23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ವೇದವ್ಯಾಸ ಶಿಶು ಮಂದಿರದಲ್ಲಿ ಆಟಿದ ಕೂಟ

ಗುರುವಾಯನಕೆರೆ: ಸಂಸ್ಕೃತಿಯ ಪಾಲನೆಯತ್ತ ಹೊಸ ಬೆಳಕನ್ನು ಹರಡುವ ನಿಟ್ಟಿನಲ್ಲಿ ನಮ್ಮ ವೇದವ್ಯಾಸ ಶಿಶು ಮಂದಿರದ ವತಿಯಿಂದ ಆಟಿದ ಕೂಟ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಮುಂಡಕೋಡಿ, ಪೆರ್ಲ ಶಾಲೆಯ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಸೇವಂತಿ ಬಿ ಕೆ ಚೆನ್ನೆಮಣೆ ಆಡುವ ಮುಖಾಂತರ ಕಾರ್ಯಕ್ರಮವನ್ನ ಉದ್ಘಾಟಿಸಿ ತುಳುನಾಡಿನಲ್ಲಿ ಆಟಿ ತಿಂಗಳಲ್ಲಿ ನಡೆಯುವ ವಿವಿಧ ಪದ್ಧತಿಯ ಬಗ್ಗೆ ಹಾಗೆ ಆಟಿ ತಿಂಗಳಲ್ಲಿ ಮಾಡುವ ವಿವಿಧ ತಿಂಡಿ ತಿನಿಸುಗಳ ಬಗ್ಗೆ ತಿಳಿಸುವ ಮೂಲಕ ಮುಂದಿನ ಮಕ್ಕಳಿಗೆ ಇದರ ಅರಿವನ್ನು ಮೂಡಿಸುವ ಅವಶ್ಯಕತೆ ಇದೆ ಎಂದು ನುಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇದವ್ಯಾಸ ಶಿಶುಮಂದಿರದ ಆಡಳಿತ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಇಂದುಮತಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸುಮಾರು 28 ಬಗೆಯ ವಿವಿಧ ಖಾದ್ಯಗಳನ್ನು ಪೋಷಕರು ತಯಾರಿಸಿ ತಂದಿದ್ದರು ಹಾಗೆ ಮಕ್ಕಳಿಗೆ ಮತ್ತು ಪೋಷಕರಿಗೆ ವಿವಿಧ ಬಗೆಯ ಆಟೋಟ ಸ್ಪರ್ಧೆಗಳನ್ನ ಶಿಶು ಮಂದಿರದ ಮಾತಾಜಿಗಳಾದ ಶ್ರೀಮತಿ ಅಶ್ವಿನಿ ಮತ್ತು ಶ್ರೀಮತಿ ರಮ್ಯಾ ಹಾಗೂ ಶ್ರೀಮತಿ ಮಂಗಳ ರತ್ನಾಕರ್ ನಡೆಸಿಕೊಟ್ಟರು.

ಮಾತೃ ಮಂಡಳಿಯ ಕಾರ್ಯದರ್ಶಿ ಶ್ರೀಮತಿ ಸ್ವಾತಿ ಸ್ವಾಗತಿಸಿದರು.ಮಾತೃ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಮಮಿತಾ ಸುಧೀರ್ ವಂದಿಸಿದರು. ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಶ್ರೀಮತಿ ಸುಧಾಮಣಿ ಕಾರ್ಯಕ್ರಮ ನಿರೂಪಿಸಿದರು.

Related posts

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ರಕ್ಷಾ ಬಂಧನ ಆಚರಣೆ

Suddi Udaya

ಭಾರತೀಯ ಮಜ್ದೂರ್ ಸಂಘ ಕೊಕ್ಕಡ ವಲಯ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ನಾಗೇಶ್ ಹೃದಯಾಘಾತದಿಂದ ನಿಧನ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಲೆಫ್ಟಿನೆಂಟ್ ಕರ್ನಲ್ ವಿನೋಜ್ ಪಿ.ಜೆ. ಅವರಿಗೆ ಗೌರವ ಸಮರ್ಪಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಬಿವೋಕ್‌ ವಿದ್ಯಾರ್ಥಿಗಳಿಗೆ ವರ್ಡ್‌ಪ್ರೆಸ್‌ ಕಾರ್ಯಾಗಾರ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!