23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ವೇದವ್ಯಾಸ ಶಿಶು ಮಂದಿರದಲ್ಲಿ ಆಟಿದ ಕೂಟ

ಗುರುವಾಯನಕೆರೆ: ಸಂಸ್ಕೃತಿಯ ಪಾಲನೆಯತ್ತ ಹೊಸ ಬೆಳಕನ್ನು ಹರಡುವ ನಿಟ್ಟಿನಲ್ಲಿ ನಮ್ಮ ವೇದವ್ಯಾಸ ಶಿಶು ಮಂದಿರದ ವತಿಯಿಂದ ಆಟಿದ ಕೂಟ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಮುಂಡಕೋಡಿ, ಪೆರ್ಲ ಶಾಲೆಯ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಸೇವಂತಿ ಬಿ ಕೆ ಚೆನ್ನೆಮಣೆ ಆಡುವ ಮುಖಾಂತರ ಕಾರ್ಯಕ್ರಮವನ್ನ ಉದ್ಘಾಟಿಸಿ ತುಳುನಾಡಿನಲ್ಲಿ ಆಟಿ ತಿಂಗಳಲ್ಲಿ ನಡೆಯುವ ವಿವಿಧ ಪದ್ಧತಿಯ ಬಗ್ಗೆ ಹಾಗೆ ಆಟಿ ತಿಂಗಳಲ್ಲಿ ಮಾಡುವ ವಿವಿಧ ತಿಂಡಿ ತಿನಿಸುಗಳ ಬಗ್ಗೆ ತಿಳಿಸುವ ಮೂಲಕ ಮುಂದಿನ ಮಕ್ಕಳಿಗೆ ಇದರ ಅರಿವನ್ನು ಮೂಡಿಸುವ ಅವಶ್ಯಕತೆ ಇದೆ ಎಂದು ನುಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇದವ್ಯಾಸ ಶಿಶುಮಂದಿರದ ಆಡಳಿತ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಇಂದುಮತಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸುಮಾರು 28 ಬಗೆಯ ವಿವಿಧ ಖಾದ್ಯಗಳನ್ನು ಪೋಷಕರು ತಯಾರಿಸಿ ತಂದಿದ್ದರು ಹಾಗೆ ಮಕ್ಕಳಿಗೆ ಮತ್ತು ಪೋಷಕರಿಗೆ ವಿವಿಧ ಬಗೆಯ ಆಟೋಟ ಸ್ಪರ್ಧೆಗಳನ್ನ ಶಿಶು ಮಂದಿರದ ಮಾತಾಜಿಗಳಾದ ಶ್ರೀಮತಿ ಅಶ್ವಿನಿ ಮತ್ತು ಶ್ರೀಮತಿ ರಮ್ಯಾ ಹಾಗೂ ಶ್ರೀಮತಿ ಮಂಗಳ ರತ್ನಾಕರ್ ನಡೆಸಿಕೊಟ್ಟರು.

ಮಾತೃ ಮಂಡಳಿಯ ಕಾರ್ಯದರ್ಶಿ ಶ್ರೀಮತಿ ಸ್ವಾತಿ ಸ್ವಾಗತಿಸಿದರು.ಮಾತೃ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಮಮಿತಾ ಸುಧೀರ್ ವಂದಿಸಿದರು. ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಶ್ರೀಮತಿ ಸುಧಾಮಣಿ ಕಾರ್ಯಕ್ರಮ ನಿರೂಪಿಸಿದರು.

Related posts

ಇಂದಬೆಟ್ಟು ಟೀಮ್ ದೇವನಾರಿ ಸೇವಾ ಯೋಜನೆಯಿಂದ ನೀರಿನ ಟ್ಯಾಂಕ್ ಕೊಡುಗೆ

Suddi Udaya

ಬೆಳಾಲು: ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ: ಬೈಕಿನಲ್ಲಿದ್ದವರು ಅದೃಷ್ಟವಾಶಾತ್ ಪಾರು

Suddi Udaya

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೂತನ 18ನೇ ಶಾಖೆ ಮಡಂತ್ಯಾರಿನಲ್ಲಿ ಶುಭಾರಂಭ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವಿದ್ಯಾರ್ಥಿಗಳಿಗೆ ರೂ. 25.5 ಲಕ್ಷ ಸ್ಕಾಲರ್ ಶಿಫ್ ನೀಡಿ ರೋಟರಿ ಜಿಲ್ಲೆಯಲ್ಲಿ ಮುಂಚೂಣಿಯಲ್ಲಿದೆ: ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಗವರ್ನರ್ ರೋ| ವಿಕ್ರಂ ದತ್ತಾ ಪ್ರಶಂಸೆ

Suddi Udaya

ಅಡಿಕೆ ಆಮದು ನಿಷೇಧ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ: ಮಾ.7 ರಂದು ದ.ಕ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ

Suddi Udaya

ರಾಜ್ಯಮಟ್ಟದ ಯುವಸಂಸತ್ತು ಸ್ಪರ್ಧೆ: ಎಸ್.ಡಿ.ಎಂ. ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
error: Content is protected !!