September 6, 2026
ತಾಲೂಕು ಸುದ್ದಿ

ವಿಶ್ರಾಂತ ಶಿಕ್ಷಕ ಮುಂಡಾಜೆ ಶಂಕರ್ ತಾಮನ್ಕರ್ ಅವರಿಂದ ಮಾದರಿ ಕಾರ್ಯಕ್ರಮ

ಬೆಳ್ತಂಗಡಿ; ದಿ ನಾರಾಯಣ ತಾಮನ್ಕರ್ ಮುಂಡಾಜೆಯವರ ಸ್ಮರಣಾರ್ಥವಾಗಿ ಅವರ ಮಗ ವಿಶ್ರಾಂತ ಅಧ್ಯಾಪಕ ಹಾಗೂ ಕವಿ ಶಂಕರ್ ಎನ್. ತಾಮನ್ಕರ್ ರವರು ಮತ್ತು ಸ್ವಾತಿ ತಾಮನ್ಕರ್ ಅವರು ತಮ್ಮ “ಪರಂಪರಾ” ಮನೆಯಲ್ಲಿ ಅರ್ಹ ಕುಟುಂಬಗಳಿಗೆ ಆಹಾರದ ಕಿಟ್ ಹಾಗೂ ಪ್ರತಿಭಾ ಸಂಪನ್ನ ಅರ್ಹ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾ ನಿಧಿ ವಿತರಿಸಿದರು.
ಈ ಕಾರ್ಯಕ್ರಮದಲ್ಲಿ ಮುಂಡಾಜೆ ಪರಿಸರದ ನಾಲ್ಕು ವಿದ್ಯಾರ್ಥಿಗಳಿಗೆ ತಲಾ ರೂ. 5000 ದಂತೆ ವಿದ್ಯಾರ್ಥಿ ಸಹಾಯ ಹಸ್ತ, ಮೂರು ಮಂದಿ ಅರ್ಹ ನಾಗರಿಕರಿಗೆ ಆಹಾರ ಕಿಟ್ಟ್ ಹಾಗೂ ಒಬ್ಬ ನಾಗರಿಕರಿಗೆ ರೂ.5000 ಆರೋಗ್ಯ ಸಹಾಯ ಹಸ್ತವನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಗಣೇಶ್ ಬಂಗೇರ ಅಧ್ಯಕ್ಷರು ಗ್ರಾಮ ಪಂಚಾಯತ್ ಮುಂಡಾಜೆ, ನಾಮದೇವ ರಾವ್ ಸಂಚಾಲಕರು ಯಂಗ್ ಚಾಲೆಂಜರ್ಸ್ ಮುಂಡಾಜೆ, ಉದ್ಯಮಿ ಅರೆಕ್ಕಲ್ ರಾಮಚಂದ್ರ ಭಟ್, ದಿಶಾ ಪಟವರ್ಧನ್ ಗ್ರಾಮ ಪಂಚಾಯತ್ ಸದಸ್ಯರು ಮುಂಡಾಜೆ ಯವರು ಭಾಗವಹಿಸಿ ಶುಭ ಕೋರಿದರು.ಇಂತಹ ಕಾರ್ಯಕ್ರಮಗಳು ಇತರರಿಗೆ ಮಾದರಿಯಾಗಲಿ ಎಂದು ಹಾರೈಸಿದರು. ಶಂಕರ್ ತಾಮನ್ಕರರವರು ಸ್ವಾಗತ ಮತ್ತು ವಂದನಾರ್ಪಣೆಯನ್ನು ಮಾಡಿದರು.

Related posts

ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಅನುಮತಿ ದೊರಕಿರುವ ಬಗ್ಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ಸ್ಪಷ್ಟೀಕರಣ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ವಸ್ತ್ರ ಚಿತ್ರಕಲಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya

ಕೊಕ್ಕಡ ಜಂಕ್ಷನ್ ಹದಗೆಟ್ಟ ರಸ್ತೆ: ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯ ಬಾಳೆ ಗಿಡ ನೆಟ್ಟು ಎಚ್ಚರಿಕೆ

Suddi Udaya

ಕರಾಟೆ ಚಾಂಪಿಯನ್‌ಶಿಪ್: ಮುಹಮ್ಮದ್ ಹುಝೈರ್ ಕುಮಿಟೆ ವಿಭಾಗದಲ್ಲಿ ಪ್ರಥಮ, ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ

Suddi Udaya

ಭಾರೀ ಗಾಳಿ ಮಳೆ: ಪಡಂಗಡಿ ವ್ಯಾಪ್ತಿಯಲ್ಲಿ ಮನೆ ಮೇಲೆ ಹಾಗೂ ರಸ್ತೆಗೆ ಬಿದ್ದ ಮರ : ಅಪಾರ ಹಾನಿ

Suddi Udaya

ಆ.15-16: ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಕ್ಷಕ ನಮನ 2025, ಶೈಕ್ಷಣಿಕ ಸಾಧಕರಿಗೆ ಅಭಿನಂದನೆ ಹಾಗೂ ವಿದ್ಯಾರ್ಥಿವೇತನ ವಿತರಣೆ

Suddi Udaya
error: Content is protected !!