July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ಆಟೋಮೊಬೈಲ್ ಪ್ರಯೋಗಾಲಯದ ಉದ್ಘಾಟನೆ

ಗೇರುಕಟ್ಟೆ: ಸರಕಾರಿ ಪ್ರೌಢಶಾಲೆ ಗೇರುಕಟ್ಟೆಯಲ್ಲಿ ಆಟೋಮೊಬೈಲ್ ಪ್ರಯೋಗಾಲಯದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ರವರು ನೆರವೇರಿಸಿದರು.

ಕೇಂದ್ರ ಸರ್ಕಾರದ NSQF ಯೋಜನೆಯಡಿಯಲ್ಲಿ ಆಟೋಮೊಬೈಲ್ ತರಗತಿ ಅನುಷ್ಠಾನಗೊಳಿಸಲು ಬಿಡುಗಡೆಯಾದ ರೂ.2,50,000.00 ಅನುದಾನದಲ್ಲಿ ಸಿದ್ಧಗೊಳಿಸಿದ ಪ್ರಯೋಗಾಲಯವನ್ನು ಉದ್ಘಾಟಿಸಿ, ಶಾಸಕರು ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಆಟೋಮೊಬೈಲ್ ಕ್ಷೇತ್ರದಲ್ಲಿ ಇರುವ ಅವಕಾಶಗಳ ಬಗ್ಗೆ ತಿಳಿಸಿದರು. ಮುಂದಿನ ದಿನಗಳಲ್ಲಿ ಗೇರುಕಟ್ಟೆ ಪ್ರೌಢಶಾಲೆಯನ್ನು ಕೆಪಿಎಸ್ ಶಾಲೆಯಾಗಿ ಮುಂದುವರಿಸುವ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತ್, ಸಂಘ-ಸಂಸ್ಥೆಗಳು ಹಾಗೂ ಊರಿನವರು ಪಕ್ಷಭೇದ ಮರೆತು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸಹಕರಿಸುವಂತೆ ತಿಳಿಸಿದರು.

ಸ್ಥಳೀಯ ಜನಪ್ರತಿನಿಧಿಗಳು, ಎಸ್.ಡಿ.ಎಮ್.ಸಿ ಸದಸ್ಯರು, ವಿದ್ಯಾರ್ಥಿ ಪೋಷಕರು, ಪತ್ರಿಕಾ ಮಿತ್ರರು, ಊರಿನ ಪ್ರಮುಖರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪದವಿಪೂರ್ವ ಹಾಗೂ ಪ್ರೌಢಶಾಲಾ ಬೋಧಕ, ಬೋಧಕೇತರ ವೃಂದದವರು ಭಾಗವಹಿಸಿದರು.

Related posts

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ ಗೀತೆಗಳ ಗಾಯನ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಹಾಯಧನ ವಿತರಣೆ

Suddi Udaya

ಮರೋಡಿ: ಅಡುಗೆ ಮಾಡುವ ವೇಳೆ ಆಕಸ್ಮಿಕವಾಗಿ ಒಲೆಯ ಮೇಲೆ ಬಿದ್ದ ಮಹಿಳೆ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya

ಇಂದಬೆಟ್ಟು: ಕಟ್ಟಿ ಹಾಕಿದ್ದ ನಾಯಿಯನ್ನು ಹೊತ್ತೊಯ್ದಿ ಕಾಡುಪ್ರಾಣಿ

Suddi Udaya

ಗುರುವಾಯನಕೆರೆಯಲ್ಲಿ ವಾಹದ ಟಯರೊಂದು ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿ ಪತ್ತೆ :ಜನರಲ್ಲಿ ಆತಂಕ ಸೃಷ್ಟಿ.

Suddi Udaya
error: Content is protected !!