July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹೇಂದ್ರ ಕಂಪನಿಯ ಹೊಸ ಮಾದರಿಯ ಕಾರು ಕೊಡುಗೆ

ಧರ್ಮಸ್ಥಳ: ದೇಶದ ಪ್ರತಿಷ್ಠಿತ ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯು ನೂತನವಾಗಿ ತಯಾರಿಸಿದ ಹೊಸ ಮಾದರಿಯ ಬಿ.ಇ. : ೬ ಕಾರನ್ನು (ಕೆ.ಎ. ೨೧ ಎಂ.ಎ.- ೬೦೩೩) ಉತ್ಪಾದನಾ ವಿಭಾಗದ ಮುಖ್ಯಸ್ಥರಾದ ವಿನಯ್‌ಖಾನೋಲ್ಕರ್ ಆ.3ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಕೊಡುಗೆಯಾಗಿ ಅರ್ಪಿಸಿದರು.


ಹೊಸ ಮಾದರಿಯ ವಾಹನ ತಯಾರಾದ ಕೂಡಲೆ ಅದನ್ನು ಕಾಣಿಕೆಯಾಗಿ ಧರ್ಮಸ್ಥಳಕ್ಕೆ ಅರ್ಪಿಸುವುದು ತಮ್ಮ ಕಂಪೆನಿಯ ಸಂಪ್ರದಾಯವಾಗಿದೆ. ಇದರಿಂದ ಕಂಪೆನಿ ಉನ್ನತ ಪ್ರಗತಿ ಸಾಧಿಸಿದೆ ಎಂದು ಹೊಸ ಕಾರಿನ ಕೀಯನ್ನು ಹೆಗ್ಗಡೆಯವರಿಗೆ ಹಸ್ತಾಂತರಿಸಿದ ಕಂಪೆನಿಯ ಉತ್ಪದನಾ ವಿಭಾಗದ ಮುಖ್ಯಸ್ಥ ವಿನಯ್ ಖಾನೋಲ್ಕರ್ ತಿಳಿಸಿದರು.


ಕಂಪೆನಿಯ ಉದಾರ ಕೊಡುಗೆಯನ್ನು ಸ್ವೀಕರಿಸಿದ ಹೆಗ್ಗಡೆಯವರು ಕಂಪೆನಿಯು ಈ ಹಿಂದೆ ತಯಾರಿಸಿದ ಹೊಸ ಮಾದರಿಯ ವಾಹನಗಳನ್ನು ಪ್ರಥಮವಾಗಿ ಧರ್ಮಸ್ಥಳಕ್ಕೆ ಅರ್ಪಿಸಿದ್ದು, ಇದು ಅವರ ಮೂರನೆ ಕೊಡುಗೆಯಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಇವರ ವಾಹನಗಳನ್ನು ಬಳಸಿಕೊಳ್ಳುತ್ತೇವೆ.

ದೇಶದ ಪ್ರತಿಷ್ಠಿತ ಮಹೇಂದ್ರ ಕಂಪೆನಿಯ ವಾಹನಗಳು ಯಾವುದೇ ಸಮಸ್ಯೆಗಳಿಲ್ಲದೆ ಉತ್ತಮ ಸೇವೆ ನೀಡುತ್ತಿವೆ. ದೇಶದ ಸೇನೆಯ ವಿಭಾಗಕ್ಕೂ ಅವರು ವಾಹನಗಳನ್ನು ಪೂರೈಸುತ್ತಿದ್ದು, ತನ್ಮೂಲಕ ದೇಶಸೇವೆಗೂ ಉತ್ತಮ ಸೇವೆ ನೀಡುತ್ತಿದ್ದಾರೆ ಎಂದು ಹೇಳಿ ಹೆಗ್ಗಡೆಯವರು ಕಂಪೆನಿಯ ವ್ಯವಹಾರದಲ್ಲಿ ಉತ್ತರೋತ್ತರ ಪ್ರಗತಿಯನ್ನು ಸಾಧಿಸಲಿ ಎಂದು ಹಾರೈಸಿದರು.
ಬಳಿಕ ಹೆಗ್ಗಡೆಯವರು ಕಾರನ್ನು ಚಾಲನೆ ಮಾಡಿ ಶುಭ ಹಾರೈಸಿದರು.
ಹೇಮಾವತಿ ವೀ. ಹೆಗ್ಗಡೆಯವರು, ಅಮಿತ್ ಮತ್ತು ಶ್ರದ್ಧಾಅಮಿತ್ ಉಪಸ್ಥಿತರಿದ್ದರು.

Related posts

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಮಾ। ರಿತ್ವಿಕ್‌ರಾಜ್ ಅಂಡಿಂಜೆ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಇಂದಬೆಟ್ಟುವಿನಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಗ್ರಾಮ‌ ಸುಭೀಕ್ಷೆಗಾಗಿ ಶ್ರೀ ದೇವರ ಲೋಕ ಸಂಚಾರ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ವಿ.ಹಿ.ಪ ಬಜರಂಗದಳ ಕಳೆಂಜ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya

ತಣ್ಣೀರುಪಂತ ವಲಯದ ರುದ್ರಗಿರಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!