32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿಡೊಂಜಿ ದಿನ’

ಉಜಿರೆ: ಆಚರಣೆಗಳ ವೈಜ್ಞಾನಿಕ ಕಾರಣ ತಿಳಿದುಕೊಂಡು ಸಂಸ್ಕೃತಿ ಉಳಿಸಬೇಕಿದೆ ಎಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ರಂಗ ನಿರ್ದೇಶಕ ಯಶವಂತ್ ಹೇಳಿದರು.
ಉಜಿರೆಯ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ತುಳು ಸಂಸ್ಕೃತಿ ಕುರಿತ ‘ಆಟಿಡೊಂಜಿ ದಿನ’ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಕೃಷಿ ಅವಲಂಬಿತ ತುಳುನಾಡಿನ ಎಲ್ಲಾ ಹಬ್ಬಗಳಿಗೂ ಕೃಷಿಯು ಮೂಲವಾಗಿದ್ದು ಅದಕ್ಕೆ ಸಂಬಂಧಿಸಿದಂತೆ ಹಲವಾರು ಆಚರಣೆಗಳು ಬೆಳೆದು ಬಂದಿವೆ. ಆಟಿ ತಿಂಗಳಿನಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮ ನಡೆಯದೇ ಪ್ರಕೃತಿಯನ್ನು ಆರಾಧಿಸುವ ವಿಶಿಷ್ಟ ಪದ್ಧತಿ ಇದೆ. ಎಲ್ಲ ಆಚರಣೆಗಳ ಹಿಂದೆ ವೈಜ್ಞಾನಿಕ ಕಾರಣಗಳಿವೆ ಎಂದರು.

ಮುಖ್ಯ ಶಿಕ್ಷಕಿ ವಿದ್ಯಾಲಕ್ಷ್ಮೀ ಅವರು ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ವರ್ಧನ್ ಜೈನ್ ತುಳು ಗಾದೆಗಳ ವಾಚನ ಮಾಡಿದರು ಹಾಗೂ ವಿವಿಧ ತರಗತಿ ವಿದ್ಯಾರ್ಥಿಗಳು ತುಳುಗಾದೆಗಳು ಹಾಗೂ ಅರ್ಥಗಳನ್ನು ವಾಚಿಸಿದರು.

ವಿದ್ಯಾರ್ಥಿನಿ ತಸ್ಮಯಿ ಅವರು ಆಟಿ ತಿಂಗಳ ಆಚರಣೆಗಳ ಮಹತ್ವ ತಿಳಿಸಿದರು. ವಿದ್ಯಾರ್ಥಿನಿ ಪ್ರಣಮ್ಯ ಒಗಟುಗಳನ್ನು ಕೇಳಿದರು.

ವಿದ್ಯಾರ್ಥಿಗಳಿಂದ ತುಳು ಪಾಡ್ದನ, ಹಾಡು, ನೃತ್ಯಗಳನ್ನು ಪ್ರದರ್ಶಿಸಲಾಯಿತು. ವಿದ್ಯಾರ್ಥಿಗಳು ಆಟಿಯ ವಿಶೇಷ ತಿಂಡಿ ತಿನಿಸುಗಳನ್ನು ತಂದು ಸಹಪಾಠಿಗಳಿಗೆ ಹಂಚಿದರು. ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದರು.

ನಿರೀಕ್ಷಾ ಸ್ವಾಗತಿಸಿ, ನಿಹಾಲ್ ವಂದಿಸಿದರು. ಪಲ್ಲವಿ ಅತಿಥಿ ಪರಿಚಯ ನೀಡಿದರು. ದಿಶಾನ್ ಮತ್ತು ಜ್ಞಾನ್ ಕಾರ್ಯಕ್ರಮ ನಿರೂಪಿಸಿದರು.

Related posts

ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

Suddi Udaya

ಪುದುವೆಟ್ಟು ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರನ್ನು ಗೌರವಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಗಿಡ ನಾಟಿ ಉತ್ಸವ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಉಜಿರೆ ಮೋಹನ್ ಕುಮಾರ್ ರವರಿಗೆ ‘ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ- 2023’

Suddi Udaya
error: Content is protected !!