25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹೇಂದ್ರ ಕಂಪನಿಯ ಹೊಸ ಮಾದರಿಯ ಕಾರು ಕೊಡುಗೆ

ಧರ್ಮಸ್ಥಳ: ದೇಶದ ಪ್ರತಿಷ್ಠಿತ ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯು ನೂತನವಾಗಿ ತಯಾರಿಸಿದ ಹೊಸ ಮಾದರಿಯ ಬಿ.ಇ. : ೬ ಕಾರನ್ನು (ಕೆ.ಎ. ೨೧ ಎಂ.ಎ.- ೬೦೩೩) ಉತ್ಪಾದನಾ ವಿಭಾಗದ ಮುಖ್ಯಸ್ಥರಾದ ವಿನಯ್‌ಖಾನೋಲ್ಕರ್ ಆ.3ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಕೊಡುಗೆಯಾಗಿ ಅರ್ಪಿಸಿದರು.


ಹೊಸ ಮಾದರಿಯ ವಾಹನ ತಯಾರಾದ ಕೂಡಲೆ ಅದನ್ನು ಕಾಣಿಕೆಯಾಗಿ ಧರ್ಮಸ್ಥಳಕ್ಕೆ ಅರ್ಪಿಸುವುದು ತಮ್ಮ ಕಂಪೆನಿಯ ಸಂಪ್ರದಾಯವಾಗಿದೆ. ಇದರಿಂದ ಕಂಪೆನಿ ಉನ್ನತ ಪ್ರಗತಿ ಸಾಧಿಸಿದೆ ಎಂದು ಹೊಸ ಕಾರಿನ ಕೀಯನ್ನು ಹೆಗ್ಗಡೆಯವರಿಗೆ ಹಸ್ತಾಂತರಿಸಿದ ಕಂಪೆನಿಯ ಉತ್ಪದನಾ ವಿಭಾಗದ ಮುಖ್ಯಸ್ಥ ವಿನಯ್ ಖಾನೋಲ್ಕರ್ ತಿಳಿಸಿದರು.


ಕಂಪೆನಿಯ ಉದಾರ ಕೊಡುಗೆಯನ್ನು ಸ್ವೀಕರಿಸಿದ ಹೆಗ್ಗಡೆಯವರು ಕಂಪೆನಿಯು ಈ ಹಿಂದೆ ತಯಾರಿಸಿದ ಹೊಸ ಮಾದರಿಯ ವಾಹನಗಳನ್ನು ಪ್ರಥಮವಾಗಿ ಧರ್ಮಸ್ಥಳಕ್ಕೆ ಅರ್ಪಿಸಿದ್ದು, ಇದು ಅವರ ಮೂರನೆ ಕೊಡುಗೆಯಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಇವರ ವಾಹನಗಳನ್ನು ಬಳಸಿಕೊಳ್ಳುತ್ತೇವೆ.

ದೇಶದ ಪ್ರತಿಷ್ಠಿತ ಮಹೇಂದ್ರ ಕಂಪೆನಿಯ ವಾಹನಗಳು ಯಾವುದೇ ಸಮಸ್ಯೆಗಳಿಲ್ಲದೆ ಉತ್ತಮ ಸೇವೆ ನೀಡುತ್ತಿವೆ. ದೇಶದ ಸೇನೆಯ ವಿಭಾಗಕ್ಕೂ ಅವರು ವಾಹನಗಳನ್ನು ಪೂರೈಸುತ್ತಿದ್ದು, ತನ್ಮೂಲಕ ದೇಶಸೇವೆಗೂ ಉತ್ತಮ ಸೇವೆ ನೀಡುತ್ತಿದ್ದಾರೆ ಎಂದು ಹೇಳಿ ಹೆಗ್ಗಡೆಯವರು ಕಂಪೆನಿಯ ವ್ಯವಹಾರದಲ್ಲಿ ಉತ್ತರೋತ್ತರ ಪ್ರಗತಿಯನ್ನು ಸಾಧಿಸಲಿ ಎಂದು ಹಾರೈಸಿದರು.
ಬಳಿಕ ಹೆಗ್ಗಡೆಯವರು ಕಾರನ್ನು ಚಾಲನೆ ಮಾಡಿ ಶುಭ ಹಾರೈಸಿದರು.
ಹೇಮಾವತಿ ವೀ. ಹೆಗ್ಗಡೆಯವರು, ಅಮಿತ್ ಮತ್ತು ಶ್ರದ್ಧಾಅಮಿತ್ ಉಪಸ್ಥಿತರಿದ್ದರು.

Related posts

ಲಾಯಿಲ ಕುಂಟಿನಿಯಿಂದ ನಡ, ಪುತ್ರಬೈಲು ಮೂಲಕ ಬೆಳ್ತಂಗಡಿ ಮತ್ತು ಕಿಲ್ಲೂರಿಗೆ ಸಂಪರ್ಕಿಸುವ ಕಿರಿದಾದ ಮಣ್ಣಿನ ಮತ್ತು ಕಾಂಕ್ರಿಟ್ ರಸ್ತೆ : ಭಾರೀ ಮಳೆಗೆ ರಸ್ತೆಯ ಎರಡು ಬದಿಗಳಲ್ಲಿ ಮಣ್ಣು ಕುಸಿದು ಅಪಾಯವನ್ನು ಆಹ್ವಾನಿಸುವ ಮುನ್ಸೂಚನೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಡ್

Suddi Udaya

ಕೊಯ್ಯೂರು ಗ್ರಾ.ಪಂ. ಅಧ್ಯಕ್ಷರಾಗಿ ದಯಾಮಣಿ, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya

ನಡ: ಸ್ಟಾರ್ ಲೈನ್ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya

ಮೇಲಂತಬೆಟ್ಟು: ಉಜ್ವಲ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಣೆ

Suddi Udaya

ತ್ರೋಬಾಲ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!