23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮನೆಯೊಳಗೆ ಅಕ್ರಮ ಗಾಂಜಾ ದಾಸ್ತಾನು: ಪುಂಜಾಲಕಟ್ಟೆ ಪೊಲೀಸರಿಂದ ದಾಳಿ

ಬೆಳ್ತಂಗಡಿ : ಅಕ್ರಮವಾಗಿ ಕಟ್ಟಡದೊಳಗಡೆ ದಾಸ್ತಾನು ಇರಿಸಿದ್ದ ಗಾಂಜಾವನ್ನು ಪುಂಜಾಲಕಟ್ಟೆ ಪೊಲೀಸರು ದಾಳಿ ಮಾಡಿದ್ದು, ಶೇಖರಿಸಿಟ್ಟ ಗಾಂಜಾವನ್ನು ಪತ್ತೆಹಚ್ಚಿ ದಾಳಿ ವೇಳೆ ಆರೋಪಿ ಪರಾರಿಯಾದ ಘಟನೆ ಆ. 3ರಂದು ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದಡ್ಕ ಚಿಲಿಂಬಿ ಎಂಬಲ್ಲಿ ರಫೀಕ್ ಎಂಬಾತನ ಮನೆಯೊಳಗೆ 160 ಗ್ರಾಂ ಗಾಂಜಾ ಶೇಖರಿಸಿಟ್ಟ ಬಗ್ಗೆ ಪುಂಜಾಲಕಟ್ಟೆ ಪಿಎಸ್ಐ ಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಗಾಂಜಾ ವಶಕ್ಕೆ ಪಡೆದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ8C,20B NDPS Act ಅಡಿಯಲ್ಲಿ ಆರೋಪಿ ರಫೀಕ್ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿ ರಫೀಕ್ ವಿರುದ್ಧ ಈ ಹಿಂದೆ ಹಲವು ಗಾಂಜಾ ಪ್ರಕರಣ ದಾಖಲಾಗಿದೆ.

ಘಟನೆ ವಿವರ: ಆಗಸ್ಟ್ 03 ರಂದು 06:45 ಗಂಟೆಗೆ ಪುಂಜಾಲಕಟ್ಟೆ ಪಿಎಸ್ಐ ರಾಜೇಶ್.ಕೆ.ವಿ ಸಿಬ್ಬಂದಿಗಳೊಂದಿಗೆ ಪಣಕಜೆ ಎಂಬಲ್ಲಿ ರೌಂಡ್ಸ್ ಕರ್ತವ್ಯದಲ್ಲಿರುವಾಗ ದೊರೆತ ಖಚಿತ ಮಾಹಿತಿಯಂತೆ ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಮದ್ದಡ್ಕ ಚಿಲಿಂಬಿ ಎಂಬಲ್ಲಿ ನಿರ್ಮಾಣ ಹಂತದ ಛಾವಣಿ ಇಲ್ಲದ ಕಟ್ಟಡದೊಳಗಡೆ ರಫೀಕ್ ಎಂಬಾತನು ಅಕ್ರಮವಾಗಿ ಸುಮಾರು ರೂ.15,000 ಮೌಲ್ಯದ ಒಟ್ಟು 160 ಗ್ರಾಂ ತೂಕದ ಗಾಂಜಾದ ಎಲೆ ಮೊಗ್ಗು, ಬೀಜವನ್ನು ತಂದಿಟ್ಟಿದ್ದನ್ನು ತಹಶೀಲ್ದಾರರು ಬೆಳ್ತಂಗಡಿ ಹಾಗೂ ಪಂಚರ ಸಮಕ್ಷಮ ವಿವರವಾದ ಮಹಜರು ನಡೆಸಿ ವಶಪಡಿಸಿಕೊಂಡು ಬೆಳ್ತಂಗಡಿ ಠಾಣಾ ಸರಹದ್ದಿನ ಆಧಾರದಲ್ಲಿ ಮಹಜರು ಹಾಗೂ ವರದಿಯನ್ನು ಮುಂದಿನ ಕ್ರಮದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.

Related posts

ಮಾನವನ ವರ್ತನೆಯಲ್ಲಿ ಕೃತಕ ಬುದ್ಧಿಮತ್ತೆಯ ಪಾತ್ರ ಮತ್ತು ಭವಿಷ್ಯ: ಅಂತಾರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಕಕ್ಕಿಂಜೆ: ಸಿದ್ದಿಕ್ ಯು.ಪಿ. ಮಾಲಕತ್ವದ ವಾಯುಮಾಲಿನ್ಯ ತಪಾಸಣಾ ಕೇಂದ್ರ ಉದ್ಘಾಟನೆ

Suddi Udaya

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಶ್ರಿ ಕ್ಷೇತ್ರ ಎರ್ನೋಡಿ :78 ನೇ ಸ್ವಾತಂತ್ರೋತ್ಸವ

Suddi Udaya

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

Suddi Udaya

ಮಡಂತ್ಯಾರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದಿಂದ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ: ಡಯಾಲಿಸಿಸ್ ಕೇಂದ್ರದ ಕೊರತೆಗಳಿಗೆ ಮುಕ್ತಿ : ಆರೋಗ್ಯ ಸಚಿವರು, ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮತ್ತು ರೋಟರಿ ಸಂಸ್ಥೆಯವರಿಗೆ ಬಂಗೇರರವರಿಂದ ಅಭಿನಂದನೆ

Suddi Udaya
error: Content is protected !!