July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮನೆಯೊಳಗೆ ಅಕ್ರಮ ಗಾಂಜಾ ದಾಸ್ತಾನು: ಪುಂಜಾಲಕಟ್ಟೆ ಪೊಲೀಸರಿಂದ ದಾಳಿ

ಬೆಳ್ತಂಗಡಿ : ಅಕ್ರಮವಾಗಿ ಕಟ್ಟಡದೊಳಗಡೆ ದಾಸ್ತಾನು ಇರಿಸಿದ್ದ ಗಾಂಜಾವನ್ನು ಪುಂಜಾಲಕಟ್ಟೆ ಪೊಲೀಸರು ದಾಳಿ ಮಾಡಿದ್ದು, ಶೇಖರಿಸಿಟ್ಟ ಗಾಂಜಾವನ್ನು ಪತ್ತೆಹಚ್ಚಿ ದಾಳಿ ವೇಳೆ ಆರೋಪಿ ಪರಾರಿಯಾದ ಘಟನೆ ಆ. 3ರಂದು ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದಡ್ಕ ಚಿಲಿಂಬಿ ಎಂಬಲ್ಲಿ ರಫೀಕ್ ಎಂಬಾತನ ಮನೆಯೊಳಗೆ 160 ಗ್ರಾಂ ಗಾಂಜಾ ಶೇಖರಿಸಿಟ್ಟ ಬಗ್ಗೆ ಪುಂಜಾಲಕಟ್ಟೆ ಪಿಎಸ್ಐ ಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಗಾಂಜಾ ವಶಕ್ಕೆ ಪಡೆದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ8C,20B NDPS Act ಅಡಿಯಲ್ಲಿ ಆರೋಪಿ ರಫೀಕ್ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿ ರಫೀಕ್ ವಿರುದ್ಧ ಈ ಹಿಂದೆ ಹಲವು ಗಾಂಜಾ ಪ್ರಕರಣ ದಾಖಲಾಗಿದೆ.

ಘಟನೆ ವಿವರ: ಆಗಸ್ಟ್ 03 ರಂದು 06:45 ಗಂಟೆಗೆ ಪುಂಜಾಲಕಟ್ಟೆ ಪಿಎಸ್ಐ ರಾಜೇಶ್.ಕೆ.ವಿ ಸಿಬ್ಬಂದಿಗಳೊಂದಿಗೆ ಪಣಕಜೆ ಎಂಬಲ್ಲಿ ರೌಂಡ್ಸ್ ಕರ್ತವ್ಯದಲ್ಲಿರುವಾಗ ದೊರೆತ ಖಚಿತ ಮಾಹಿತಿಯಂತೆ ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಮದ್ದಡ್ಕ ಚಿಲಿಂಬಿ ಎಂಬಲ್ಲಿ ನಿರ್ಮಾಣ ಹಂತದ ಛಾವಣಿ ಇಲ್ಲದ ಕಟ್ಟಡದೊಳಗಡೆ ರಫೀಕ್ ಎಂಬಾತನು ಅಕ್ರಮವಾಗಿ ಸುಮಾರು ರೂ.15,000 ಮೌಲ್ಯದ ಒಟ್ಟು 160 ಗ್ರಾಂ ತೂಕದ ಗಾಂಜಾದ ಎಲೆ ಮೊಗ್ಗು, ಬೀಜವನ್ನು ತಂದಿಟ್ಟಿದ್ದನ್ನು ತಹಶೀಲ್ದಾರರು ಬೆಳ್ತಂಗಡಿ ಹಾಗೂ ಪಂಚರ ಸಮಕ್ಷಮ ವಿವರವಾದ ಮಹಜರು ನಡೆಸಿ ವಶಪಡಿಸಿಕೊಂಡು ಬೆಳ್ತಂಗಡಿ ಠಾಣಾ ಸರಹದ್ದಿನ ಆಧಾರದಲ್ಲಿ ಮಹಜರು ಹಾಗೂ ವರದಿಯನ್ನು ಮುಂದಿನ ಕ್ರಮದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.

Related posts

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿ.ಎಂ ನಿರ್ಧಾರ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕ್ರಿಟಿಕಲ್ ಫಂಡ್ ಚೆಕ್ ವಿತರಣೆ

Suddi Udaya

ತಾ.ಪಂ. ಮಾಜಿ ಅಧ್ಯಕ್ಷ ಕೇಶವ ಕನ್ಯಾಡಿ ಅವರ ಮನೆಗೆ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟೆಂಪೋ

Suddi Udaya

ಶ್ರೀ ಕ್ಷೇ.ಧ. ಗ್ರಾ.ಯೋ ಕೊಕ್ಕಡ ವಲಯದ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

Suddi Udaya
error: Content is protected !!