ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹೇಂದ್ರ ಕಂಪನಿಯ ಹೊಸ ಮಾದರಿಯ ಕಾರು ಕೊಡುಗೆ

ಧರ್ಮಸ್ಥಳ: ದೇಶದ ಪ್ರತಿಷ್ಠಿತ ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯು ನೂತನವಾಗಿ ತಯಾರಿಸಿದ ಹೊಸ ಮಾದರಿಯ ಬಿ.ಇ. : ೬ ಕಾರನ್ನು (ಕೆ.ಎ. ೨೧ ಎಂ.ಎ.- ೬೦೩೩) ಉತ್ಪಾದನಾ ವಿಭಾಗದ ಮುಖ್ಯಸ್ಥರಾದ ವಿನಯ್‌ಖಾನೋಲ್ಕರ್ ಆ.3ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಕೊಡುಗೆಯಾಗಿ ಅರ್ಪಿಸಿದರು.


ಹೊಸ ಮಾದರಿಯ ವಾಹನ ತಯಾರಾದ ಕೂಡಲೆ ಅದನ್ನು ಕಾಣಿಕೆಯಾಗಿ ಧರ್ಮಸ್ಥಳಕ್ಕೆ ಅರ್ಪಿಸುವುದು ತಮ್ಮ ಕಂಪೆನಿಯ ಸಂಪ್ರದಾಯವಾಗಿದೆ. ಇದರಿಂದ ಕಂಪೆನಿ ಉನ್ನತ ಪ್ರಗತಿ ಸಾಧಿಸಿದೆ ಎಂದು ಹೊಸ ಕಾರಿನ ಕೀಯನ್ನು ಹೆಗ್ಗಡೆಯವರಿಗೆ ಹಸ್ತಾಂತರಿಸಿದ ಕಂಪೆನಿಯ ಉತ್ಪದನಾ ವಿಭಾಗದ ಮುಖ್ಯಸ್ಥ ವಿನಯ್ ಖಾನೋಲ್ಕರ್ ತಿಳಿಸಿದರು.


ಕಂಪೆನಿಯ ಉದಾರ ಕೊಡುಗೆಯನ್ನು ಸ್ವೀಕರಿಸಿದ ಹೆಗ್ಗಡೆಯವರು ಕಂಪೆನಿಯು ಈ ಹಿಂದೆ ತಯಾರಿಸಿದ ಹೊಸ ಮಾದರಿಯ ವಾಹನಗಳನ್ನು ಪ್ರಥಮವಾಗಿ ಧರ್ಮಸ್ಥಳಕ್ಕೆ ಅರ್ಪಿಸಿದ್ದು, ಇದು ಅವರ ಮೂರನೆ ಕೊಡುಗೆಯಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಇವರ ವಾಹನಗಳನ್ನು ಬಳಸಿಕೊಳ್ಳುತ್ತೇವೆ.

ದೇಶದ ಪ್ರತಿಷ್ಠಿತ ಮಹೇಂದ್ರ ಕಂಪೆನಿಯ ವಾಹನಗಳು ಯಾವುದೇ ಸಮಸ್ಯೆಗಳಿಲ್ಲದೆ ಉತ್ತಮ ಸೇವೆ ನೀಡುತ್ತಿವೆ. ದೇಶದ ಸೇನೆಯ ವಿಭಾಗಕ್ಕೂ ಅವರು ವಾಹನಗಳನ್ನು ಪೂರೈಸುತ್ತಿದ್ದು, ತನ್ಮೂಲಕ ದೇಶಸೇವೆಗೂ ಉತ್ತಮ ಸೇವೆ ನೀಡುತ್ತಿದ್ದಾರೆ ಎಂದು ಹೇಳಿ ಹೆಗ್ಗಡೆಯವರು ಕಂಪೆನಿಯ ವ್ಯವಹಾರದಲ್ಲಿ ಉತ್ತರೋತ್ತರ ಪ್ರಗತಿಯನ್ನು ಸಾಧಿಸಲಿ ಎಂದು ಹಾರೈಸಿದರು.
ಬಳಿಕ ಹೆಗ್ಗಡೆಯವರು ಕಾರನ್ನು ಚಾಲನೆ ಮಾಡಿ ಶುಭ ಹಾರೈಸಿದರು.
ಹೇಮಾವತಿ ವೀ. ಹೆಗ್ಗಡೆಯವರು, ಅಮಿತ್ ಮತ್ತು ಶ್ರದ್ಧಾಅಮಿತ್ ಉಪಸ್ಥಿತರಿದ್ದರು.

Related posts

ಪ.ರಾ.ಶಾಸ್ತ್ರಿ ಅಭಿನಂದನೆ: ಆಹ್ವಾನ ಪತ್ರಿಕೆ ಅನಾವರಣ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅನ್ವೇಷಣ್’

Suddi Udaya

ಕೊಕ್ರಾಡಿ: ಮನ್ಯೋಡಿಗುತ್ತು ನಿವಾಸಿ ರವಿ ಪೂಜಾರಿ ನಿಧನ

Suddi Udaya

ಪ್ರೊ. ನಾವುಜಿರೆ ನಿಧನಕ್ಕೆ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಯದುಪತಿ ಗೌಡರಿಂದ ಸಂತಾಪ

Suddi Udaya

ಲಾಯಿಲದಲ್ಲಿ ಗುರುಪೂಜೆ ಹಾಗೂ ಪ್ರೋತ್ಸಾಹಧನ ವಿತರಣೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ತೀವ್ರ ಸಂತಾಪ, 9 ದಿನಗಳ ಶೋಕಾಚರಣೆ

Suddi Udaya
error: Content is protected !!