22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಹಿಂದೂ ರುದ್ರ ಭೂಮಿಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಯಶವಂತ ಗೌಡ ಪೂರ್ಯಾಳ ಆಯ್ಕೆ


ಕೊಯ್ಯೂರು: ಇಲ್ಲಿಯ ಆದೂರು ಪೇರಾಲ್ ಪರಿಸರದಲ್ಲಿ ಸುಮಾರು ಒಂದುವರೆ ಎಕ್ರೆ ಜಾಗವನ್ನು ಹಲವು ವರ್ಷಗಳ ಹಿಂದೆ ಹಿಂದೂ ರುದ್ರ ಭೂಮಿಗಾಗಿ ಮೀಸಲಿಡಲಾಗಿತ್ತು. ಆದೂರು ಪೇರಾಲ್ ಪರಿಸರದಲ್ಲಿ ಹಲವಾರು ಹಿಂದೂ ಕುಟುಂಬಗಳು ವಾಸವಾಗಿದ್ದು ಇಲ್ಲಿ ಯಾರಾದರೂ ಅಕಸ್ಮಾತ್ ಮೃತರಾದರೆ ಅವರ ಅಂತ್ಯ ಸಂಸ್ಕಾರಕ್ಕೆ ದೂರದ ಬೆಳ್ತಂಗಡಿಗೆ ಅಥವಾ ಬೇರೆ ಕಡೆಗೆ ಕೊಂಡು ಹೋಗುವುದನ್ನು ಮನಗಂಡಂತಹ ಗ್ರಾಮ ಪಂಚಾಯತ್ ಹಾಗೂ ಊರವರು ಇದನ್ನು ಅಭಿವೃದ್ಧಿಪಡಿಸಿ ಇಲ್ಲಿ ಶವ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಿಕೊಡುವ ನಿಟ್ಟಿನಲ್ಲಿ ಇಲ್ಲಿಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಪಂಚಾಯತ್ ಸದಸ್ಯರುಗಳ ಹಾಗೂ ಊರವರ ಸಭೆಯನ್ನು ನಡೆಸಿ ಹಿಂದೂ ರುದ್ರ ಭೂಮಿಯ ಅಭಿವೃದ್ಧಿಗೆ ನೂತನವಾಗಿ ಸಮಿತಿಯನ್ನು ರಚಿಸಲಾಯಿತು.

ಗೌರವಾಧ್ಯಕ್ಷರಾಗಿ ಶ್ರೀಮತಿ ದಯಾಮಣಿ ರವೀಂದ್ರನಾಥ್ ಪೇರ್ಮುದೆ, ಅಧ್ಯಕ್ಷರಾಗಿ ಯಶವಂತ ಗೌಡ ಪೂರ್ಯಾಳ, ಪ್ರಧಾನ ಕಾರ್ಯದರ್ಶಿಯಾಗಿ ಪಿ ಚಂದ್ರಶೇಖರ ಸಾಲ್ಯಾನ್ ಹರ್ಮಾಡಿ, ಕೋಶಾಧಿಕಾರಿಯಾಗಿ ಶ್ರೀಮತಿ ಹೇಮಾವತಿ ಕಡಮ್ಮಾಜೆ, ಉಪಾಧ್ಯಕ್ಷರುಗಳಾಗಿ ವೆಂಕಣ ಆದೂರು ಪೇರಾಲ್ ಮತ್ತು ಲೋಕೇಶ್ ಗೌಡ ಪಾಂಬೆಲು, ಕಾರ್ಯದರ್ಶಿಗಳಾಗಿ ಚಂದ್ರಶೇಖರ ಗೌಡ ಉಗ್ರೋಡಿ ಮತ್ತು ಹರೀಶ್ ಗೌಡ ಬಜಿಲ ಹಾಗೂ ಸಮಿತಿ ಸದಸ್ಯರುಗಳಾಗಿ 12 ಜನರನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ದಯಮಣಿ ರವೀಂದ್ರನಾಥ್ ವಹಿಸಿದ್ದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹರೀಶ್ ಗೌಡ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್, ಪಂಚಾಯತ್ ಕಾರ್ಯದರ್ಶಿ ಪರಮೇಶ್ವರ್ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಗುತ್ತಿಗೆದಾರರಾದ ಗುಣಕರ ರೈ, ಗ್ರಾಮ ಪಂಚಾಯತ್ ಸದಸ್ಯರುಗಳು ಮತ್ತು ಊರವರು ಹಾಜರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ರವರು ಸ್ವಾಗತಿಸಿ , ವಂದಿಸಿದರು.

Related posts

ಎಲ್‌ ಸಿ ಆರ್ ವಿದ್ಯಾಸಂಸ್ಥೆ ಕಕ್ಯಪದವು: ಪದವಿ ವಿಭಾಗದ ಬಿ.ಕಾಂ ನಲ್ಲಿ ವಾಣಿಜ್ಯ ಚಟುವಟಿಕೆ

Suddi Udaya

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿಯ ಮಾಚಾರ್ ನ ಶಿವರಾಮ ಗೌಡ ಪಿ. ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಬದ್ಯಾರು ಹಿಬರೋಡಿ ಅನುಗ್ರಹ ನಿಲಯ ವಠಾರದಲ್ಲಿ ಸಂಭ್ರಮ ಸಡಗರದಿಂದ ನಡೆದ ‘ಹಿಬರೋಡಿ ಯಕ್ಷೋತ್ಸವ’

Suddi Udaya

ಗಾಳಿ ಮಳೆ: ಮೊಗ್ರು ಗ್ರಾಮದ ಹಲವು ಕಡೆ ಮನೆ, ಕೃಷಿಗೆ ಹಾನಿ ಬಂದಾರು ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಪಿಡಿಓ ಸ್ಥಳಕ್ಕೆ ಭೇಟಿ

Suddi Udaya

ಕಲ್ಲೇರಿ ಐಸಿರಿ ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ ಮತ್ತು ಶ್ರಮದಾನ

Suddi Udaya
error: Content is protected !!