ಗುರುವಾಯನಕೆರೆ: ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಶ್ರೀ ಸ್ಟಾರ್ ಮಹಿಳಾ ಮಂಡಲ ಇದರ ವತಿಯಿಂದ ಜರಗುವ 33ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಸಂಘದ ಸ್ಥಾಪಕ ಉಪಾಧ್ಯಕ್ಷ ಶಾಂತಿರಾಜ್ ಜೈನ್ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಯುವಕ ಸಂಘದ ಅಧ್ಯಕ್ಷ ನಾಗೇಶ್ ಪೂಜಾರಿ ಆದೇಲು, ಮಾಜಿ ಅಧ್ಯಕ್ಷ ಯತೀಶ್ ಸಿರಿಮಜಲು, ಕ್ರೀಡಾ ಕಾರ್ಯದರ್ಶಿ ಪ್ರಶಾಂತ್ ಆಚಾರ್ಯ ಸಿರಿಮಜಲು, ಮಹಿಳಾ ಮಂಡಲದ ಕಾರ್ಯದರ್ಶಿ ಶ್ರೀಮತಿ ಗೀತಾ ಮುಗುಳಿ, ಜತೆ ಕಾರ್ಯದರ್ಶಿ ಶ್ರೀಮತಿ ಗೀತಾ ಗಣೇಶ್ ಶೆಟ್ಟಿ ಸಿರಿಮಜಲು, ಶ್ರೀಮತಿ ನಳಿನಿ ಗುಂಪಲಾಜೆ, ಯುವಕ ಮಂಡಲ ಮತ್ತು ಮಹಿಳಾ ಮಂಡಲದ ಸದಸ್ಯರು ಉಪಸ್ಥಿತರಿದ್ದರು.











