September 6, 2026
ಪ್ರಮುಖ ಸುದ್ದಿ

ತಣ್ಣೀರುಪಂತ ಪ್ಯಾಕ್ಸ್ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ

ತಣ್ಣೀರುಪಂತ: ತಣ್ಣೀರುಪಂತ ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಆ.4 ರಂದು ತಣ್ಣೀರುಪಂತ ಪ್ಯಾಕ್ಸ್ ನ ಕನಸು ರೈತ ಸಭಾಭವನದಲ್ಲಿ ನಡೆಯಿತು.

ಶಾಸಕ ಹರೀಶ್ ಪೂಂಜ ಮಾತನಾಡಿ ಅನೇಕ ವರ್ಷಗಳ ಬಳಿಕ ಸಹಕಾರ ಭಾರತಿ ತಣ್ಣೀರುಪಂತ ಪ್ಯಾಕ್ಸ್ ನ ಅಧಿಕಾರದ ಚುಕ್ಕಾಣಿ ಹಿಡಿದು ಇತಿಹಾಸ ಸೃಷ್ಟಿಸಿದೆ. ಚುನಾವಣೆಯಲ್ಲಿ ೧೨ ಅಭ್ಯರ್ಥಿಗಳು ಜಯ ಗಳಿಸಲು ಹಿರಿಯ ಕಾರ್ಯಕರ್ತರ ಬದ್ದತೆ ಹಾಗೂ ಯುವ ಕಾರ್ಯಕರ್ತರು ಅವಿರತ ಪರಿಶ್ರಮಕ್ಕೆ‌ ಅಭಿವಂದನೆ ಎಂದರು.

ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಕಣಿಯೂರು ಮಹಾ ಶಕ್ತಿಕೇಂದ್ರ ಅಧ್ಯಕ್ಷ ಬಾಲಕೃಷ್ಣ ಗೌಡ ಮುಗೇರಡ್ಕ, ಪ್ರಧಾನ ಕಾರ್ಯದರ್ಶಿ ಮಹೇಶ್ ಕೋಟ್ಯಾನ್ ಜೆಂಕ್ಯಾರ್ , ಉಪಾಧ್ಯಕ್ಷ ಸುನಿಲ್ ಅಣವು. ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಾಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಕರುಣಾಕರ ಸುವರ್ಣ, ಬಾರ್ಯ ಪ್ಯಾಕ್ಸ್ ಅಧ್ಯಕ್ಷ ಚುನಾವಣಾ ಪ್ರಭಾರಿ ಪ್ರವೀಣ್ ರೈ, ತಣ್ಣೀರುಪಂತ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರಿಯಾ,
ನಿರ್ದೇಶಕರಾದ ಕೃಷ್ಣಪ್ಪ ಗೌಡ, ರೋಹಿತ್ ಶೆಟ್ಟಿ, ಸಾಮ್ರಾಟ್, ಪ್ರಭಾಕರ್ ಪೊಸೊದೊಂಡಿ, ಜಯಂತಿ ಪಾಲೇದು, ಸರೋಜಿನಿ, ರಜನಿನಾಥ್ ಮುಂದಿಲ, ಸುರೇಶ್ ಹಾಗೂ ಶ್ರೀನಿವಾಸ್, ಶಕ್ತಿ ಕೇಂದ್ರದ ಪ್ರಮುಖರು ಉಪಸ್ಥಿತರಿದ್ದರು.
ಬೊಮ್ಮಯ್ಯ ವಂದೇ ಮಾತರಂ ಗೀತೆಯನ್ನು ಹಾಡಿದರು.
ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು. ನೂತನ ಆಡಳಿತ ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷ, ನಿರ್ದೇಶಕರನ್ನು ಕೇಸರಿ ಶಾಲು ಹೊದಿಸಿ ಅಭಿನಂದಿಸಲಾಯಿತು.

Related posts

ಮಂಗಳೂರು ಹಾಲು ಒಕ್ಕೂಟದ ನೌಕರರ ಟ್ರಸ್ಟಿನ ವತಿಯಿಂದ ಅಶೋಕ ಕುಮಾರ್ ಕುಟುಂಬಕ್ಕೆರೂ1.50 ಲಕ್ಷ ಚೆಕ್ ಹಸ್ತಾಂತರ

Suddi Udaya

ಬೆಳಗಾವಿ ಅಧಿವೇಶನ: ಅಧಿಕ ಮಳೆಯಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ: ಪ್ರತಾಪ್ ಸಿಂಹ ನಾಯಕ್

Suddi Udaya

ಮಾ.18-23: ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ಶತಾಯುಷಿ ಬಂಗಾಡಿ ರಾಜಮನೆತನದ ರವಿರಾಜ ಬಲ್ಲಾಳ್ ಅವರಿಗೆ ಗೌರವಾರ್ಪಣೆ

Suddi Udaya

ಶಿಶಿಲದಲ್ಲಿ ನರೇಂದ್ರ ಮೋದಿಯವರ ಪರಿಕಲ್ಪನೆಯಂತೆ ಒಂಬತ್ತು ಜನ ಮಹಿಳೆಯರಿಂದ ಪ್ರಥಮ ಮತದಾನ

Suddi Udaya

ಯೂಟ್ಯೂಬ್ ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಸಂಬಂಧ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ಮಹೇಶ್ ಶೆಟ್ಟಿ ತಿಮರೋಡಿ ಯವರನ್ನು ಬಂಧಿಸಿದ ಬ್ರಹ್ಮಾವರ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಜಾಮೀನು ಅರ್ಜಿ ವಜಾಗೊಳಿಸಿ ನ್ಯಾಯಾಂಗ ಬಂಧನ

Suddi Udaya
error: Content is protected !!