July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ವೇದವ್ಯಾಸ ಶಿಶು ಮಂದಿರದಲ್ಲಿ ಆಟಿದ ಕೂಟ

ಗುರುವಾಯನಕೆರೆ: ಸಂಸ್ಕೃತಿಯ ಪಾಲನೆಯತ್ತ ಹೊಸ ಬೆಳಕನ್ನು ಹರಡುವ ನಿಟ್ಟಿನಲ್ಲಿ ನಮ್ಮ ವೇದವ್ಯಾಸ ಶಿಶು ಮಂದಿರದ ವತಿಯಿಂದ ಆಟಿದ ಕೂಟ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಮುಂಡಕೋಡಿ, ಪೆರ್ಲ ಶಾಲೆಯ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಸೇವಂತಿ ಬಿ ಕೆ ಚೆನ್ನೆಮಣೆ ಆಡುವ ಮುಖಾಂತರ ಕಾರ್ಯಕ್ರಮವನ್ನ ಉದ್ಘಾಟಿಸಿ ತುಳುನಾಡಿನಲ್ಲಿ ಆಟಿ ತಿಂಗಳಲ್ಲಿ ನಡೆಯುವ ವಿವಿಧ ಪದ್ಧತಿಯ ಬಗ್ಗೆ ಹಾಗೆ ಆಟಿ ತಿಂಗಳಲ್ಲಿ ಮಾಡುವ ವಿವಿಧ ತಿಂಡಿ ತಿನಿಸುಗಳ ಬಗ್ಗೆ ತಿಳಿಸುವ ಮೂಲಕ ಮುಂದಿನ ಮಕ್ಕಳಿಗೆ ಇದರ ಅರಿವನ್ನು ಮೂಡಿಸುವ ಅವಶ್ಯಕತೆ ಇದೆ ಎಂದು ನುಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇದವ್ಯಾಸ ಶಿಶುಮಂದಿರದ ಆಡಳಿತ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಇಂದುಮತಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸುಮಾರು 28 ಬಗೆಯ ವಿವಿಧ ಖಾದ್ಯಗಳನ್ನು ಪೋಷಕರು ತಯಾರಿಸಿ ತಂದಿದ್ದರು ಹಾಗೆ ಮಕ್ಕಳಿಗೆ ಮತ್ತು ಪೋಷಕರಿಗೆ ವಿವಿಧ ಬಗೆಯ ಆಟೋಟ ಸ್ಪರ್ಧೆಗಳನ್ನ ಶಿಶು ಮಂದಿರದ ಮಾತಾಜಿಗಳಾದ ಶ್ರೀಮತಿ ಅಶ್ವಿನಿ ಮತ್ತು ಶ್ರೀಮತಿ ರಮ್ಯಾ ಹಾಗೂ ಶ್ರೀಮತಿ ಮಂಗಳ ರತ್ನಾಕರ್ ನಡೆಸಿಕೊಟ್ಟರು.

ಮಾತೃ ಮಂಡಳಿಯ ಕಾರ್ಯದರ್ಶಿ ಶ್ರೀಮತಿ ಸ್ವಾತಿ ಸ್ವಾಗತಿಸಿದರು.ಮಾತೃ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಮಮಿತಾ ಸುಧೀರ್ ವಂದಿಸಿದರು. ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಶ್ರೀಮತಿ ಸುಧಾಮಣಿ ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್.ವೈ.ಎಸ್. ಮಡಂತ್ಯಾರ್ ಸರ್ಕಲ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಸೇಸಮ್ಮ ನಿಧನ

Suddi Udaya

ಉಜಿರೆಯಲ್ಲಿ ಹಲಸು ಮತ್ತು ಹಣ್ಣಿನ ಮೇಳದ ಉದ್ಘಾಟನೆ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ವೈಭವ ಪೂರ್ಣವಾಗಿ ನಡೆದ ಕಾಲಾವಧಿ ನೇಮೋತ್ಸವ

Suddi Udaya

ಅರಸಿನಮಕ್ಕಿ: ಬರಮೇಲು ನಿವಾಸಿ ನಾಗಮ್ಮ ನಿಧನ

Suddi Udaya

ಇಂದಬೆಟ್ಟು: ಕಜೆ ಶಾಂತಿನಗರ ಹಾಲು ಉತ್ಪಾದಕರ ಸಹಕಾರ ಸಂಘ-ಅಧ್ಯಕ್ಷರಾಗಿ ಉಮೇಶ್ ಗೌಡ, ಉಪಾಧ್ಯಕ್ಷರಾಗಿ ಪ್ರೇಮಲತಾ

Suddi Udaya
error: Content is protected !!