25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮನೆಯೊಳಗೆ ಅಕ್ರಮ ಗಾಂಜಾ ದಾಸ್ತಾನು: ಪುಂಜಾಲಕಟ್ಟೆ ಪೊಲೀಸರಿಂದ ದಾಳಿ

ಬೆಳ್ತಂಗಡಿ : ಅಕ್ರಮವಾಗಿ ಕಟ್ಟಡದೊಳಗಡೆ ದಾಸ್ತಾನು ಇರಿಸಿದ್ದ ಗಾಂಜಾವನ್ನು ಪುಂಜಾಲಕಟ್ಟೆ ಪೊಲೀಸರು ದಾಳಿ ಮಾಡಿದ್ದು, ಶೇಖರಿಸಿಟ್ಟ ಗಾಂಜಾವನ್ನು ಪತ್ತೆಹಚ್ಚಿ ದಾಳಿ ವೇಳೆ ಆರೋಪಿ ಪರಾರಿಯಾದ ಘಟನೆ ಆ. 3ರಂದು ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದಡ್ಕ ಚಿಲಿಂಬಿ ಎಂಬಲ್ಲಿ ರಫೀಕ್ ಎಂಬಾತನ ಮನೆಯೊಳಗೆ 160 ಗ್ರಾಂ ಗಾಂಜಾ ಶೇಖರಿಸಿಟ್ಟ ಬಗ್ಗೆ ಪುಂಜಾಲಕಟ್ಟೆ ಪಿಎಸ್ಐ ಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಗಾಂಜಾ ವಶಕ್ಕೆ ಪಡೆದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ8C,20B NDPS Act ಅಡಿಯಲ್ಲಿ ಆರೋಪಿ ರಫೀಕ್ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿ ರಫೀಕ್ ವಿರುದ್ಧ ಈ ಹಿಂದೆ ಹಲವು ಗಾಂಜಾ ಪ್ರಕರಣ ದಾಖಲಾಗಿದೆ.

ಘಟನೆ ವಿವರ: ಆಗಸ್ಟ್ 03 ರಂದು 06:45 ಗಂಟೆಗೆ ಪುಂಜಾಲಕಟ್ಟೆ ಪಿಎಸ್ಐ ರಾಜೇಶ್.ಕೆ.ವಿ ಸಿಬ್ಬಂದಿಗಳೊಂದಿಗೆ ಪಣಕಜೆ ಎಂಬಲ್ಲಿ ರೌಂಡ್ಸ್ ಕರ್ತವ್ಯದಲ್ಲಿರುವಾಗ ದೊರೆತ ಖಚಿತ ಮಾಹಿತಿಯಂತೆ ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಮದ್ದಡ್ಕ ಚಿಲಿಂಬಿ ಎಂಬಲ್ಲಿ ನಿರ್ಮಾಣ ಹಂತದ ಛಾವಣಿ ಇಲ್ಲದ ಕಟ್ಟಡದೊಳಗಡೆ ರಫೀಕ್ ಎಂಬಾತನು ಅಕ್ರಮವಾಗಿ ಸುಮಾರು ರೂ.15,000 ಮೌಲ್ಯದ ಒಟ್ಟು 160 ಗ್ರಾಂ ತೂಕದ ಗಾಂಜಾದ ಎಲೆ ಮೊಗ್ಗು, ಬೀಜವನ್ನು ತಂದಿಟ್ಟಿದ್ದನ್ನು ತಹಶೀಲ್ದಾರರು ಬೆಳ್ತಂಗಡಿ ಹಾಗೂ ಪಂಚರ ಸಮಕ್ಷಮ ವಿವರವಾದ ಮಹಜರು ನಡೆಸಿ ವಶಪಡಿಸಿಕೊಂಡು ಬೆಳ್ತಂಗಡಿ ಠಾಣಾ ಸರಹದ್ದಿನ ಆಧಾರದಲ್ಲಿ ಮಹಜರು ಹಾಗೂ ವರದಿಯನ್ನು ಮುಂದಿನ ಕ್ರಮದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.

Related posts

ಎಸ್ ಡಿ ಎಂ ಬೆಳ್ತಂಗಡಿಯಲ್ಲಿ “ಪರಿಸರ ಸ್ನೇಹಿ ಸ್ಕೌಟ್ ಗಣಪತಿ ಆಚರಣೆ

Suddi Udaya

ಮಂಗಳೂರು ವಿಭಾಗೀಯ ರೈಲ್ವೇ ಸಮಸ್ಯೆಗಳ ಬಗ್ಗೆ ಚರ್ಚೆ ಹಾಗೂ ಶೀಘ್ರದಲ್ಲಿ ವಂದೇ ಭಾರತ್ ರೈಲು ಮಂಗಳೂರಿಗೆ : ರಾಜೇಶ್ ಪುದುಶೇರಿ

Suddi Udaya

ಮಾಜಿ ಶಾಸಕರಾದ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Suddi Udaya

ನಡ ಶಾಲಾ ಶತಮಾನೋತ್ಸವ ಸಮಾರೋಪ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲದಿಂದ 20ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಆ.10-12: ಲಾಯಿಲದಲ್ಲಿ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya
error: Content is protected !!