July 23, 2026
Uncategorized

ಸುಲ್ಕೇರಿ ಬಂಟರ ಯಾನೆ ನಾಡವರ ಸಂಘ ಗ್ರಾಮ ಸಮಿತಿಯಿಂದ ಆಟಿಡೊಂಜಿ ದಿನ

ಸುಲ್ಕೇರಿ : ಸುಲ್ಕೇರಿ ಮಹಮ್ಮಾಯಿ ಸಭಾಭವನದಲ್ಲಿ ಬಂಟರ ಯಾನೆ ನಾಡವರ ಸಂಘ ಗ್ರಾಮ ಸಮಿತಿ ಸುಲ್ಕೇರಿಯ ಆಟಿಡೊಂಜಿ ದಿನ ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು.

ಕಾರ್ಯಕ್ರಮವನ್ನು ಗ್ರಾಮ ಸಮಿತಿಯ ಗೌರವಾಧ್ಯಕ್ಷ ರಾಮ ಶೆಟ್ಟಿ, ರಾಜು ಶೆಟ್ಟಿ ಕೊಕ್ರಾಡಿ ಹಾಗೂ ಬೇಬಿ ಶೆಟ್ಟಿ ಅವರ ಉದ್ಘಾಟಿಸಿದರು.

ವಿವಿಧ ಆಟೋಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಬಳಿಕ ಮಧ್ಯಾಹ್ನ ಶ್ರೀಮತಿ ಪ್ರೀತಿ ಶೆಟ್ಟಿ ಯವರ ಪ್ರಾರ್ಥನೆಯೊಂದಿಗೆ ಸಮಾರೋಪ ಸಮಾರಂಭ ಆರಂಭವಾಯಿತು ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಸಮಿತಿಯ ಅಧ್ಯಕ್ಷ ಮಹಾಬಲ ಶೆಟ್ಟಿ ವಹಿಸಿದ್ದರು.

ವೇದಿಕೆಯಲ್ಲಿ ತಾಲೂಕು ಬಂಟರ ಸಮಿತಿಯ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ, ಪ್ರಕಾಶ್ ಶೆಟ್ಟಿ ನೊಚ್ಚ, ಕಾರ್ಯದರ್ಶಿ ಸುರೇಶ್ ಶೆಟ್ಟಿ, ಕೋಶಾಧಿಕಾರಿ ವಸಂತ ಶೆಟ್ಟಿ, ಉಪಾಧ್ಯಕ್ಷರಾದ ನವೀನ್ ಸಾಮಾನಿ, ತಾಲೂಕು ಯುವ ಬಂಟರ ಅಧ್ಯಕ್ಷ ಪ್ರತೀಕ್ ಶೆಟ್ಟಿ, ಮಹಿಳಾ ಅಧ್ಯಕ್ಷ ವಿಜಯಲಕ್ಷ್ಮಿ ಸಾಮಾನಿ ಹಾಗೂ ನಾರಾವಿ ಬಂಟರ ವಲಯ ಅಧ್ಯಕ್ಷ ರಾಜೇಶ್ ಶೆಟ್ಟಿ ಪೆರಾಡಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವಿಶಿಷ್ಟ ಸಾಧನೆಯನ್ನು ಮಾಡಿದ ಹಾಗೂ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದವರನ್ನು ಸನ್ಮಾನಿಸಲಾಯಿತು. ಶ್ರೀಮತಿ ಸ್ವಾತಿ ಶೆಟ್ಟಿ ವರದಿ ವಾಚಿಸಿ, ವಿಶ್ವನಾಥ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ರವಿ ಶೆಟ್ಟಿ ಸ್ವಾಗತಿಸಿ, ದಯಾಕರ ರೈ ವಂದಿಸಿದರು.

Related posts

ಸುಲ್ಕೇರಿ: ಅ.ಖಾ.ಹಿ.ಪ್ರಾ. ಶಾಲೆ- ಶ್ರೀರಾಮ ಪ್ರೌಢಶಾಲೆಯಲ್ಲಿ ಸಹಪಠ್ಯ ಚಟುವಟಿಕೆ ಉದ್ಘಾಟನೆ

Suddi Udaya

ವಯೋ ನಿವೃತಿಯಾದ ವೇಣೂರು ಪಶು ಚಿಕಿತ್ಸಾಲಯದ ಜಾನುವಾರು ಅಧಿಕಾರಿ ಸುಕೀರ್ತಿ ಜೈನ್ ರಿಗೆ ಸನ್ಮಾನ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಬಾರ್ಯ : ಸರಳೀಕಟ್ಟೆಯಲ್ಲಿ ಹಾರಿ ಹೋದ ಹಲವು ಮನೆಯ ಮೇಲ್ಛಾವಣಿ

Suddi Udaya

ಮುಂಡಾಜೆ: ಶಾರ್ಟ್ ಸರ್ಕ್ಯೂಟ್ – ಕೇಬಲ್ ಗೆ ಹಾನಿ

Suddi Udaya

ಉಜಿರೆ ಎಸ್.ಡಿ.ಎಮ್ ಕಾಲೇಜಿನ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ ಹೊಂದಿದ್ದ ಡಾ. ಶ್ರೀಧರ ಭಟ್ ರವರಿಗೆ ಅಭಿನಂದನೆ ಸಲ್ಲಿಸಿದ ಶ್ರೀ ಕ್ಷೇತ್ರ ಸೌತಡ್ಕದ ಮಾಜಿ ವ್ಯವಸ್ಥಾಪನ ಸಮಿತಿ

Suddi Udaya
error: Content is protected !!