23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಆಟಿದ ಕಮ್ಮೆನ

ಬೆಳ್ತಂಗಡಿ: ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಮಹಿಳಾ ಸಂಚಾಲನ ಸಮಿತಿ ಬೆಳ್ತಂಗಡಿ ತಾಲೂಕು ಆತಿಥ್ಯದಲ್ಲಿ ಆ.02 ರಂದು ಆಟಿದ ಕಮ್ಮೆನ ಕಾರ್ಯಕ್ರಮವು ಬೆಳ್ತಂಗಡಿಯ ಗುರುನಾರಾಯಣ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ನೆರವೇರಿಸಿ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಘಟಕದ ಸಲಹೆಗಾರರಾದ ಸುಧಾಮಣಿ ಆರ್ ಮಾತನಾಡಿ ಆಟಿ ತಿಂಗಳ ವಿಶೇಷತೆಗಳ ಬಗ್ಗೆ ತಿಳಿಸಿದರು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ವಹಿಸಿದ್ದರು. ವೇದಿಕೆಯಲ್ಲಿ ಮಹಿಳಾ ಸಂಚಾಲನ ಸಮಿತಿಯ ಪ್ರಧಾನ ಸಂಚಾಲಕಿ ಶ್ರೀಮತಿ ಲೀಲಾವತಿ ಪಣಕಜೆ, ಘಟಕದ ಕಾರ್ಯದರ್ಶಿ ಮಧುರ ರಾಘವ್ ಉಪಸ್ಥಿತರಿದ್ದರು.


ಕಾರ್ಯಕ್ರಮದ ಮೊದಲು ಘಟಕದ ಸದಸ್ಯರಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಕುಮಾರಿ ಶ್ರುತ ಮುಂಡೂರು ಗಾದೆ ಮಾತುಗಳನ್ನು ತಿಳಿಸಿದರು. ಘಟಕದ ಸದಸ್ಯರಿಂದ ನೃತ್ಯ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಸಂಚಾಲಕರಾದ ಅಶೋಕ ಕಲ್ಮಂಜ ಸ್ವಾಗತಿಸಿ, ಶ್ವೇತಾ ಯುವರಾಜ್ ಮಣಿಕೆ ನಿರೂಪಿಸಿ, ಲೀಲಾವತಿ ಪಣಕಜೆ ಧನ್ಯವಾದವಿತ್ತರು. ಕಾರ್ಯಕ್ರಮದ ನಂತರ ಘಟಕದ ಸದಸ್ಯರು ತಯಾರಿಸಿದ ಆಟಿ ತಿಂಗಳ ಸುಮಾರು 30 ಬಗೆಯ ವಿವಿಧ ತಿಂಡಿ ತಿನಿಸುಗಳೊಂದಿಗೆ ಭೋಜನದ ವ್ಯವಸ್ಥೆಯನ್ನು ಮಾಡಲಾಗಿತ್ತು.

Related posts

ತೆಕ್ಕಾರು ಉಪ ಆರೋಗ್ಯ ಕೇಂದ್ರಕ್ಕೆ ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ರವರಿಂದ ಮನವಿ

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಬೆಳ್ತಂಗಡಿ, ಧರ್ಮಸ್ಥಳ, ಗುರುವಾಯನಕೆರೆಯ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya

ಉಜಿರೆ ನೀರಚಿಲುಮೆ ಬಳಿ ಬೈಕ್ ಕಾರು ಅಪಘಾತ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿವೇತನ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅ.20: ಬಳಂಜದಲ್ಲಿ ದೀಪಾವಳಿ ಪ್ರಯುಕ್ತ 2ನೇ ವರ್ಷದ ದೋಸೆ ಹಬ್ಬ ಹಾಗೂ ಲೂಡೋ ಟೂರ್ನಮೆಂಟ್

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya
error: Content is protected !!