27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ಪೋಷಕರ ಸಭೆ

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ವಿಶೇಷ ಮಕ್ಕಳ ಪೋಷಕರ ಸಭೆಯು ಆ. 2 ರಂದು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕ ವಂ.ಫಾ.ವಿನೋದ್ ಮಸ್ಕರೇನಸ್ ರವರು, ಶಾಲೆಯ ಆಪ್ತಸಮಾಲೋಚಕರಾದ ಮಿಸ್. ಮೆರಿನ್ ಹಾಗೂ ಪೋಷಕ ಪ್ರತಿನಿಧಿಯಾಗಿ ಶುಭಕರ್ ಉಪಸ್ಥಿತರಿದ್ದರು. ವಂ.ಫಾ. ವಿನೋದ್ ಮಸ್ಕರೇನಸ್ ರವರು ದಯಾ ವಿಶೇಷ ಶಾಲೆಯು ಹೇಗೆ ವಿಭಿನ್ನವಾಗಿ ವಿಶೇಷ ಮಕ್ಕಳಿಗಾಗಿ ವಿನೂತನವಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನಿಸ್ವಾರ್ಥ ಸೇವೆಯನ್ನು ಮಾಡುವುದರೊಂದಿಗೆ ಮಕ್ಕಳಿಗೆ ನೀಡಲಾಗುತ್ತಿರುವ ಫಿಸಿಯೋಥೆರಪಿ ಹಾಗೂ ವಾಕ್ ಮತ್ತು ಶ್ರವಣ ಥೆರಪಿಗಳನ್ನು ನುರಿತ ವೈಧ್ಯರ ಸಹಾಯದೊಂದಿಗೆ ನೀಡಲಾಗುತ್ತಿದೆ. ಪ್ರತೀ ದಿನವೂ ಮಕ್ಕಳು ಈ ಎಲ್ಲಾ ಸೌಲಭ್ಯಗಳನ್ನು ಪಡೆಯುವುದರೊಂದಿಗೆ ಮಕ್ಕಳು ತಮ್ಮ ದೈನಂದಿನ ಚಟುವಟಿಕೆಗಳನ್ನು ತಾವೇ ನಿಭಾಯಿಸಿಕೊಳ್ಳುವ ಸಾಮರ್ಥ್ಯವನ್ನು ಅವರಲ್ಲಿ ಬೆಳೆಸಲು ಸಹಾಯಕವಾಗುತ್ತದೆ. ಇದರೊಂದಿಗೆ ನಮ್ಮ ಪೋಷಕರನ್ನೂ ಸಶಕ್ತಗೊಳಿಸುವ ನಿಟ್ಟಿನಲ್ಲಿ ಸಂಸ್ಥೆಯು ಪೋಷಕರಿಗೆ ವಿವಿಧ ಕರಕುಶಲ ವಸ್ತುಗಳ ತಯಾರಿಕೆಯಲ್ಲಿ ತರಬೇತಿಯನ್ನು ನೀಡಲು ತೀರ್ಮಾನಿಸಿದ್ದು, ಆಸಕ್ತ ಪೋಷಕರು ಸಂಸ್ಥೆಗೆ ಭೇಟಿ ನೀಡಿ ತರಬೇತಿಯನ್ನು ಪಡೆದು ತಮ್ಮ ಕುಟುಂಬದ ಆರ್ಥಿಕ ಅಭಿವೃದ್ಧಿಯನ್ನು ಸಾಧಿಸುವ ನಿಟ್ಟಿನಲ್ಲಿ ಶ್ರಮಿಸುವಂತೆ ತಿಳಿಸಿದರು.

ಮೆರಿನ್ ರವರು 2025-26 ರ ಶಾಲಾ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿ, ಪೋಷಕರಿಂದ ಸಲಹೆ ಸೂಚನೆಗಳನ್ನು ಪಡೆಯುವುದರೊಂದಿಗೆ ಮುಂಬರುವ ವರ್ಷದ ಕಾರ್ಯ ವಿಧಾನಗಳನ್ನು ಚರ್ಚಿಸಿದರು. ತರಗತಿವಾರು ಮಕ್ಕಳ ಪ್ರಗತಿಯನ್ನು ಶಿಕ್ಷಕರೊಂದಿಗೆ ಚರ್ಚಿಸಿ, ಮನೆಯಲ್ಲಿ ಮಕ್ಕಳ ಶೈಕ್ಷಣಿಕ ಮತ್ತು ಇನ್ನಿತರ ಚಿಕಿತ್ಸೆಗಳ ಅನುಸರಣೆಯನ್ನು ಮಾಡುವ ಕುರಿತಾಗಿ ಪೋಷಕರಿಗೆ ತಿಳಿಸಲಾಯಿತು. ಕಚೇರಿ ಸಹಾಯಕ ಕಿರಣ್ ಮಿರಾಂದ ಸ್ವಾಗತಿಸಿ, ಕಳೆದ ಮಾಸಿಕ ಸಭೆಯ ವರದಿಯನ್ನು ವಾಚಿಸಿದರು. ಮಿಸ್. ಮೆರಿನ್ ರವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

Related posts

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲೋತ್ಸವ, ಕಾರ್ಯಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ:ಕಾಂಗ್ರೆಸ್ ನಿಂದ ಸಂವಿಧಾನ ,ಪ್ರಜಾಪ್ರಭುತ್ವ ,ಶಿಷ್ಟಾಚಾರ ವಿರೋಧಿ ನಡವಳಿಕೆ. ರಾಜ್ಯದ ಮಂತ್ರಿಗಳ ಸರ್ವಾಧಿಕಾರಿ ಧೋರಣೆ, ಹಿರಿಯಕ್ಕನ ಚಾಳಿ ಮನೆ ಮಂದಿಗೆಂಬಂತೆ ಇದು ತಳಮಟ್ಟಕ್ಕೂ ತಲುಪುತ್ತಿದೆ: ವಿಧಾನಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಆರೋಪ

Suddi Udaya

ಎ.14 ರವರೆಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಡೈಮಂಡ್ ಹಬ್ಬ

Suddi Udaya

ಇಂದು ಸಂಜೆ ಬಹುನಿರೀಕ್ಷಿತ ದಸ್ಕತ್ ತುಳು ಚಲನಚಿತ್ರದ ಟೀಸರ್ ಬಿಡುಗಡೆ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಶಿಕ್ಷಕ ರಕ್ಷಕ ಸಂಘದ ಸಭೆ

Suddi Udaya

ಅಳದಂಗಡಿ ಅರಮನೆಯ ಡಾ.ಪದ್ಮಪ್ರಸಾದ್ ಅಜಿಲರಿಂದ ಹನುಮೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!