23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ವಿಶ್ರಾಂತ ಶಿಕ್ಷಕ ಮುಂಡಾಜೆ ಶಂಕರ್ ತಾಮನ್ಕರ್ ಅವರಿಂದ ಮಾದರಿ ಕಾರ್ಯಕ್ರಮ

ಬೆಳ್ತಂಗಡಿ; ದಿ ನಾರಾಯಣ ತಾಮನ್ಕರ್ ಮುಂಡಾಜೆಯವರ ಸ್ಮರಣಾರ್ಥವಾಗಿ ಅವರ ಮಗ ವಿಶ್ರಾಂತ ಅಧ್ಯಾಪಕ ಹಾಗೂ ಕವಿ ಶಂಕರ್ ಎನ್. ತಾಮನ್ಕರ್ ರವರು ಮತ್ತು ಸ್ವಾತಿ ತಾಮನ್ಕರ್ ಅವರು ತಮ್ಮ “ಪರಂಪರಾ” ಮನೆಯಲ್ಲಿ ಅರ್ಹ ಕುಟುಂಬಗಳಿಗೆ ಆಹಾರದ ಕಿಟ್ ಹಾಗೂ ಪ್ರತಿಭಾ ಸಂಪನ್ನ ಅರ್ಹ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾ ನಿಧಿ ವಿತರಿಸಿದರು.
ಈ ಕಾರ್ಯಕ್ರಮದಲ್ಲಿ ಮುಂಡಾಜೆ ಪರಿಸರದ ನಾಲ್ಕು ವಿದ್ಯಾರ್ಥಿಗಳಿಗೆ ತಲಾ ರೂ. 5000 ದಂತೆ ವಿದ್ಯಾರ್ಥಿ ಸಹಾಯ ಹಸ್ತ, ಮೂರು ಮಂದಿ ಅರ್ಹ ನಾಗರಿಕರಿಗೆ ಆಹಾರ ಕಿಟ್ಟ್ ಹಾಗೂ ಒಬ್ಬ ನಾಗರಿಕರಿಗೆ ರೂ.5000 ಆರೋಗ್ಯ ಸಹಾಯ ಹಸ್ತವನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಗಣೇಶ್ ಬಂಗೇರ ಅಧ್ಯಕ್ಷರು ಗ್ರಾಮ ಪಂಚಾಯತ್ ಮುಂಡಾಜೆ, ನಾಮದೇವ ರಾವ್ ಸಂಚಾಲಕರು ಯಂಗ್ ಚಾಲೆಂಜರ್ಸ್ ಮುಂಡಾಜೆ, ಉದ್ಯಮಿ ಅರೆಕ್ಕಲ್ ರಾಮಚಂದ್ರ ಭಟ್, ದಿಶಾ ಪಟವರ್ಧನ್ ಗ್ರಾಮ ಪಂಚಾಯತ್ ಸದಸ್ಯರು ಮುಂಡಾಜೆ ಯವರು ಭಾಗವಹಿಸಿ ಶುಭ ಕೋರಿದರು.ಇಂತಹ ಕಾರ್ಯಕ್ರಮಗಳು ಇತರರಿಗೆ ಮಾದರಿಯಾಗಲಿ ಎಂದು ಹಾರೈಸಿದರು. ಶಂಕರ್ ತಾಮನ್ಕರರವರು ಸ್ವಾಗತ ಮತ್ತು ವಂದನಾರ್ಪಣೆಯನ್ನು ಮಾಡಿದರು.

Related posts

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ : ಎಸ್‌ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

Suddi Udaya

ಅಂಡೆತಡ್ಕ : ಕರಾಯ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಕೆಎಸ್‌ಆರ್‌ಟಿಸಿ ಧರ್ಮಸ್ಥಳ -ಮಂಗಳೂರು ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸು ಸಂಚಾರ ಪ್ರಾರಂಭ

Suddi Udaya

ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಅನುದಾನದ ಮಂಜೂರಾತಿ ಪತ್ರ ವಿತರಣೆ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ ವತಿಯಿಂದ ಸಹಾಯಾರ್ಥ ನೀಡುವ ಮೂಲಕ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!