September 6, 2026
Uncategorized

ಸುಲ್ಕೇರಿ ಬಂಟರ ಯಾನೆ ನಾಡವರ ಸಂಘ ಗ್ರಾಮ ಸಮಿತಿಯಿಂದ ಆಟಿಡೊಂಜಿ ದಿನ

ಸುಲ್ಕೇರಿ : ಸುಲ್ಕೇರಿ ಮಹಮ್ಮಾಯಿ ಸಭಾಭವನದಲ್ಲಿ ಬಂಟರ ಯಾನೆ ನಾಡವರ ಸಂಘ ಗ್ರಾಮ ಸಮಿತಿ ಸುಲ್ಕೇರಿಯ ಆಟಿಡೊಂಜಿ ದಿನ ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು.

ಕಾರ್ಯಕ್ರಮವನ್ನು ಗ್ರಾಮ ಸಮಿತಿಯ ಗೌರವಾಧ್ಯಕ್ಷ ರಾಮ ಶೆಟ್ಟಿ, ರಾಜು ಶೆಟ್ಟಿ ಕೊಕ್ರಾಡಿ ಹಾಗೂ ಬೇಬಿ ಶೆಟ್ಟಿ ಅವರ ಉದ್ಘಾಟಿಸಿದರು.

ವಿವಿಧ ಆಟೋಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಬಳಿಕ ಮಧ್ಯಾಹ್ನ ಶ್ರೀಮತಿ ಪ್ರೀತಿ ಶೆಟ್ಟಿ ಯವರ ಪ್ರಾರ್ಥನೆಯೊಂದಿಗೆ ಸಮಾರೋಪ ಸಮಾರಂಭ ಆರಂಭವಾಯಿತು ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಸಮಿತಿಯ ಅಧ್ಯಕ್ಷ ಮಹಾಬಲ ಶೆಟ್ಟಿ ವಹಿಸಿದ್ದರು.

ವೇದಿಕೆಯಲ್ಲಿ ತಾಲೂಕು ಬಂಟರ ಸಮಿತಿಯ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ, ಪ್ರಕಾಶ್ ಶೆಟ್ಟಿ ನೊಚ್ಚ, ಕಾರ್ಯದರ್ಶಿ ಸುರೇಶ್ ಶೆಟ್ಟಿ, ಕೋಶಾಧಿಕಾರಿ ವಸಂತ ಶೆಟ್ಟಿ, ಉಪಾಧ್ಯಕ್ಷರಾದ ನವೀನ್ ಸಾಮಾನಿ, ತಾಲೂಕು ಯುವ ಬಂಟರ ಅಧ್ಯಕ್ಷ ಪ್ರತೀಕ್ ಶೆಟ್ಟಿ, ಮಹಿಳಾ ಅಧ್ಯಕ್ಷ ವಿಜಯಲಕ್ಷ್ಮಿ ಸಾಮಾನಿ ಹಾಗೂ ನಾರಾವಿ ಬಂಟರ ವಲಯ ಅಧ್ಯಕ್ಷ ರಾಜೇಶ್ ಶೆಟ್ಟಿ ಪೆರಾಡಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವಿಶಿಷ್ಟ ಸಾಧನೆಯನ್ನು ಮಾಡಿದ ಹಾಗೂ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದವರನ್ನು ಸನ್ಮಾನಿಸಲಾಯಿತು. ಶ್ರೀಮತಿ ಸ್ವಾತಿ ಶೆಟ್ಟಿ ವರದಿ ವಾಚಿಸಿ, ವಿಶ್ವನಾಥ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ರವಿ ಶೆಟ್ಟಿ ಸ್ವಾಗತಿಸಿ, ದಯಾಕರ ರೈ ವಂದಿಸಿದರು.

Related posts

ಕಟ್ಟೆ: ಎಂಟು ಅಡಿ ಉದ್ದದ ಹೆಬ್ಬಾವು ಪತ್ತೆ

Suddi Udaya

ಪುತ್ತೂರು ಅಕ್ಷಯ ಕಾಲೇಜಿನ ಅಟರ್ನಸ್- 2024 ಫೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಚಾರ್ಮಾಡಿ ಗ್ರಾಮದ ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆ ಪತ್ತೆ

Suddi Udaya

86 ಸೀಮ್ ಕಾರ್ಡ್ ಸಹಿತ ಬೆಳ್ತಂಗಡಿ ಯ ಇಬ್ಬರನ್ನು ಬಂಧಿಸಿದ ಮಂಗಳೂರು ಪೊಲೀಸರು: ವಿದೇಶ ದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪ

Suddi Udaya

ಸರ್ವಿಸ್ ರಸ್ತೆಯ ಬದಲಿಗೆ ಡ್ಯೂಯೆಲ್ ಕಾರೇಜ್ ನೊಂದಿಗೆ ರಸ್ತೆಯನ್ನು ಅಗಲಗೊಳಿಸಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಿಗೆ ಬೆಳ್ತಂಗಡಿ ವರ್ತಕರ ಸಂಘದಿಂದ ಮನವಿ

Suddi Udaya

ವೇಣೂರು: ಶ್ರೀ ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿ ಮಾಜಿ ಕಾರ್ಯದರ್ಶಿ, ಮಾರಗುತ್ತು ಯಂ. ವಿಜಯರಾಜ ಅಧಿಕಾರಿ ನಿಧನ

Suddi Udaya
error: Content is protected !!