ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ ಇದರ 38ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ದೇವದಾಸ್ ಶೆಟ್ಟಿ ಬಿರ್ಮನೊಟ್ಟು ಬಳಂಜ ದೇವಸ್ಥಾನದಲ್ಲಿ ಆ. 4 ರಂದು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಯುವ ಉದ್ಯಮಿ ಗುರುಪ್ರಸಾದ್ ಹೆಗ್ಡೆ ದರಿಮಾರು ಇವರ ಅಧ್ಯಕ್ಷತೆಯಲ್ಲಿ ಈ ವರ್ಷದ ಗಣೇಶೋತ್ಸವ ನಡೆಯಲಿದೆ.
ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಗುರುಪ್ರಸಾದ್ ಹೆಗ್ಡೆ, ಪ್ರ.ಕಾರ್ಯದರ್ಶಿ ಯಶೋಧರ ಶೆಟ್ಟಿ, ಪ್ರಮುಖರಾದ ಸತೀಶ್ ರೈ ಬಾರ್ದಡ್ಕ, ತಿಮ್ಮಪ್ಪ ಪೂಜಾರಿ, ಪ್ರವೀಣ್ ಕುಮಾರ್ ಹೆಚ್.ಎಸ್, ಪ್ರಮೋದ್ ಕುಮಾರ್ ಜೈನ್, ರಂಜಿತ್ ಹೆಚ್.ಡಿ ,ವಿಶ್ವನಾಥ ಹೊಳ್ಳ, ರಾಜೇಂದ್ರ ಶೆಟ್ಟಿ, ಹೆಚ್.ದೇಜಪ್ಪ ಪೂಜಾರಿ, ಜಗದೀಶ್ ರೈ ಹಾನಿಂಜ, ಯೋಗೀಶ್ ಕೊಂಗುಳ, ವಿಜಯ ಹೆಗ್ಡೆ ಬಳಂಜ ಹಾಗೂ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.











