37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ ಬಿವೋಕ್‌ ವಿದ್ಯಾರ್ಥಿಗಳಿಗೆ ಸ್ಟಾಪ್‌ ಮೋಶನ್‌ ಅನಿಮೇಶನ್‌ ಕಾರ್ಯಾಗಾರ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವ ಕಾಲೇಜು (ಸ್ವಾಯತ್ತ), ಉಜಿರೆ ಇದರ ಬಿ. ವೋಕ್‌ ಡಿಜಿಟಲ್‌ ಮೀಡಿಯಾ & ಫಿಲ್ಮ್‌ ಮೇಕಿಂಗ್‌ ವಿಭಾಗ ಹಾಗೂ ಧರ್ಮಸ್ಥಳದ ಮಂಜುಷಾ ಪುರಾತತ್ತ್ವ ಸಂಗ್ರಹಾಲಯದ ಸಹಭಾಗಿತ್ವದಲ್ಲಿ ಜುಲೈ 30 ರಿಂದ ಆಗಸ್ಟ್ 2 ರವರೆಗೆ ವಿದ್ಯಾರ್ಥಿಗಳಿಗೆ ʼಆನಿಮೇಟೆಡ್ ಆರ್ಟಿಫ್ಯಾಕ್ಟ್ಸ್ʼ ಎಂಬ ವಿಶಿಷ್ಟ ಸ್ಟಾಪ್‌ಮೋಶನ್ ಅನಿಮೇಷನ್ ಕಾರ್ಯಾಗಾರ ನಡೆಯಿತು.

ಡಿಜಿಟಲ್‌ ಮೀಡಿಯಾ & ಫಿಲ್ಮ್‌ ಮೇಕಿಂಗ್‌ ವಿಭಾಗ ಹಾಗೂ ಮಂಜುಷಾ ವಸ್ತುಸಂಗ್ರಹಾಲಯದ ನಡುವೆ ಇರುವ ಒಡಂಬಡಿಕೆಯ ಭಾಗವಾಗಿ ಈ ಕಾರ್ಯಾಗಾರ ನಡೆಯಿತು. ವಿದ್ಯಾರ್ಥಿಗಳು ಮಣ್ಣಿನ ಕ್ಲೇ ಬಳಸಿ ವಿವಿಧ ಪ್ರತಿಕೃತಿಗಳನ್ನು ರಚಿಸಿ, ಅವುಗಳ ಸ್ಟಾಪ್‌ ಮೋಶನ್‌ ಸಿನಿಮಾವನ್ನು ನಿರ್ಮಾಣ ಮಾಡಿದರು. ಒಟ್ಟು ಆರು ತಂಡಗಳಾಗಿ ವಿದ್ಯಾರ್ಥಿಗಳನ್ನು ವಿಂಗಡಿಸಿ, ವಿವಿಧ ಕಿರುಚಿತ್ರಗಳನ್ನು ನಿರ್ಮಿಸಲಾಯಿತು. ಸುಮೇಧ ಮತ್ತು ತಂಡ ರಚಿಸಿದ ಸಿನಿಮಾಗೆ ವಿಶೇಷ ಪುರಸ್ಕಾರ ನೀಡಲಾಯಿತು.

ಆಗಸ್ಟ್ 2ರಂದು ನಡೆದ ಸಮಾರೋಪ ಸಮಾರಂಭದಲ್ಲಿ ಎಸ್‌ಡಿಎಂ ಕಾಲೇಜಿನ ಬಿಸಿಎ ವಿಭಾಗದ ಮುಖ್ಯಸ್ಥ ಶೈಲೇಶ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಮಂಜುಷಾ ವಸ್ತುಸಂಗ್ರಹಾಲಯದ ನಿರ್ದೇಶಕ ರಿತೇಶ್ ಶರ್ಮಾ, ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ಮುಖ್ಯಸ್ಥ ಮಾಧವ ಹೊಳ್ಳ ಮತ್ತು ವಿಭಾಗದ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್ ಸಂಸ್ಥೆಯಲ್ಲಿ ಮನ್ಸೂನ್ ಆಫರ್ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಹೊಸ ನಿರೀಕ್ಷೆ ಮೂಡಿಸಿದ ಸಿನೆಮಾ ‘ದಸ್ಕತ್’; ಗ್ರಾಮೀಣ ಭಾಗದ ಸಂಸ್ಕೃತಿ,ಸಂಘರ್ಷ,ಸಂಭ್ರಮದ ಕಥೆ ಹೇಳುವ ದಸ್ಕತ್ ಚಿತ್ರಕ್ಕೆ ಸಿನಿಪ್ರಿಯರಿಂದ ಉತ್ತಮ ಸ್ಪಂದನೆ

Suddi Udaya

ಸುಲ್ಕೇರಿಯಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರ ಭೇಟಿ ಕಾರ್ಯಕ್ರಮ

Suddi Udaya

ಉಜಿರೆ ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ಕಾರ್ಯದರ್ಶಿಯಾಗಿ ಉದಯ ಮಾಚಾರ್ ಆಯ್ಕೆ‌

Suddi Udaya

ಇಂದು (ಜ.10): ಮುಂಡಾಜೆ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಸಾಮೂಹಿಕ ಆರತಿ ಕಾರ್ಯಕ್ರಮ

Suddi Udaya
error: Content is protected !!