23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿಡೊಂಜಿ ದಿನ

ಲಾಯಿಲ : ಬಂಟರ ಗ್ರಾಮ ಸಮಿತಿ ಲಾಯಿಲ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಲಾಯಿಲ ಗ್ರಾಮದ ಪೆರಿಂದಿಲೆ ಅಮ್ಮ ಸದನದಲ್ಲಿ ಆ. 03 ರಂದು ನಡೆಯಿತು.

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ಕಾರ್ಯಕ್ರಮ ಉದ್ಘಾಟಿಸಿ , ತಾಲೂಕಿನಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಂಘಟನಾತ್ಮಕವಾಗಿ ಬಂಟ ಭಾಂದವರನ್ನು ಒಗ್ಗೂಡಿಸುವ ಕೆಲಸ ವಿವಿಧ ಗ್ರಾಮ ಸಮಿತಿಗಳು ಮಾಡುತ್ತಿರುವುದು ಶ್ಲಾಘನೀಯ ಕೆಲಸವಾಗಿದೆ. ಬಂಟ ಸಮಾಜ ಇತರ ಸಮಾಜದ ಬಂಧುಗಳ ಸಮಸ್ಯೆಗಳ ಕುಂದು ಕೊರತೆಗಳಿಗೆ ಸ್ಪಂದಿಸುವ ಕಾರ್ಯ ಮಾಡಬೇಕು ಎಂದರು.

ಪ್ರಕಾಶ್ ಶೆಟ್ಟಿ ನೊಚ್ಚ ಬಂಟ ಸಮಾಜದ ಆಹಾರ ಪದ್ಧತಿ ಆಚಾರ ವಿಚಾರ, ಸಂಸ್ಕ್ರತಿಗಳ ಬಗ್ಗೆ ಮಾತನಾಡಿ ನಮ್ಮ ಸಮಾಜದ ಮಕ್ಕಳಿಗೆ ನಮ್ಮ ಹಿರಿಯರು ಹಾಕಿಕೊಟ್ಟ ಕೆಲವೊಂದು ವಿಚಾರಗಳನ್ನು ತಿಳಿಸುವ ದೊಡ್ಡ ಜವಾಬ್ದಾರಿ ನಮಗಿದೆ. ಈ ಮೂಲಕ ಯುವ ಜನತೆಯನ್ನು ಸಮಾಜದಲ್ಲಿ ಮಾದರಿ ವ್ಯಕ್ತಿಯನ್ನಾಗಿಸುವಲ್ಲಿ ನಮ್ಮ ಪಾತ್ರ ಮಹತ್ವದ್ದು ಎಂದರು.

ಬಂಟರ ಸಂಘದ ಮಾಜಿ ಅಧ್ಯಕ್ಷ ವಿಠಲ ಶೆಟ್ಟಿ ಲಾಯಿಲ ಶುಭ ಹಾರೈಸಿದರು.ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಹಾಗೂ ಸಾಧಕರನ್ನು ಗೌರವಿಸಲಾಯಿತು. ಸುಮಾರು 62 ವಿವಿಧ ಬಗೆಯ ಆಹಾರ ಖಾಧ್ಯಗಳು ಎಲ್ಲರ ಗಮನ ಸೆಳೆಯಿತು. ಬಂಟ ಭಾಂಧವರಿಗೆ ಆಟೋಟ ಸ್ಪರ್ಧೆ ಏರ್ಪಡಿಸಿಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಸಮಿತಿ ಲಾಯಿಲ ಅಧ್ಯಕ್ಷ ಜನಾರ್ಧನ ಶೆಟ್ಟಿ ಪೆರಿಂದಿಲೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಅಧ್ಯಕ್ಷ ಅಜಿತ್ ಜಿ. ಶೆಟ್ಟಿ ಕೊರ್ಯರ್, ಬಂಟರ ವಲಯ ಸಮಿತಿ ಅಧ್ಯಕ್ಷ ಜಗನ್ನಾಥ್ ಶೆಟ್ಟಿ ಕರ್ನೊಡಿ,ಬಂಟರ ಸಂಘದ ಕೋಶಾಧಿಕಾರಿ ವಸಂತ ಶೆಟ್ಟಿ ಶ್ರದ್ದಾ ಲಾಯಿಲ, ಸದಾನಂದ ಶೆಟ್ಟಿ ಕರ್ನೊಡಿ, ಜಯಂತ ಶೆಟ್ಟಿ ಕುಂಠಿನಿ, ನವೀನ್ ಸಾಮಾನಿ, ಮಹಿಳಾ ವಿಭಾಗದ ಅಧ್ಯಕ್ಷೆ ಜಯಲಕ್ಷ್ಮಿ ಸಾಮಾನಿ , ಕಾರ್ಯದರ್ಶಿ ಶ್ರೇಯ ಪಿ. ಶೆಟ್ಟಿ,ಕೋಶಾಧಿಕಾರಿ ರಕ್ಷಿತಾ ಶೆಟ್ಟಿ, ಯುವ ವಿಭಾಗದ ಅಧ್ಯಕ್ಷ ಪ್ರತೀಕ್ ಶೆಟ್ಟಿ ನೊಚ್ಚ ಉಪಸ್ಥಿತರಿದ್ದರು.

ಸುರೇಶ್ ಶೆಟ್ಟಿ ಕೊಡಿಯೇಲು ಕಾರ್ಯಕ್ರಮ ನಿರ್ವಹಿಸಿದರು. ಸುರೇಶ್ ಶೆಟ್ಟಿ ಲಾಯಿಲ, ಆಶೋಕ್ ಶೆಟ್ಟಿ ಲಾಯಿಲ, ಕಿಟ್ಟಣ್ಣ ಶೆಟ್ಟಿ ಎಣಿಂಜೆ ಸಹಕರಿಸಿದರು.

Related posts

ನಾವೂರು 26ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಅವಶೇಷಗಳು

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಬಳಂಜ ದೇವಸ್ಥಾನದ ಜಾತ್ರ ಮಹೋತ್ಸವ ಸಂಪನ್ನ: ದೈವ ದೇವರ ಭೇಟಿ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ರೈತ ಸದಸ್ಯರ ಅವಶ್ಯಕತೆಗಳನ್ನು ಪೂರೈಸಲು ಪ್ರಾಮಾಣಿಕ ಪ್ರಯತ್ನ: ಎನ್ ಸುಧಾಕರ ಭಂಡಾರಿ ರೂ 272.37 ಕೋಟಿ ವ್ಯವಹಾರ,ರೂ. 89 ಲಕ್ಷ ಲಾಭ, ಸದಸ್ಯರಿಗೆ ಶೇ 12 ಡಿವಿಡೆಂಟ್

Suddi Udaya

ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya
error: Content is protected !!