30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಶಿಕ್ಷಕ ರಕ್ಷಕ ಸಂಘದ ಸಭೆ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ನಿಟ್ಟಡೆ ವೇಣೂರು ಇಲ್ಲಿನ 2025-26 ನೇ ಸಾಲಿನ ಪೂರ್ವ ಪ್ರಾಥಮಿಕ, ಪ್ರಾಥಮಿಕ ಪ್ರೌಢಶಾಲಾ, ಕಾಲೇಜು ಇದರ ಶಿಕ್ಷಕ ರಕ್ಷಕ ಸಂಘದ ಸಭೆಯು ಆ. 02 ರಂದು ನಡೆಯಿತು.ಈ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಗೋಪಾಲ ಶೆಟ್ಟಿ ಆಯ್ಕೆಯಾದರು.ಶಾಲಾ ಶಿಕ್ಷಕ ರಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಚಂದ್ರಶೇಖರ ಅಯ್ಕೆಗೊಂಡರು. ಅದೇ ರೀತಿ ಉಪಾಧ್ಯಕ್ಷರು, ಸದಸ್ಯರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪೀಠೋಪಕರಣ ನೀಡಿ ಸಹಕರಿಸಿದ ಚಂದ್ರ ಶೇಖರ ಇವರಿಗೆ ಗೌರವಿಸಲಾಯಿತು.

ರಷ್ಯಾದಲ್ಲಿ ಎಂ ಬಿ ಬಿ ಎಸ್ ಮಾಡುತ್ತಿರುವ ಶಾಲಾ ಹಳೆ ವಿದ್ಯಾರ್ಥಿ ಪೂಜಿತ್ ಕುಲಾಲ್ ಇವರು ಮಕ್ಕಳಿಗೆ ಮೊಬೈಲ್ ನೀಡದೆ ಅವರ ಉತ್ತಮ ಭವಿಷ್ಯ ವನ್ನು ರೂಪಿಸಿಕೊಳ್ಳಲು ಅವಕಾಶ ಮಾಡಿಕೊಡಿ ಎಂದು ಪೋಷಕರಿಗೆ ಕಿವಿ ಮಾತು ನೀಡಿದರು.

ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡ ಶಾಲಾ ಸಂಸ್ಥಾಪಕ ಗಿರೀಶ್ ಕೆ ಹೆಚ್ ಕುಂಭಶ್ರೀಯು ಇಷ್ಟು ಎತ್ತರಕ್ಕೆ ಬೆಳೆಯಬೇಕಾದರೆ ಪೋಷಕರ ಸಹಕಾರವೇ ಕಾರಣ ಎಂದರು. ಸಭೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಓಮನ, ಮಾಜಿ ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಸುಜಾತ, ಕುಂಭಶ್ರೀ ವೈಭವ ಸಮಿತಿಯ ಅಧ್ಯಕ್ಷ ಹರೀಶ್ ಪೊಕ್ಕಿ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಮಮತಾ ಶಾಂತಿ, ಪ್ರಾಥಮಿಕ ವಿಭಾಗದ ಶ್ರೀಮತಿ ಶುಭ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶೋಭಾ ಎಲ್. ಎನ್. ರಾವ್ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಮತ್ತು ಪೋಷಕರು ಉಪಸ್ಥಿತರಿದ್ದರು.

ಪ್ರಾಥಮಿಕ ವಿಭಾಗದ ಶಿಕ್ಷಕಿ ಶ್ರೀಮತಿ ಭವಾನಿ ದಿವ್ಯ ಮತ್ತು ಪ್ರೌಢಶಾಲಾ ವಿಭಾಗದ ಶಿಕ್ಷಕ ಸುಮನ್ ನಿರೂಪಿಸಿ, ಪ್ರೌಢಶಾಲಾ ವಿಭಾಗದ ಶಿಕ್ಷಕಿ ಶ್ರೀಮತಿ ಅಕ್ಷತ ಸ್ವಾಗತಿಸಿ, ಪ್ರಾಥಮಿಕ ವಿಭಾಗದ ಶಿಕ್ಷಕಿ ಶ್ವೇತ ಬಿ ವಂದಿಸಿದರು.

Related posts

ಕಡಿರುದ್ಯಾವರ ದ. ಕ. ಜಿ. ಪಂ ಹಿ. ಪ್ರಾ ಶಾಲೆಯಲ್ಲಿ ಎಸ್.ಡಿ.ಎಮ್.ಸಿ, ಪೋಷಕರ ಸಭೆ ಹಾಗೂ ಶಾಲಾ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಸೇವೆಯಾಟ ಪ್ರಾರಂಭದ ಸಭಾ ಕಾರ್ಯಕ್ರಮ

Suddi Udaya

ಇಂದು (ಜ.30) ಸಂಜೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ: ಪುಂಜಾಲಕಟ್ಟೆಯಿಂದ ಧರ್ಮಸ್ಥಳದವರೆಗೆ ಬೈಕ್ ರ್‍ಯಾಲಿ ಮೂಲಕ ಸ್ವಾಗತ

Suddi Udaya

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

Suddi Udaya

ನವೋದಯ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಕೂಸಪ್ಪ ಕೊಯ್ಯೂರು ಅಸೌಖ್ಯದಿಂದ ನಿಧನ

Suddi Udaya

ನೈಋತ್ಯ ರೈಲ್ವೆಯ ಡಿಆರ್‌ಯುಸಿಸಿ ಸದಸ್ಯರಾಗಿ ಬಂಗಾಡಿಯ ರಾಜೇಶ್ ಪುದುಶೇರಿ ನೇಮಕ

Suddi Udaya
error: Content is protected !!