September 6, 2026
Uncategorized

ಸುಲ್ಕೇರಿ ಬಂಟರ ಯಾನೆ ನಾಡವರ ಸಂಘ ಗ್ರಾಮ ಸಮಿತಿಯಿಂದ ಆಟಿಡೊಂಜಿ ದಿನ

ಸುಲ್ಕೇರಿ : ಸುಲ್ಕೇರಿ ಮಹಮ್ಮಾಯಿ ಸಭಾಭವನದಲ್ಲಿ ಬಂಟರ ಯಾನೆ ನಾಡವರ ಸಂಘ ಗ್ರಾಮ ಸಮಿತಿ ಸುಲ್ಕೇರಿಯ ಆಟಿಡೊಂಜಿ ದಿನ ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು.

ಕಾರ್ಯಕ್ರಮವನ್ನು ಗ್ರಾಮ ಸಮಿತಿಯ ಗೌರವಾಧ್ಯಕ್ಷ ರಾಮ ಶೆಟ್ಟಿ, ರಾಜು ಶೆಟ್ಟಿ ಕೊಕ್ರಾಡಿ ಹಾಗೂ ಬೇಬಿ ಶೆಟ್ಟಿ ಅವರ ಉದ್ಘಾಟಿಸಿದರು.

ವಿವಿಧ ಆಟೋಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಬಳಿಕ ಮಧ್ಯಾಹ್ನ ಶ್ರೀಮತಿ ಪ್ರೀತಿ ಶೆಟ್ಟಿ ಯವರ ಪ್ರಾರ್ಥನೆಯೊಂದಿಗೆ ಸಮಾರೋಪ ಸಮಾರಂಭ ಆರಂಭವಾಯಿತು ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಸಮಿತಿಯ ಅಧ್ಯಕ್ಷ ಮಹಾಬಲ ಶೆಟ್ಟಿ ವಹಿಸಿದ್ದರು.

ವೇದಿಕೆಯಲ್ಲಿ ತಾಲೂಕು ಬಂಟರ ಸಮಿತಿಯ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ, ಪ್ರಕಾಶ್ ಶೆಟ್ಟಿ ನೊಚ್ಚ, ಕಾರ್ಯದರ್ಶಿ ಸುರೇಶ್ ಶೆಟ್ಟಿ, ಕೋಶಾಧಿಕಾರಿ ವಸಂತ ಶೆಟ್ಟಿ, ಉಪಾಧ್ಯಕ್ಷರಾದ ನವೀನ್ ಸಾಮಾನಿ, ತಾಲೂಕು ಯುವ ಬಂಟರ ಅಧ್ಯಕ್ಷ ಪ್ರತೀಕ್ ಶೆಟ್ಟಿ, ಮಹಿಳಾ ಅಧ್ಯಕ್ಷ ವಿಜಯಲಕ್ಷ್ಮಿ ಸಾಮಾನಿ ಹಾಗೂ ನಾರಾವಿ ಬಂಟರ ವಲಯ ಅಧ್ಯಕ್ಷ ರಾಜೇಶ್ ಶೆಟ್ಟಿ ಪೆರಾಡಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವಿಶಿಷ್ಟ ಸಾಧನೆಯನ್ನು ಮಾಡಿದ ಹಾಗೂ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದವರನ್ನು ಸನ್ಮಾನಿಸಲಾಯಿತು. ಶ್ರೀಮತಿ ಸ್ವಾತಿ ಶೆಟ್ಟಿ ವರದಿ ವಾಚಿಸಿ, ವಿಶ್ವನಾಥ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ರವಿ ಶೆಟ್ಟಿ ಸ್ವಾಗತಿಸಿ, ದಯಾಕರ ರೈ ವಂದಿಸಿದರು.

Related posts

ಆಷಾಡ ಪ್ರಯುಕ್ತ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ಸಂಸ್ಥೆಯಿಂದ ವಿಶೇಷ ಕೊಡುಗೆ: ಬೆಳ್ತಂಗಡಿ ತಾಲೂಕಿನ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸ್ಜಿದ್ ಯಲ್ಲಿ ಬಕ್ರೀದ್ ಆಚರಣೆ

Suddi Udaya

ಮಳೆ ಹಿನ್ನಲೆ-ನಾಳೆ (ಜು. 18)ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

Suddi Udaya

ಬೆಳ್ತಂಗಡಿ: ಸಮಾಜ ಸೇವಕ ಡಾ. ರವಿ ಪೂಜಾರಿ ಕಕ್ಕೆಪದವುರವರಿಗೆ ಕಾಯಕ ಯೋಗಿ ಪ್ರಶಸ್ತಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘಗಳ ಸಹಯೋಗದಲ್ಲಿ ಸ್ವಚ್ಛತಾ ಅಭಿಯಾನದ ಬೀದಿ ನಾಟಕ

Suddi Udaya

ನಮ್ಮ ಬದುಕನ್ನು ರೂಪಿಸುವ ಅಡಿಪಾಯವೇ ಶಿಕ್ಷಣ-ಡಾ. ನವೀನ್ ಕುಮಾರ್ ಜೈನ್.

Suddi Udaya
error: Content is protected !!