September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಎನ್ ಸಿಸಿ. ಎನ್‌ಎಸ್‌ಎಸ್. ರೇಂಜರ್ಸ್ ರೋವರ್ಸ್ ಮತ್ತು ರೆಡ್ ಕ್ರಾಸ್ ಘಟಕಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಕಲ್ಲಬೆಟ್ಟು: ಶಿಸ್ತು ಸಂಯಮದ ನಡವಳಿಕೆ ಬೌದ್ಧಿಕ ವಿಕಾಸಕ್ಕೆ ಪೂರಕ. ಸ್ವಯಂಪ್ರೇರಣೆಯಿಂದ ಪ್ರಾಮಾಣಿಕವಾಗಿ ಸಲ್ಲಿಸುವ ಸೇವೆ ಸಾರ್ಥಕ ಬದುಕಿಗೆ, ಸಮಾಜದ ಉನ್ನತಿಗೆ ಸಹಾಯಕ. ಕಠಿಣ ಪರಿಶ್ರಮ ಮತ್ತು ಕೌಶಲಗಳು ಯಶಸ್ಸಿನ ಆಧಾರಸ್ತಂಭಗಳು, ಪಕ್ಷೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರೆ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಸಾಧ್ಯ. ಮನಸಾರೆ ಕಲಿತು ಹೃದಯಪೂರ್ವಕವಾಗಿ ಅನುಷ್ಠಾನ ಮಾಡಿದರೆ ಪ್ರತಿಫಲವೂ ಒಳ್ಳೆಯದಾಗಿರುತ್ತದೆ ಎಂದು ಮೂಡುಬಿದಿರೆ ಹಿರಿಯ ನ್ಯಾಯವಾದಿಗಳಾದ ಕೆ ಆರ್ ಪಂಡಿತ್ ಹೇಳಿದರು.

ಅವರು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಎನ್ ಸಿಸಿ. ಎನ್‌ಎಸ್‌ಎಸ್. ರೇಂಜರ್ಸ್ ರೋವರ್ಸ್ ಮತ್ತು ರೆಡ್ ಕ್ರಾಸ್ ಘಟಕಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆಯನ್ನು ನೆರವೇರಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿಯವರು ಮಾತನಾಡುತ್ತ ಹಿರಿಯರ ಅನುಭವದ ಮಾತು ಕಿರಿಯರಿಗೆ ದಾರಿದೀಪ ಭೂಮಿಯಲ್ಲಿ ಬಿತ್ತಿದ ಬೀಜಕ್ಕೆ ನೀರು ಗೊಬ್ಬರವನ್ನು ಕೊಟ್ಟು ಬಂದ ಕಳೆಯನ್ನು ಕಾಲಕಾಲಕ್ಕೆ ಕೀಳುತ್ತ ಮುಂದೆ ಫಲವನ್ನು ಪಡೆಯುವಂತೆ ಬದುಕೆಂಬ ತೋಟದಲ್ಲಿ ಗುಣಗಳಿಗೆ ನೀರೆರೆದು ಪೋಷಿಸಿ ದೋಷಗಳನ್ನು ನಿವಾರಿಸಿಕೊಂಡಾಗ ಅರ್ಥಪೂರ್ಣವೂ ಸಮಾಜಕ್ಕೆ ಉಪಯುಕ್ತ ಜೀವನವೂ ನಮ್ಮದಾಗುತ್ತದೆ. ಆ ನಿಟ್ಟಿನಲ್ಲಿ ವಿವಿಧ ಘಟಕಗಳ ಕಾರ್ಯ ಚಟುವಟಿಕೆಗಳಲ್ಲಿ ಬದ್ಧತೆಯಿಂದ ಪಾಲ್ಗೊಂಡು ಬದುಕನ್ನು ಉಜ್ವಲ ಗೊಳಿಸಿಕೊಳ್ಳುವಂತೆ ಪ್ರೇರಣೆಯನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಮಾತನಾಡಿ ಸಮಾಜ ಸೇವೆಯ ಮೂಲಕ ದೇಶದ ಅಭಿವೃದ್ಧಿಯ ಕನಸನ್ನು ಕಾಣಬೇಕಾದರೆ ಶಾಲೆ ಕಾಲೇಜುಗಳಲ್ಲಿ ವಿವಿಧ ಘಟಕಗಳ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ಪಾಲ್ಗೊಳ್ಳಬೇಕು. ನೋಡಿ ಕಲಿ ಮಾಡಿ ತಿಳಿ ತತ್ತ್ವವನ್ನು ಅಳವಡಿಸಿಕೊಳ್ಳಬೇಕು. ಇಂದಿನ ಸವಾಲಿನ ಪಾಠಗಳು ಮುಂದಿನ ಸಂತೋಷದ ಬದುಕಿಗೆ ಪ್ರೇರಣೆಯಾಗುತ್ತದೆ. ಇಂದು ಬದುಕಿನಲ್ಲಿ ಮಾಡಿಕೊಳ್ಳುವ ಚಿಕ್ಕ ಬದಲಾವಣೆ ದೊಡ್ಡ ಸಾಧನೆಗೆ ಕಾರಣವಾಗುತ್ತದೆ. ಜೀವನವನ್ನು ಬಂದ ರೀತಿಯಲ್ಲಿ ಸ್ವೀಕರಿಸುವುದು ಒಂದು ಕಲೆ. ಧೈರ್ಯ ಮತ್ತು ಸಾಹಸದ ಬದುಕಿಗೆ ನಮ್ಮನ್ನು ತೆರೆದುಕೊಂಡಾಗ ನೈಜ ಜೀವನ ದರ್ಶನವಾಗುತ್ತದೆ ಎಂದು ನುಡಿದರು.

ವೇದಿಕೆಯಲ್ಲಿ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಎನ್ ಸಿಸಿ ಅಧಿಕಾರಿ ಲೆಫ್ಟಿನೆಂಟ್ ಮಹೇಂದ್ರ ಜೈನ್, ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ತೇಜಸ್ವಿ ಭಟ್, ರೋವರ್ಸ್ ಅಧಿಕಾರಿ ಪ್ರದೀಪ್ ಕೆಪಿ ಮತ್ತು ವಿವಿಧ ಘಟಕಗಳ ವಿದ್ಯಾರ್ಥಿ ನಾಯಕರು ಉಪಸ್ಥಿತರಿದ್ದರು. ರೆಡ್ ಕ್ರಾಸ್ ಅಧಿಕಾರಿ ಪ್ರಶಾಂತ ಶೆಟ್ಟಿ ಸ್ವಾಗತಿಸಿ ,ರೋವರ್ಸ್ ವಿದ್ಯಾರ್ಥಿ ರೇವಣ್ಣ ಸಿದ್ದು ಮತ್ತು ರೆಡ್ ಕ್ರಾಸ್ ವಿದ್ಯಾರ್ಥಿ ಮನ್ನಾ ಭೋಜಕ್ಕೆ ಅತಿಥಿಗಳನ್ನು ಪರಿಚಯಿಸಿದರು. ಎನ್ ಸಿಸಿ ಕೆಡೆಟ್ ದಿಶಾಂತ್ ಗೌಡ ಪ್ರತಿಜ್ಞಾ ವಿಧಿ ಬೋಧಿಸಿದರು. ಎನ್‌ಎಸ್‌ಎಸ್ ಸ್ವಯಂಸೇವಕಿ ರಶ್ಮಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ರೇಂಜರ್ಸ್ ಅಧಿಕಾರಿ ಸಂಧ್ಯಾ ನಾಯಕ್ ವಂದಿಸಿದರು

Related posts

ಬೆಳ್ತಂಗಡಿ: ವಾಣಿ ಕಾಲೇಜಿನ ಐಟಿ ಕ್ಲಬ್ ನ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ:ವೇಣೂರು ಸರ್ಕಾರಿ ಪದವಿ ಪೂರ್ವ(ಪ್ರೌಢಶಾಲಾ ವಿಭಾಗ ) ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ನಾಲ್ಕೂರು: ಸೂಳಬೆಟ್ಟು ಶ್ರೀ ಕೃಷ್ಣ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಕಲ್ಮಂಜ: ಅಹಲ್ಯಾ ಯಾನೆ ರಮಾ ಚಿಪ್ಲೂಣ್ಕರ್ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಎಜುಕೇಷನಲ್ ಸೊಸೈಟಿಯಲ್ಲಿ ‘ಎಸ್.ಡಿ.ಎಂ ಶ್ರೇಷ್ಠತಾ ಕಪ್ – 2026’

Suddi Udaya

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!