26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮನೆಯೊಳಗೆ ಅಕ್ರಮ ಗಾಂಜಾ ದಾಸ್ತಾನು: ಪುಂಜಾಲಕಟ್ಟೆ ಪೊಲೀಸರಿಂದ ದಾಳಿ

ಬೆಳ್ತಂಗಡಿ : ಅಕ್ರಮವಾಗಿ ಕಟ್ಟಡದೊಳಗಡೆ ದಾಸ್ತಾನು ಇರಿಸಿದ್ದ ಗಾಂಜಾವನ್ನು ಪುಂಜಾಲಕಟ್ಟೆ ಪೊಲೀಸರು ದಾಳಿ ಮಾಡಿದ್ದು, ಶೇಖರಿಸಿಟ್ಟ ಗಾಂಜಾವನ್ನು ಪತ್ತೆಹಚ್ಚಿ ದಾಳಿ ವೇಳೆ ಆರೋಪಿ ಪರಾರಿಯಾದ ಘಟನೆ ಆ. 3ರಂದು ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದಡ್ಕ ಚಿಲಿಂಬಿ ಎಂಬಲ್ಲಿ ರಫೀಕ್ ಎಂಬಾತನ ಮನೆಯೊಳಗೆ 160 ಗ್ರಾಂ ಗಾಂಜಾ ಶೇಖರಿಸಿಟ್ಟ ಬಗ್ಗೆ ಪುಂಜಾಲಕಟ್ಟೆ ಪಿಎಸ್ಐ ಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಗಾಂಜಾ ವಶಕ್ಕೆ ಪಡೆದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ8C,20B NDPS Act ಅಡಿಯಲ್ಲಿ ಆರೋಪಿ ರಫೀಕ್ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿ ರಫೀಕ್ ವಿರುದ್ಧ ಈ ಹಿಂದೆ ಹಲವು ಗಾಂಜಾ ಪ್ರಕರಣ ದಾಖಲಾಗಿದೆ.

ಘಟನೆ ವಿವರ: ಆಗಸ್ಟ್ 03 ರಂದು 06:45 ಗಂಟೆಗೆ ಪುಂಜಾಲಕಟ್ಟೆ ಪಿಎಸ್ಐ ರಾಜೇಶ್.ಕೆ.ವಿ ಸಿಬ್ಬಂದಿಗಳೊಂದಿಗೆ ಪಣಕಜೆ ಎಂಬಲ್ಲಿ ರೌಂಡ್ಸ್ ಕರ್ತವ್ಯದಲ್ಲಿರುವಾಗ ದೊರೆತ ಖಚಿತ ಮಾಹಿತಿಯಂತೆ ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಮದ್ದಡ್ಕ ಚಿಲಿಂಬಿ ಎಂಬಲ್ಲಿ ನಿರ್ಮಾಣ ಹಂತದ ಛಾವಣಿ ಇಲ್ಲದ ಕಟ್ಟಡದೊಳಗಡೆ ರಫೀಕ್ ಎಂಬಾತನು ಅಕ್ರಮವಾಗಿ ಸುಮಾರು ರೂ.15,000 ಮೌಲ್ಯದ ಒಟ್ಟು 160 ಗ್ರಾಂ ತೂಕದ ಗಾಂಜಾದ ಎಲೆ ಮೊಗ್ಗು, ಬೀಜವನ್ನು ತಂದಿಟ್ಟಿದ್ದನ್ನು ತಹಶೀಲ್ದಾರರು ಬೆಳ್ತಂಗಡಿ ಹಾಗೂ ಪಂಚರ ಸಮಕ್ಷಮ ವಿವರವಾದ ಮಹಜರು ನಡೆಸಿ ವಶಪಡಿಸಿಕೊಂಡು ಬೆಳ್ತಂಗಡಿ ಠಾಣಾ ಸರಹದ್ದಿನ ಆಧಾರದಲ್ಲಿ ಮಹಜರು ಹಾಗೂ ವರದಿಯನ್ನು ಮುಂದಿನ ಕ್ರಮದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.

Related posts

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಮರು ಆಯ್ಕೆಯಾದ ರಕ್ಷಿತ್ ಶಿವರಾಂ ರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೌರವರ್ಪಣೆ

Suddi Udaya

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದ.ಕ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಬೆಳ್ತಂಗಡಿ ತಾಲೂಕಿನ ವಿವಿಧ ಬಸದಿಗಳಿಗೆ ಭೇಟಿ

Suddi Udaya

ಅಳದಂಗಡಿಯಲ್ಲೊಂದು ಅಪರೂಪದ ಕಾರ್ಯಕ್ರಮ: ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿ ಹಾಗೂ 20 ಮಂದಿ ಮೆಸ್ಕಾಂ ಸಿಬ್ಬಂದಿಗಳಿಗೆ ಸನ್ಮಾನ

Suddi Udaya

ಗುರುವಾಯನಕೆರೆ ವಿಕಾಸ ವಿ.ಸ. ಸಂಘದ ಮಹಾಸಭೆ: ಶೇ.15 ಡಿವಿಡೆಂಡ್ ಘೋಷಣೆ , ರೂ. 262.73 ಕೋಟಿ ವ್ಯವಹಾರ

Suddi Udaya

ಚಿಕ್ಕಮಗಳೂರಿನಲ್ಲಿ ಕಳ್ಳತನವಾದ ಓಮಿನಿ ಕಾರು ಉಜಿರೆಯಲ್ಲಿ ಪತ್ತೆ: ಮಾಲೀಕನ ಸ್ನೇಹಿತರ ಮೂಲಕ 10 ದಿನದಲ್ಲಿ ಕಾರು ಪತ್ತೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಉಸ್ತುವಾರಿಯಾಗಿ ಶೇಖರ್ ಕುಕ್ಕೇಡಿ ಆಯ್ಕೆ

Suddi Udaya
error: Content is protected !!