ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ. ಇಲ್ಲಿ ಆ. 2 ರಂದು ಆಟಿಡೊಂಜಿ ದಿನ ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮವನ್ನು ಎಸ್ ಡಿ ಎಮ್ ತಾಂತ್ರಿಕ ಮಹಾವಿದ್ಯಾಲಯದ ಅಸೋಸಿಯೇಟ್ ಪ್ರೊಫೆಸರ್ ಡಾlರವೀಶ್ ಪಡುಮಲೆ ದೀಪ ಬೆಳಗಿಸಿ ಚೆನ್ನ ಮನೆ ಆಟವನ್ನು ಆಡುವ ಮುಖೇನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ತುಳುನಾಡಿನ ಆಚಾರ ವಿಚಾರ ಪದ್ಧತಿ ಹಾಗೂ ನಮ್ಮ ಹಿರಿಯರ ಜೀವನ ಶೈಲಿ ಜೊತೆಗೆ ನಡೆದು ಬಂದಂತಹ ವಿಚಾರವನ್ನು ಮಕ್ಕಳಿಗೆ ತಿಳಿ ಹೇಳಿದರು.
ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಅಬ್ಬುಬಕರ್, ಉಪಾಧ್ಯಕ್ಷೆ ಶ್ರೀಮತಿ ಪ್ರತಿಮ ಹಾಗೂ ಕೃಷ್ಣ ಪ್ರಸಾದ್ ಮತ್ತು ಶಾಲಾ ಶತಮಾನೋತ್ಸವ ಸಮಿತಿಯ ಸದಸ್ಯೆ ಶ್ರೀಮತಿ ಶೀಲಾ ಉಪಸ್ಥಿತರಿದ್ದರು.
ಸಭಾ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಬಾಲಕೃಷ್ಣ ನಾಯ್ಕ ವಹಿಸಿಕೊಂಡರು. ಕಾರ್ಯಕ್ರಮದಲ್ಲಿ ಶಿಕ್ಷಕರ ರಕ್ಷಕ ಸಂಘದ ಸದಸ್ಯರು ಉಪಸಿತರಿದ್ದರು. ಶಾಲಾ ಶಿಕ್ಷಕಿಯಾದ ಶ್ರೀಮತಿ ಜ್ಯೋತಿ ಸ್ವಾಗತಿಸಿ ಶ್ರೀಮತಿ ಸಮತಾ ವಂದಿಸಿ. ದೈಹಿಕ ಶಿಕ್ಷಣ ಶಿಕ್ಷಕ ಗಿರೀಶ್ ಕಾರ್ಯಕ್ರಮವನ್ನು ನಿರೂಪಿಸಿದರು.











