23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಸುಲ್ಕೇರಿ ಬಂಟರ ಯಾನೆ ನಾಡವರ ಸಂಘ ಗ್ರಾಮ ಸಮಿತಿಯಿಂದ ಆಟಿಡೊಂಜಿ ದಿನ

ಸುಲ್ಕೇರಿ : ಸುಲ್ಕೇರಿ ಮಹಮ್ಮಾಯಿ ಸಭಾಭವನದಲ್ಲಿ ಬಂಟರ ಯಾನೆ ನಾಡವರ ಸಂಘ ಗ್ರಾಮ ಸಮಿತಿ ಸುಲ್ಕೇರಿಯ ಆಟಿಡೊಂಜಿ ದಿನ ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು.

ಕಾರ್ಯಕ್ರಮವನ್ನು ಗ್ರಾಮ ಸಮಿತಿಯ ಗೌರವಾಧ್ಯಕ್ಷ ರಾಮ ಶೆಟ್ಟಿ, ರಾಜು ಶೆಟ್ಟಿ ಕೊಕ್ರಾಡಿ ಹಾಗೂ ಬೇಬಿ ಶೆಟ್ಟಿ ಅವರ ಉದ್ಘಾಟಿಸಿದರು.

ವಿವಿಧ ಆಟೋಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಬಳಿಕ ಮಧ್ಯಾಹ್ನ ಶ್ರೀಮತಿ ಪ್ರೀತಿ ಶೆಟ್ಟಿ ಯವರ ಪ್ರಾರ್ಥನೆಯೊಂದಿಗೆ ಸಮಾರೋಪ ಸಮಾರಂಭ ಆರಂಭವಾಯಿತು ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಸಮಿತಿಯ ಅಧ್ಯಕ್ಷ ಮಹಾಬಲ ಶೆಟ್ಟಿ ವಹಿಸಿದ್ದರು.

ವೇದಿಕೆಯಲ್ಲಿ ತಾಲೂಕು ಬಂಟರ ಸಮಿತಿಯ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ, ಪ್ರಕಾಶ್ ಶೆಟ್ಟಿ ನೊಚ್ಚ, ಕಾರ್ಯದರ್ಶಿ ಸುರೇಶ್ ಶೆಟ್ಟಿ, ಕೋಶಾಧಿಕಾರಿ ವಸಂತ ಶೆಟ್ಟಿ, ಉಪಾಧ್ಯಕ್ಷರಾದ ನವೀನ್ ಸಾಮಾನಿ, ತಾಲೂಕು ಯುವ ಬಂಟರ ಅಧ್ಯಕ್ಷ ಪ್ರತೀಕ್ ಶೆಟ್ಟಿ, ಮಹಿಳಾ ಅಧ್ಯಕ್ಷ ವಿಜಯಲಕ್ಷ್ಮಿ ಸಾಮಾನಿ ಹಾಗೂ ನಾರಾವಿ ಬಂಟರ ವಲಯ ಅಧ್ಯಕ್ಷ ರಾಜೇಶ್ ಶೆಟ್ಟಿ ಪೆರಾಡಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವಿಶಿಷ್ಟ ಸಾಧನೆಯನ್ನು ಮಾಡಿದ ಹಾಗೂ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದವರನ್ನು ಸನ್ಮಾನಿಸಲಾಯಿತು. ಶ್ರೀಮತಿ ಸ್ವಾತಿ ಶೆಟ್ಟಿ ವರದಿ ವಾಚಿಸಿ, ವಿಶ್ವನಾಥ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ರವಿ ಶೆಟ್ಟಿ ಸ್ವಾಗತಿಸಿ, ದಯಾಕರ ರೈ ವಂದಿಸಿದರು.

Related posts

ಸಾಮಾಜಿಕ ಜಾಲ ತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ವಸಂತ ಗಿಳಿಯಾರ್ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

.ಸುಬ್ರಹ್ಮಣ್ಯ ಭಟ್ಟರು ಬರೆದ ಪೌರಾಣಿಕ ಕಾದಂಬರಿ “ಸುಜ್ಞಾನಿ ಸಹದೇವ” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆ

Suddi Udaya

ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ.

Suddi Udaya

ಅರಸಿನಮಕ್ಕಿ: ಕುಲಾಲರ ಸಂಘದ ವಿಶೇಷ ಮಾಸಿಕ ಸಭೆ

Suddi Udaya

ಶಿಲಾ೯ಲು : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya
error: Content is protected !!