July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ಪೋಷಕರ ಸಭೆ

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ವಿಶೇಷ ಮಕ್ಕಳ ಪೋಷಕರ ಸಭೆಯು ಆ. 2 ರಂದು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕ ವಂ.ಫಾ.ವಿನೋದ್ ಮಸ್ಕರೇನಸ್ ರವರು, ಶಾಲೆಯ ಆಪ್ತಸಮಾಲೋಚಕರಾದ ಮಿಸ್. ಮೆರಿನ್ ಹಾಗೂ ಪೋಷಕ ಪ್ರತಿನಿಧಿಯಾಗಿ ಶುಭಕರ್ ಉಪಸ್ಥಿತರಿದ್ದರು. ವಂ.ಫಾ. ವಿನೋದ್ ಮಸ್ಕರೇನಸ್ ರವರು ದಯಾ ವಿಶೇಷ ಶಾಲೆಯು ಹೇಗೆ ವಿಭಿನ್ನವಾಗಿ ವಿಶೇಷ ಮಕ್ಕಳಿಗಾಗಿ ವಿನೂತನವಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನಿಸ್ವಾರ್ಥ ಸೇವೆಯನ್ನು ಮಾಡುವುದರೊಂದಿಗೆ ಮಕ್ಕಳಿಗೆ ನೀಡಲಾಗುತ್ತಿರುವ ಫಿಸಿಯೋಥೆರಪಿ ಹಾಗೂ ವಾಕ್ ಮತ್ತು ಶ್ರವಣ ಥೆರಪಿಗಳನ್ನು ನುರಿತ ವೈಧ್ಯರ ಸಹಾಯದೊಂದಿಗೆ ನೀಡಲಾಗುತ್ತಿದೆ. ಪ್ರತೀ ದಿನವೂ ಮಕ್ಕಳು ಈ ಎಲ್ಲಾ ಸೌಲಭ್ಯಗಳನ್ನು ಪಡೆಯುವುದರೊಂದಿಗೆ ಮಕ್ಕಳು ತಮ್ಮ ದೈನಂದಿನ ಚಟುವಟಿಕೆಗಳನ್ನು ತಾವೇ ನಿಭಾಯಿಸಿಕೊಳ್ಳುವ ಸಾಮರ್ಥ್ಯವನ್ನು ಅವರಲ್ಲಿ ಬೆಳೆಸಲು ಸಹಾಯಕವಾಗುತ್ತದೆ. ಇದರೊಂದಿಗೆ ನಮ್ಮ ಪೋಷಕರನ್ನೂ ಸಶಕ್ತಗೊಳಿಸುವ ನಿಟ್ಟಿನಲ್ಲಿ ಸಂಸ್ಥೆಯು ಪೋಷಕರಿಗೆ ವಿವಿಧ ಕರಕುಶಲ ವಸ್ತುಗಳ ತಯಾರಿಕೆಯಲ್ಲಿ ತರಬೇತಿಯನ್ನು ನೀಡಲು ತೀರ್ಮಾನಿಸಿದ್ದು, ಆಸಕ್ತ ಪೋಷಕರು ಸಂಸ್ಥೆಗೆ ಭೇಟಿ ನೀಡಿ ತರಬೇತಿಯನ್ನು ಪಡೆದು ತಮ್ಮ ಕುಟುಂಬದ ಆರ್ಥಿಕ ಅಭಿವೃದ್ಧಿಯನ್ನು ಸಾಧಿಸುವ ನಿಟ್ಟಿನಲ್ಲಿ ಶ್ರಮಿಸುವಂತೆ ತಿಳಿಸಿದರು.

ಮೆರಿನ್ ರವರು 2025-26 ರ ಶಾಲಾ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿ, ಪೋಷಕರಿಂದ ಸಲಹೆ ಸೂಚನೆಗಳನ್ನು ಪಡೆಯುವುದರೊಂದಿಗೆ ಮುಂಬರುವ ವರ್ಷದ ಕಾರ್ಯ ವಿಧಾನಗಳನ್ನು ಚರ್ಚಿಸಿದರು. ತರಗತಿವಾರು ಮಕ್ಕಳ ಪ್ರಗತಿಯನ್ನು ಶಿಕ್ಷಕರೊಂದಿಗೆ ಚರ್ಚಿಸಿ, ಮನೆಯಲ್ಲಿ ಮಕ್ಕಳ ಶೈಕ್ಷಣಿಕ ಮತ್ತು ಇನ್ನಿತರ ಚಿಕಿತ್ಸೆಗಳ ಅನುಸರಣೆಯನ್ನು ಮಾಡುವ ಕುರಿತಾಗಿ ಪೋಷಕರಿಗೆ ತಿಳಿಸಲಾಯಿತು. ಕಚೇರಿ ಸಹಾಯಕ ಕಿರಣ್ ಮಿರಾಂದ ಸ್ವಾಗತಿಸಿ, ಕಳೆದ ಮಾಸಿಕ ಸಭೆಯ ವರದಿಯನ್ನು ವಾಚಿಸಿದರು. ಮಿಸ್. ಮೆರಿನ್ ರವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

Related posts

ಪುದುವೆಟ್ಟು: ನಡ್ಯೇಲು ಕಾಡಾನೆ ದಾಳಿ : ಅಪಾರ ಕೃಷಿ ಹಾನಿ

Suddi Udaya

ಬೆಳ್ತಂಗಡಿ: ಗಾಳಿ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಬೆಳ್ತಂಗಡಿ 47ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಉದ್ಘಾಟನೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಬ್ಯಾಂಕಿಂಗ್ ಸೆಕ್ಟರ್ಸ್ ರಿಫಾರ್ಮ್ಸ್ ” ಮಾಹಿತಿ ಕಾರ್ಯಗಾರ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

Suddi Udaya

ಬಜಿರೆ: ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ-ಧಾರ್ಮಿಕ ಸಭೆ

Suddi Udaya
error: Content is protected !!