ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ವೇದವ್ಯಾಸ ಶಿಶು ಮಂದಿರದಲ್ಲಿ ಆಟಿದ ಕೂಟ

ಗುರುವಾಯನಕೆರೆ: ಸಂಸ್ಕೃತಿಯ ಪಾಲನೆಯತ್ತ ಹೊಸ ಬೆಳಕನ್ನು ಹರಡುವ ನಿಟ್ಟಿನಲ್ಲಿ ನಮ್ಮ ವೇದವ್ಯಾಸ ಶಿಶು ಮಂದಿರದ ವತಿಯಿಂದ ಆಟಿದ ಕೂಟ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಮುಂಡಕೋಡಿ, ಪೆರ್ಲ ಶಾಲೆಯ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಸೇವಂತಿ ಬಿ ಕೆ ಚೆನ್ನೆಮಣೆ ಆಡುವ ಮುಖಾಂತರ ಕಾರ್ಯಕ್ರಮವನ್ನ ಉದ್ಘಾಟಿಸಿ ತುಳುನಾಡಿನಲ್ಲಿ ಆಟಿ ತಿಂಗಳಲ್ಲಿ ನಡೆಯುವ ವಿವಿಧ ಪದ್ಧತಿಯ ಬಗ್ಗೆ ಹಾಗೆ ಆಟಿ ತಿಂಗಳಲ್ಲಿ ಮಾಡುವ ವಿವಿಧ ತಿಂಡಿ ತಿನಿಸುಗಳ ಬಗ್ಗೆ ತಿಳಿಸುವ ಮೂಲಕ ಮುಂದಿನ ಮಕ್ಕಳಿಗೆ ಇದರ ಅರಿವನ್ನು ಮೂಡಿಸುವ ಅವಶ್ಯಕತೆ ಇದೆ ಎಂದು ನುಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇದವ್ಯಾಸ ಶಿಶುಮಂದಿರದ ಆಡಳಿತ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಇಂದುಮತಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸುಮಾರು 28 ಬಗೆಯ ವಿವಿಧ ಖಾದ್ಯಗಳನ್ನು ಪೋಷಕರು ತಯಾರಿಸಿ ತಂದಿದ್ದರು ಹಾಗೆ ಮಕ್ಕಳಿಗೆ ಮತ್ತು ಪೋಷಕರಿಗೆ ವಿವಿಧ ಬಗೆಯ ಆಟೋಟ ಸ್ಪರ್ಧೆಗಳನ್ನ ಶಿಶು ಮಂದಿರದ ಮಾತಾಜಿಗಳಾದ ಶ್ರೀಮತಿ ಅಶ್ವಿನಿ ಮತ್ತು ಶ್ರೀಮತಿ ರಮ್ಯಾ ಹಾಗೂ ಶ್ರೀಮತಿ ಮಂಗಳ ರತ್ನಾಕರ್ ನಡೆಸಿಕೊಟ್ಟರು.

ಮಾತೃ ಮಂಡಳಿಯ ಕಾರ್ಯದರ್ಶಿ ಶ್ರೀಮತಿ ಸ್ವಾತಿ ಸ್ವಾಗತಿಸಿದರು.ಮಾತೃ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಮಮಿತಾ ಸುಧೀರ್ ವಂದಿಸಿದರು. ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಶ್ರೀಮತಿ ಸುಧಾಮಣಿ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳದಲ್ಲಿ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನ

Suddi Udaya

ಬಿಜೆಪಿ ಕುಕ್ಕೇಡಿ ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ವೇಣೂರು;ಪಡ್ಡoದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ

Suddi Udaya

ಜೂ.9: ಪಡಂಗಡಿಯಲ್ಲಿ ಉಚಿತ ವೈದ್ಯಕೀಯ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಹಾಗೂ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

Suddi Udaya

ಬೆಳ್ತಂಗಡಿ ಹಿಂದುಳಿದ ವರ್ಗ ಮೋರ್ಚಾದ ವತಿಯಿಂದ ಫಂಡಿಜೆವಾಳ್ಯ ಶಾಲೆಯಲ್ಲಿ ಸ್ವಚ್ಛತೆ ಹಾಗೂ ಗಿಡ ನೆಡುವ ಕಾರ್ಯಕ್ರಮ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಮೆಹಂದಿ ಡಿಸೈನ್ ಹಾಗೂ ಮದುಮಗಳ ಶೃಂಗಾರ ತರಬೇತಿಯ ಸಮಾರೋಪ

Suddi Udaya
error: Content is protected !!