23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಹಿಂದೂ ರುದ್ರ ಭೂಮಿಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಯಶವಂತ ಗೌಡ ಪೂರ್ಯಾಳ ಆಯ್ಕೆ


ಕೊಯ್ಯೂರು: ಇಲ್ಲಿಯ ಆದೂರು ಪೇರಾಲ್ ಪರಿಸರದಲ್ಲಿ ಸುಮಾರು ಒಂದುವರೆ ಎಕ್ರೆ ಜಾಗವನ್ನು ಹಲವು ವರ್ಷಗಳ ಹಿಂದೆ ಹಿಂದೂ ರುದ್ರ ಭೂಮಿಗಾಗಿ ಮೀಸಲಿಡಲಾಗಿತ್ತು. ಆದೂರು ಪೇರಾಲ್ ಪರಿಸರದಲ್ಲಿ ಹಲವಾರು ಹಿಂದೂ ಕುಟುಂಬಗಳು ವಾಸವಾಗಿದ್ದು ಇಲ್ಲಿ ಯಾರಾದರೂ ಅಕಸ್ಮಾತ್ ಮೃತರಾದರೆ ಅವರ ಅಂತ್ಯ ಸಂಸ್ಕಾರಕ್ಕೆ ದೂರದ ಬೆಳ್ತಂಗಡಿಗೆ ಅಥವಾ ಬೇರೆ ಕಡೆಗೆ ಕೊಂಡು ಹೋಗುವುದನ್ನು ಮನಗಂಡಂತಹ ಗ್ರಾಮ ಪಂಚಾಯತ್ ಹಾಗೂ ಊರವರು ಇದನ್ನು ಅಭಿವೃದ್ಧಿಪಡಿಸಿ ಇಲ್ಲಿ ಶವ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಿಕೊಡುವ ನಿಟ್ಟಿನಲ್ಲಿ ಇಲ್ಲಿಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಪಂಚಾಯತ್ ಸದಸ್ಯರುಗಳ ಹಾಗೂ ಊರವರ ಸಭೆಯನ್ನು ನಡೆಸಿ ಹಿಂದೂ ರುದ್ರ ಭೂಮಿಯ ಅಭಿವೃದ್ಧಿಗೆ ನೂತನವಾಗಿ ಸಮಿತಿಯನ್ನು ರಚಿಸಲಾಯಿತು.

ಗೌರವಾಧ್ಯಕ್ಷರಾಗಿ ಶ್ರೀಮತಿ ದಯಾಮಣಿ ರವೀಂದ್ರನಾಥ್ ಪೇರ್ಮುದೆ, ಅಧ್ಯಕ್ಷರಾಗಿ ಯಶವಂತ ಗೌಡ ಪೂರ್ಯಾಳ, ಪ್ರಧಾನ ಕಾರ್ಯದರ್ಶಿಯಾಗಿ ಪಿ ಚಂದ್ರಶೇಖರ ಸಾಲ್ಯಾನ್ ಹರ್ಮಾಡಿ, ಕೋಶಾಧಿಕಾರಿಯಾಗಿ ಶ್ರೀಮತಿ ಹೇಮಾವತಿ ಕಡಮ್ಮಾಜೆ, ಉಪಾಧ್ಯಕ್ಷರುಗಳಾಗಿ ವೆಂಕಣ ಆದೂರು ಪೇರಾಲ್ ಮತ್ತು ಲೋಕೇಶ್ ಗೌಡ ಪಾಂಬೆಲು, ಕಾರ್ಯದರ್ಶಿಗಳಾಗಿ ಚಂದ್ರಶೇಖರ ಗೌಡ ಉಗ್ರೋಡಿ ಮತ್ತು ಹರೀಶ್ ಗೌಡ ಬಜಿಲ ಹಾಗೂ ಸಮಿತಿ ಸದಸ್ಯರುಗಳಾಗಿ 12 ಜನರನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ದಯಮಣಿ ರವೀಂದ್ರನಾಥ್ ವಹಿಸಿದ್ದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹರೀಶ್ ಗೌಡ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್, ಪಂಚಾಯತ್ ಕಾರ್ಯದರ್ಶಿ ಪರಮೇಶ್ವರ್ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಗುತ್ತಿಗೆದಾರರಾದ ಗುಣಕರ ರೈ, ಗ್ರಾಮ ಪಂಚಾಯತ್ ಸದಸ್ಯರುಗಳು ಮತ್ತು ಊರವರು ಹಾಜರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ರವರು ಸ್ವಾಗತಿಸಿ , ವಂದಿಸಿದರು.

Related posts

ಮಾವು ಮತ್ತು ಹಲಸು ಮೇಳಕ್ಕೆ ಅರ್ಜಿ ಆಹ್ವಾನ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎಳೆನೀರು ತುಂಬಿದ ಪಿಕಪ್ ವಾಹನ ಪಲ್ಟಿ

Suddi Udaya

ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಬೈಕ್ : ಇಂದಬೆಟ್ಟು ನಿವಾಸಿ ಜೋಶನ್ ಸ್ಥಳದಲ್ಲೇ ಸಾವು

Suddi Udaya

ಕರಾಯ ಕಲ್ಲೇರಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟ : ಉಪ್ಪಿನಂಗಡಿ ಪೊಲೀಸರ ದಾಳಿ‌ ನಗದು ಸಹಿತ ಐವರು ವಶಕ್ಕೆ

Suddi Udaya

ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬಳಂಜ ಶಾಲೆಗೆ ಭೇಟಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಬಳಂಜ ಶಾಲೆಗೆ ರೂ.1ಲಕ್ಷ ಮೊತ್ತದ ಯೋಜನೆಗಳ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಭೇಟಿ

Suddi Udaya
error: Content is protected !!