23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.5 ರಂದು ಮಂಗಳೂರು ಜಂಟಿ ಕ್ರಿಯಾ ಸಮಿತಿಯ ವತಿಯಿಂದ ಏರ್ಪಡಿಸಲಾದ ಹೋರಾಟಕ್ಕೆ ಭಾರತೀಯ ಮಜ್ದೂರು ಸಂಘ ಬಾಹ್ಯ ಬೆಂಬಲ

ಮಂಗಳೂರು : ಕರ್ನಾಟಕ ರಾಜ್ಯದ ನಾಲ್ಕು ಸಾರಿಗೆ ನಿಗಮಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರು ಹಾಗೂ ನಿವೃತ್ತ ನೌಕರರ ಹಲವಾರು ಹಕ್ಕುಗಳು ತೀವ್ರ ಉಲ್ಲಂಘನೆಯ ಸ್ಥಿತಿಗೆ ತಲುಪಿರುವುದರಿಂದ, ಆ. 5ರಂದು ಜಂಟಿ ಕ್ರೀಯಾ ಸಮಿತಿಯ ವತಿಯಿಂದ ಏರ್ಪಡಿಸಲಾದ ಹೋರಾಟಕ್ಕೆ ಭಾರತೀಯ ಮಜ್ದೂರು ಸಂಘ ದಕ್ಷಿಣ ಕನ್ನಡ ಜಿಲ್ಲಾ ಘಟಕ ಬಾಹ್ಯ ಬೆಂಬಲ ನೀಡುತ್ತಿದೆ.

ಸಂಘಟನೆಯ ದೃಷ್ಟಿಯಲ್ಲಿ ವೇತನ ಪರಿಷ್ಕರಣೆ, ಹಿಂಬಾಕಿ ಬಾಕಿ ಹಣದ ಪಾವತಿ, ಅನುಚಿತ ಶಿಸ್ತು ಕ್ರಮಗಳ ವಿರೋಧ, ಗುತ್ತಿಗೆ ನೇಮಕಾತಿಗಳ ರದ್ದುಪಡಿಸುವುದು ಹಾಗೂ ಭ್ರಷ್ಟಾಚಾರದ ವಿರುದ್ಧ ಕ್ರಮಗಳೆಲ್ಲ ಅತೀ ತುರ್ತು ಹಾಗೂ ನ್ಯಾಯಸಮ್ಮತ ಬೇಡಿಕೆಗಳಾಗಿವೆ. ಈ ಬೇಡಿಕೆಗಳು ಕೇವಲ ಕಾರ್ಮಿಕರ ಅಭಿವೃದ್ದಿಗೆ ಮಾತ್ರವಲ್ಲದೆ ನಿಗಮಗಳ ಕಾರ್ಯಕ್ಷಮತೆ ಹಾಗೂ ಸಾರ್ವಜನಿಕ ಸೇವೆಯ ಗುಣಮಟ್ಟಕ್ಕೂ ಅತ್ಯಂತ ಅಗತ್ಯವಾಗಿವೆ. ಭಾರತೀಯ ಮಜ್ದೂರು ಸಂಘವು ಯಾವಾಗಲೂ ನ್ಯಾಯಕ್ಕಾಗಿ ಹೋರಾಡುತ್ತಿರುವ ಕಾರ್ಮಿಕರೊಂದಿಗೆ ನಿಂತಿದೆ. ಕಾರ್ಮಿಕರ ಹಿತಾಸಕ್ತಿಯೇ ನಮ್ಮ ಹೋರಾಟದ ನೇರ ಉದ್ದೇಶ. ಸರ್ಕಾರವು ತಕ್ಷಣ ಸ್ಪಂದಿಸಿ ಈ ಬೇಡಿಕೆಗಳನ್ನು ಈಡೇರಿಸಬೇಕೆಂಬುದಾಗಿ ನಾವು ಒತ್ತಾಯಿಸುತ್ತೇವೆ. ಆಗಸ್ಟ್ 5ರ ಪ್ರತಿಭಟನೆ ನೌಕರರ ಧ್ವನಿ, ನೌಕರರ ಆತ್ಮವಿಲ್ಲದ ಸ್ಥಿತಿಗೆ ವಿರೋಧದ ಘೋಷಣೆಯಾಗಲಿದೆ. ಎಲ್ಲ ರಾಜ್ಯ ಸರ್ಕಾರಿ ಸಾರಿಗೆ ನೌಕರರ ಹಕ್ಕುಗಳ ರಕ್ಷಣೆಗಾಗಿ ನಡೆಯುತ್ತಿರುವ ಈ ಹೋರಾಟದ ಜೊತೆಗೆ ನಮ್ಮ ಧ್ವನಿ ಕೂಡ ಶಕ್ತಿಯಾಗಿ ನಿಲ್ಲಲಿದೆ. ಎಂದು ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು ಹೇಳಿದರು.

Related posts

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

Suddi Udaya

ಕಳೆಂಜ ರಾಜೇಶ್ ಎಂ.ಕೆ ಯವರ ಹಲ್ಲೆ ಪ್ರಕರಣ: ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲು: ಸ್ಥಳಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ್

Suddi Udaya

ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಆಕಾಶ್ ಎಸ್ ರಿಗೆ ಕಮಿಟೆಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya

ಆದಿವಾಸಿ ಸಮುದಾಯಗಳಿಗೆ ರಸ್ತೆ , ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ರಕ್ಷಿತ್ ಶಿವರಾಂ ರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮನವಿ

Suddi Udaya

ಜ.22 – 24: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ : ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!