July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ವೇದವ್ಯಾಸ ಶಿಶು ಮಂದಿರದಲ್ಲಿ ಆಟಿದ ಕೂಟ

ಗುರುವಾಯನಕೆರೆ: ಸಂಸ್ಕೃತಿಯ ಪಾಲನೆಯತ್ತ ಹೊಸ ಬೆಳಕನ್ನು ಹರಡುವ ನಿಟ್ಟಿನಲ್ಲಿ ನಮ್ಮ ವೇದವ್ಯಾಸ ಶಿಶು ಮಂದಿರದ ವತಿಯಿಂದ ಆಟಿದ ಕೂಟ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಮುಂಡಕೋಡಿ, ಪೆರ್ಲ ಶಾಲೆಯ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಸೇವಂತಿ ಬಿ ಕೆ ಚೆನ್ನೆಮಣೆ ಆಡುವ ಮುಖಾಂತರ ಕಾರ್ಯಕ್ರಮವನ್ನ ಉದ್ಘಾಟಿಸಿ ತುಳುನಾಡಿನಲ್ಲಿ ಆಟಿ ತಿಂಗಳಲ್ಲಿ ನಡೆಯುವ ವಿವಿಧ ಪದ್ಧತಿಯ ಬಗ್ಗೆ ಹಾಗೆ ಆಟಿ ತಿಂಗಳಲ್ಲಿ ಮಾಡುವ ವಿವಿಧ ತಿಂಡಿ ತಿನಿಸುಗಳ ಬಗ್ಗೆ ತಿಳಿಸುವ ಮೂಲಕ ಮುಂದಿನ ಮಕ್ಕಳಿಗೆ ಇದರ ಅರಿವನ್ನು ಮೂಡಿಸುವ ಅವಶ್ಯಕತೆ ಇದೆ ಎಂದು ನುಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇದವ್ಯಾಸ ಶಿಶುಮಂದಿರದ ಆಡಳಿತ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಇಂದುಮತಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸುಮಾರು 28 ಬಗೆಯ ವಿವಿಧ ಖಾದ್ಯಗಳನ್ನು ಪೋಷಕರು ತಯಾರಿಸಿ ತಂದಿದ್ದರು ಹಾಗೆ ಮಕ್ಕಳಿಗೆ ಮತ್ತು ಪೋಷಕರಿಗೆ ವಿವಿಧ ಬಗೆಯ ಆಟೋಟ ಸ್ಪರ್ಧೆಗಳನ್ನ ಶಿಶು ಮಂದಿರದ ಮಾತಾಜಿಗಳಾದ ಶ್ರೀಮತಿ ಅಶ್ವಿನಿ ಮತ್ತು ಶ್ರೀಮತಿ ರಮ್ಯಾ ಹಾಗೂ ಶ್ರೀಮತಿ ಮಂಗಳ ರತ್ನಾಕರ್ ನಡೆಸಿಕೊಟ್ಟರು.

ಮಾತೃ ಮಂಡಳಿಯ ಕಾರ್ಯದರ್ಶಿ ಶ್ರೀಮತಿ ಸ್ವಾತಿ ಸ್ವಾಗತಿಸಿದರು.ಮಾತೃ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಮಮಿತಾ ಸುಧೀರ್ ವಂದಿಸಿದರು. ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಶ್ರೀಮತಿ ಸುಧಾಮಣಿ ಕಾರ್ಯಕ್ರಮ ನಿರೂಪಿಸಿದರು.

Related posts

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya

ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆ ಸ್ಥಗಿತದಿಂದ ಕಾರ್ಮಿಕರ ಜೀವನ ಅಯೋಮಯ: ನಮ್ಮ ಬೇಡಿಕೆ ಮತ್ತು ಆಗ್ರಹಕ್ಕೆ ಕೂಡಲೇ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ತಾಲೂಕು,ಜಿಲ್ಲಾ ಕೇಂದ್ರದಲ್ಲಿ ಸಂಘಟಿತ ಪ್ರತಿಭಟನೆ

Suddi Udaya

ಕೊಕ್ಕಡ: ನಿವೃತ್ತ ಮುಖ್ಯೋಪಾಧ್ಯಾಯ ನಾರಾಯಣ ಶಬರಾಯ ನಿಧನ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ವಕ್ಫ್ ಜಾಗೃತಿ ಸಭೆ ಕಾರ್ಯಕ್ರಮ

Suddi Udaya

CSEET ಫಲಿತಾಂಶ: ರಾಜ್ಯದಲ್ಲೇ ಗರಿಷ್ಠ ಸಂಖ್ಯೆಯಲ್ಲಿ ತೇರ್ಗಡೆಗೊಂಡ ಕ್ರಿಯೇಟಿವ್‌ನ ವಿದ್ಯಾರ್ಥಿಗಳು

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ವತಿಯಿಂದ ಡಾ. ಯು.ಸಿ. ಪೌಲೋಸ್ ಅವರಿಗೆ ‘ಕೀರ್ತಿಶೇಷ ಜಿ.ಎನ್. ಭಿಡೆ’ ಪ್ರಶಸ್ತಿ

Suddi Udaya
error: Content is protected !!