37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ತಣ್ಣೀರುಪಂತ ಪ್ಯಾಕ್ಸ್ ಆಡಳಿತ ಮಂಡಳಿಗೆ ನಡೆದ ಚುನಾವಣೆ; ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ – ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಸಹಕಾರ ಭಾರತಿ ಅಧಿಕಾರದ ಚುಕ್ಕಾಣಿ ಹಿಡಿದು ಇತಿಹಾಸ ಸೃಷ್ಟಿಸಿದೆ – ಹರೀಶ್ ಪೂಂಜ

ತಣ್ಣೀರುಪಂತ: ತಣ್ಣೀರುಪಂತ ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಆ.4 ರಂದು ತಣ್ಣೀರುಪಂತ ಪ್ಯಾಕ್ಸ್ ನ ಕನಸು ರೈತ ಸಭಾಭವನದಲ್ಲಿ ನಡೆಯಿತು.

ಶಾಸಕ ಹರೀಶ್ ಪೂಂಜ ಮಾತನಾಡಿ ಅನೇಕ ವರ್ಷಗಳ ಬಳಿಕ ಸಹಕಾರ ಭಾರತಿ ತಣ್ಣೀರುಪಂತ ಪ್ಯಾಕ್ಸ್ ನ ಅಧಿಕಾರದ ಚುಕ್ಕಾಣಿ ಹಿಡಿದು ಇತಿಹಾಸ ಸೃಷ್ಟಿಸಿದೆ. ಚುನಾವಣೆಯಲ್ಲಿ ೧೨ ಅಭ್ಯರ್ಥಿಗಳು ಜಯ ಗಳಿಸಲು ಹಿರಿಯ ಕಾರ್ಯಕರ್ತರ ಬದ್ದತೆ ಹಾಗೂ ಯುವ ಕಾರ್ಯಕರ್ತರು ಅವಿರತ ಪರಿಶ್ರಮಕ್ಕೆ‌ ಅಭಿವಂದನೆ ಎಂದರು.

ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಕಣಿಯೂರು ಮಹಾ ಶಕ್ತಿಕೇಂದ್ರ ಅಧ್ಯಕ್ಷ ಬಾಲಕೃಷ್ಣ ಗೌಡ ಮುಗೇರಡ್ಕ, ಪ್ರಧಾನ ಕಾರ್ಯದರ್ಶಿ ಮಹೇಶ್ ಕೋಟ್ಯಾನ್ ಜೆಂಕ್ಯಾರ್ , ಉಪಾಧ್ಯಕ್ಷ ಸುನಿಲ್ ಅಣವು. ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಾಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಕರುಣಾಕರ ಸುವರ್ಣ, ಬಾರ್ಯ ಪ್ಯಾಕ್ಸ್ ಅಧ್ಯಕ್ಷ ಚುನಾವಣಾ ಪ್ರಭಾರಿ ಪ್ರವೀಣ್ ರೈ, ತಣ್ಣೀರುಪಂತ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರಿಯಾ,ನಿರ್ದೇಶಕರಾದ ಕೃಷ್ಣಪ್ಪ ಗೌಡ, ರೋಹಿತ್ ಶೆಟ್ಟಿ, ಸಾಮ್ರಾಟ್, ಪ್ರಭಾಕರ್ ಪೊಸೊದೊಂಡಿ, ಜಯಂತಿ ಪಾಲೇದು, ಸರೋಜಿನಿ, ರಜನಿನಾಥ್ ಮುಂದಿಲ, ಸುರೇಶ್ ಹಾಗೂ ಶ್ರೀನಿವಾಸ್, ಶಕ್ತಿ ಕೇಂದ್ರದ ಪ್ರಮುಖರು ಉಪಸ್ಥಿತರಿದ್ದರು.

ಬೊಮ್ಮಯ್ಯ ವಂದೇ ಮಾತರಂ ಗೀತೆಯನ್ನು ಹಾಡಿದರು.ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು. ನೂತನ ಆಡಳಿತ ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷ, ನಿರ್ದೇಶಕರನ್ನು ಕೇಸರಿ ಶಾಲು ಹೊದಿಸಿ ಅಭಿನಂದಿಸಲಾಯಿತು.

Related posts

ಮದ್ದಡ್ಕ: ಶ್ರೀರಾಮ ಸೇವಾ ಸಮಿತಿ – ವಿಶ್ವ ಹಿಂದೂ ಪರಿಷತ್ ಭಜರಂಗದಳ ಆಶ್ರಯದಲ್ಲಿ ರಾಮನವಮಿ ಉತ್ಸವದ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಪಾಡ್ದನ,ಸಂಧೀ ಮುಂತಾದ ಅನೇಕ ಜನಪದೀಯ ಸಾಂಸ್ಕೃತಿಕ ಬೇರುಗಳು ಮುಂದಿನ ತಲೆಮಾರಿಗೆ ತಿಳಿಸುವ ನಿಟ್ಟಿನಲ್ಲಿ ಹೆಗ್ಗೋಡಿನ ನೀನಾಸಂ ,ರಂಗಾಯಣದಂತಹ ರಂಗ ಶಾಲೆ ತೆರೆಯುವ ಯೋಚನೆ: ಸಂಪತ್ ಬಿ ಸುವರ್ಣ

Suddi Udaya

ಗೇರುಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಮಾರಿಪೂಜೆ

Suddi Udaya

ಗುರುವಾಯನಕೆರೆ 30 ನೇ ವರ್ಷದ ಸಾರ್ವಜನಿಕ‌ ಶ್ರೀ ಗಣೇಶೋತ್ಸವ: ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರಿಂದ ಗಣಪತಿಗೆ ಬೆಳ್ಳಿ ಕಿರೀಟ ಸಮರ್ಪಣೆ

Suddi Udaya

ನಮ್ಮೂರ ಜಾತ್ರೆ ಕುಂಭಶ್ರೀ ವೈಭವ, ಶಾಲೆಯ ವಾರ್ಷಿಕೋತ್ಸವ: ಮಾತಾ-ಪಿತಾ-ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಡಿ.ಕೆ.ಆರ್. ಡಿ.ಎಸ್ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya
error: Content is protected !!