September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ ಗ್ರಾ.ಪಂ. ಮತ್ತು ಕೆನರಾ ಬ್ಯಾಂಕ್ ವತಿಯಿಂದ ಜನ ಸುರಕ್ಷಾ ಸಂಪೂರ್ಣತಾ ಅಭಿಯಾನ

ಮಲವಂತಿಗೆ ಗ್ರಾಮ ಪಂಚಾಯತ್ ಮತ್ತು ಕೆನರಾ ಬ್ಯಾಂಕ್ ವತಿಯಿಂದ ಕಿಲ್ಲೂರಿನ ಗುರುನಾರಾಯಣ ಸಭಾ ಭವನದಲ್ಲಿ ಜನ ಸುರಕ್ಷಾ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮ ನಡೆಯಿತು.

ಕೆನರಾ ಬ್ಯಾಂಕಿನ ವೃತ್ತ ಕಚೇರಿಯ ಎ. ಜಿ. ಎಂ. ನರೇಂದ್ರ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ದ. ಕ. ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕಿ ಕವಿತಾ ಶೆಟ್ಟಿ ಮಾತನಾಡಿ, ಮಲವಂತಿಗೆ ಗ್ರಾಮದಲ್ಲಿ 100% ಸರ್ಕಾರದ ವಿಮೆ ನೋಂದಣಿ ಆಗಬೇಕಾದರೆ ಜನರ ಸಹಕಾರಬೇಕು ಎಂದು ಹೇಳಿದರು. ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರದ ಉಷಾ ವಿ ನಾಯಕ್ ಅವರು ಪ್ರಧಾನ ಮಂತ್ರಿ ಜೀವನ ಸುರಕ್ಷಾ ಭೀಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ , ಅಟಲ್ ಪಿಂಚಣಿ ಯೋಜನೆ ಕೆನರಾ ಏಂಜೆಲ್ ಖಾತೆ, ಪೇ ರೋಲ್ ಖಾತೆ, ಮುದ್ರಾ ಸಾಲ ಇ ಕೆ ವೈ ಸಿ ಇತ್ಯಾದಿ ಬಗ್ಗೆ ವಿವರಣೆ ನೀಡಿದರು.

ಪುತ್ತೂರು ಪ್ರಾದೇಶಿಕ ಕಚೇರಿಯ ಡಿ.ಎಂ. ಅಜಿತ್ ಕುಮಾರ್ ಅವರು ಶುಭ ಹಾರೈಸಿದರು. ಮಲವಂತಿಗೆ ಗ್ರಾಮ ಪಂಚಾಯತ್ ಸದಸ್ಯರಾದ ಮಹಮದ್ ಕಾಜೂರು ಬ್ಯಾಂಕ್ ಸಮಸ್ಯೆಗಳನ್ನು ತಿಳಿಸಿದರು. ಬ್ಯಾಂಕ್ ಅಧಿಕಾರಿಗಳು ಸಮಸ್ಯೆಗಳನ್ನು ಸರಿ ಮಾಡಿ ಕೊಡುತ್ತೇವೆ ಎಂದು ತಿಳಿಸಿದರು. ಗ್ರಾಮ ಪಂಚಾಯತ್ ಪಿ. ಡಿ. ಓ. ರಶ್ಮಿ ಅವರು ಸ್ವಾಗತ ಕೋರಿದರು. ನಂತರ ಸರ್ಕಾರದ ವಿಮೆ ನೋಂದಣಿ ಮಾಡಲಾಯಿತು

Related posts

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರ ಅಧ್ಯಯನ ಪ್ರವಾಸ

Suddi Udaya

ಅಡ್ಡ ಮತದಾನ ವಿವಾದ: ಬೇಲೂರು ಶಾಸಕ ಹೆಚ್. ಕೆ. ಸುರೇಶ್ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಿತ್ತಬಾಗಿಲು: ಕೊಳಂಬೆ ನಿವಾಸಿ ವಿದ್ಯಾ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕನ್ಯಾಡಿ ಸೇವಾನಿಕೇತನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ನೆರಿಯ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿ ಜೋನ್ಸಾನ್ ಗೆ ನ್ಯಾಯಾಂಗ ಬಂಧನ

Suddi Udaya
error: Content is protected !!