July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ ಗ್ರಾ.ಪಂ. ಮತ್ತು ಕೆನರಾ ಬ್ಯಾಂಕ್ ವತಿಯಿಂದ ಜನ ಸುರಕ್ಷಾ ಸಂಪೂರ್ಣತಾ ಅಭಿಯಾನ

ಮಲವಂತಿಗೆ ಗ್ರಾಮ ಪಂಚಾಯತ್ ಮತ್ತು ಕೆನರಾ ಬ್ಯಾಂಕ್ ವತಿಯಿಂದ ಕಿಲ್ಲೂರಿನ ಗುರುನಾರಾಯಣ ಸಭಾ ಭವನದಲ್ಲಿ ಜನ ಸುರಕ್ಷಾ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮ ನಡೆಯಿತು.

ಕೆನರಾ ಬ್ಯಾಂಕಿನ ವೃತ್ತ ಕಚೇರಿಯ ಎ. ಜಿ. ಎಂ. ನರೇಂದ್ರ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ದ. ಕ. ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕಿ ಕವಿತಾ ಶೆಟ್ಟಿ ಮಾತನಾಡಿ, ಮಲವಂತಿಗೆ ಗ್ರಾಮದಲ್ಲಿ 100% ಸರ್ಕಾರದ ವಿಮೆ ನೋಂದಣಿ ಆಗಬೇಕಾದರೆ ಜನರ ಸಹಕಾರಬೇಕು ಎಂದು ಹೇಳಿದರು. ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರದ ಉಷಾ ವಿ ನಾಯಕ್ ಅವರು ಪ್ರಧಾನ ಮಂತ್ರಿ ಜೀವನ ಸುರಕ್ಷಾ ಭೀಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ , ಅಟಲ್ ಪಿಂಚಣಿ ಯೋಜನೆ ಕೆನರಾ ಏಂಜೆಲ್ ಖಾತೆ, ಪೇ ರೋಲ್ ಖಾತೆ, ಮುದ್ರಾ ಸಾಲ ಇ ಕೆ ವೈ ಸಿ ಇತ್ಯಾದಿ ಬಗ್ಗೆ ವಿವರಣೆ ನೀಡಿದರು.

ಪುತ್ತೂರು ಪ್ರಾದೇಶಿಕ ಕಚೇರಿಯ ಡಿ.ಎಂ. ಅಜಿತ್ ಕುಮಾರ್ ಅವರು ಶುಭ ಹಾರೈಸಿದರು. ಮಲವಂತಿಗೆ ಗ್ರಾಮ ಪಂಚಾಯತ್ ಸದಸ್ಯರಾದ ಮಹಮದ್ ಕಾಜೂರು ಬ್ಯಾಂಕ್ ಸಮಸ್ಯೆಗಳನ್ನು ತಿಳಿಸಿದರು. ಬ್ಯಾಂಕ್ ಅಧಿಕಾರಿಗಳು ಸಮಸ್ಯೆಗಳನ್ನು ಸರಿ ಮಾಡಿ ಕೊಡುತ್ತೇವೆ ಎಂದು ತಿಳಿಸಿದರು. ಗ್ರಾಮ ಪಂಚಾಯತ್ ಪಿ. ಡಿ. ಓ. ರಶ್ಮಿ ಅವರು ಸ್ವಾಗತ ಕೋರಿದರು. ನಂತರ ಸರ್ಕಾರದ ವಿಮೆ ನೋಂದಣಿ ಮಾಡಲಾಯಿತು

Related posts

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಯು.ಡಿ.ಆರ್ ಹಾಗೂ ಒಂದು ದೂರರ್ಜಿ ಎಸ್.ಐ.ಟಿ ತನಿಖೆಗೆ ವರ್ಗಾವಣೆ

Suddi Udaya

ಮುಳಿಯ – ಹೊಸ ಲೋಗೋ- ಅನಾವರಣ : ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್

Suddi Udaya

ಚಾರ್ಮಾಡಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ವೇಣೂರು: ಮೂಡಕೋಡಿಯಲ್ಲಿ ಬಿಜೆಪಿ ಬೂತ್ ಮಟ್ಟದ ಸಭೆ

Suddi Udaya

ಬೆಳ್ತಂಗಡಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ

Suddi Udaya

ಶಿರ್ಲಾಲು ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya
error: Content is protected !!