇದು ಅವರ ಮೂರನೆ ಕೊಡುಗೆಯಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಇವರ ವಾಹನಗಳನ್ನು ಬಳಸಿಕೊಳ್ಳುತ್ತೇವೆ.

ದೇಶದ ಪ್ರತಿಷ್ಠಿತ ಮಹೇಂದ್ರ ಕಂಪೆನಿಯ ವಾಹನಗಳು ಯಾವುದೇ ಸಮಸ್ಯೆಗಳಿಲ್ಲದೆ ಉತ್ತಮ ಸೇವೆ ನೀಡುತ್ತಿವೆ. ದೇಶದ ಸೇನೆಯ ವಿಭಾಗಕ್ಕೂ ಅವರು ವಾಹನಗಳನ್ನು ಪೂರೈಸುತ್ತಿದ್ದು, ತನ್ಮೂಲಕ ದೇಶಸೇವೆಗೂ ಉತ್ತಮ ಸೇವೆ ನೀಡುತ್ತಿದ್ದಾರೆ ಎಂದು ಹೇಳಿ ಹೆಗ್ಗಡೆಯವರು ಕಂಪೆನಿಯ ವ್ಯವಹಾರದಲ್ಲಿ ಉತ್ತರೋತ್ತರ ಪ್ರಗತಿಯನ್ನು ಸಾಧಿಸಲಿ ಎಂದು ಹಾರೈಸಿದರು.
ಬಳಿಕ ಹೆಗ್ಗಡೆಯವರು ಕಾರನ್ನು ಚಾಲನೆ ಮಾಡಿ ಶುಭ ಹಾರೈಸಿದರು.
ಹೇಮಾವತಿ ವೀ. ಹೆಗ್ಗಡೆಯವರು, ಅಮಿತ್ ಮತ್ತು ಶ್ರದ್ಧಾಅಮಿತ್ ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ ನಡೆಯುವ ಸತ್ಯದರ್ಶನ ಕಾರ್ಯಕ್ರಮದ ಬಗ್ಗೆ ಕಣಿಯೂರುನಲ್ಲಿ ಪೂರ್ವಭಾವಿ ಸಭೆ

Suddi Udaya

ಜೂ.18-23: ಉಜಿರೆಯಲ್ಲಿ ಬೆಂಗಳೂರು ಜೀವನ ಕಲೆ ಪ್ರತಿಷ್ಠಾನ ಸಂಸ್ಥೆ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya

ಪುಂಜಾಲಕಟ್ಟೆ ಕೆಪಿಎಸ್ ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಸತ್ಯ ಶೋಧಕ ವೇದಿಕೆ ಮಹಾಸಭೆ: ನೂತನ ಕಚೇರಿ ಉದ್ಘಾಟನೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ವಸ್ತ್ರ ಚಿತ್ರಕಲಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya
error: Content is protected !!