September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಮುಂಡೂರು ಅಕ್ಷಯ ಬಂಟರ ಗ್ರಾಮ ಸಮಿತಿ ವತಿಯಿಂದ ‘ಆಟಿದ ನೆನಪು’ ಕಾರ್ಯಕ್ರಮ

ಮುಂಡೂರು : ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ, ಅಕ್ಷಯ ಬಂಟರ ಗ್ರಾಮ ಸಮಿತಿ , ಮುಂಡೂರು ಇದರ ವತಿಯಿಂದ ಆಟಿದ ನೆನಪು ಕಾರ್ಯಕ್ರಮವು ಕಲ್ಲಂಡ ಶ್ರೀಮತಿ ಪುಷ್ಪ ವಸಂತ ಶೆಟ್ಟಿಯವರ ಮನೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ನಿರ್ದೇಶಕ ನಾರಾಯಣ ಶೆಟ್ಟಿ ಯವರು ದೀಪ ಬೆಳಗಿಸಿ, ಚೆನ್ನೆ ಮಣೆ ಆಡುವುದರೊಂದಿಗೆ ಉದ್ಘಾಟಿಸಿ, ಕಳೆದ 19 ವರ್ಷಗಳಿಂದ ಕೇವಲ 16 ಬಂಟ ಸಮುದಾಯ ಮನೆ ಹೊಂದಿರುವ ಈ ಕಾರ್ಯಕ್ರಮ ಮಾಡಿರುವುದು ಬಹಳ ವಿಶೇಷವಾಗಿದೆ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸಭೆಯ ಅಧ್ಯಕ್ಷತೆಯನ್ನು, ಅಕ್ಷಯ ಬಂಟರ ಸಂಘದ ಅಧ್ಯಕ್ಷ ಕೇಶವ ಶೆಟ್ಟಿ ವಹಿಸಿದ್ದರು. ಅಕ್ಷಯ ಬಂಟರ ಸಂಘದ ಮಾಜಿ ಅಧ್ಯಕ್ಷ ಸೀತರಾಮ ಶೆಟ್ಟಿ ಮಾತನಾಡುತ್ತ, ಹಿಂದಿನ ಕಾಲದಲ್ಲಿ, ಸೊಪ್ಪು , ತರಕಾರಿ, ಗೆಡ್ಡೆ ಗೆಣಸುಗಳನ್ನು ತಿಂದು ಬದುಕುತ್ತಿದ್ದೆವು, ಇಂದಿನ ಮಕ್ಕಳು ಇದನ್ನು ಸದ್ಭಳಕೆ ಮಾಡಿದಲ್ಲಿ, ಆರೋಗ್ಯಕರವಾದ ಜೀವನ ನಡೆಸಲು ಸಾಧ‍್ಯ ಎಂದರು,

ವೇದಿಕೆಯಲ್ಲಿ, ಬಂಟರ ಸಂಘದ ಉಪಾಧ್ಯಕ್ಷ ಚಂದ್ರಹಾಸ ಶೆಟ್ಟಿ, ಸದಸ್ಯರಾದ ಶ್ರೀಮತಿ ಪುಷ್ಪ ಶೆಟ್ಟಿ, ಕೋಶಾಧಿಕಾರಿ ಸುಧಾಮಣಿ ಉಪಸ್ಥಿತರಿದ್ದರು. ಸುಮಾರು 30 ವಿಧದ , ಎಲ್ಲಾ ಮನೆಗಳಿಂದ ತಂದ ಹಳೇಯ ಕಾಲದಲ್ಲಿ ಬಳಕೆ ಮಾಡುತ್ತಿದ್ದ, ಆಹಾರ ವಸ್ತುಗಳ ಪ್ರದರ್ಶಿಸಲಾಯಿತು. ಶ್ರೀಮತಿ ಸುಷ್ಮಾ, ಹಾಗೂ, ಶ್ರೀಮತಿ ದೀಪ್ತಿ ಪ್ರಾರ್ಥಿಸಿದರು., ಕು. ವೀಕ್ಷಾರವರು ಆಟಿಯ ಹಿನ್ನಲೆಯನ್ನು ತಿಳಿಸಿದರು. ಶ್ರೀಮತಿ ವಿದ್ಯಾ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ, ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಆಶ್ರಯದಲ್ಲಿ, ನಡೆಯುವ ಯೋಗಾಸನ, ಪ್ರಾಣಾಯಾಮ ಧ್ಯಾನ ಶಿಬಿರದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ: ವಿವಿಧ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗಳ ಖುಲಾಸೆ

Suddi Udaya

ಬೋಳಿಯರ್ ರಸ್ತೆ ಬದಿಯಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡಾನೆ

Suddi Udaya

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಸುಜನ್ ಸಿ. ಭಂಡಾರಿ ರವರಿಗೆ ಅಳದಂಗಡಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ವತಿಯಿಂದ ಸನ್ಮಾನ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳ ಪೋಷಕರಿಗೆ “ಔಷಧವಾಗಿ ಆಹಾರ” ಕಾರ್ಯಾಗಾರ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ 1.07ಕೋಟಿ ನಿವ್ವಳ ಲಾಭ, ಶೇ. 11 ಡಿವಿಡೆಂಡ್ ಘೋಷಣೆ

Suddi Udaya
error: Content is protected !!