July 23, 2026
ತಾಲೂಕು ಸುದ್ದಿ

ವಿಶ್ರಾಂತ ಶಿಕ್ಷಕ ಮುಂಡಾಜೆ ಶಂಕರ್ ತಾಮನ್ಕರ್ ಅವರಿಂದ ಮಾದರಿ ಕಾರ್ಯಕ್ರಮ

ಬೆಳ್ತಂಗಡಿ; ದಿ ನಾರಾಯಣ ತಾಮನ್ಕರ್ ಮುಂಡಾಜೆಯವರ ಸ್ಮರಣಾರ್ಥವಾಗಿ ಅವರ ಮಗ ವಿಶ್ರಾಂತ ಅಧ್ಯಾಪಕ ಹಾಗೂ ಕವಿ ಶಂಕರ್ ಎನ್. ತಾಮನ್ಕರ್ ರವರು ಮತ್ತು ಸ್ವಾತಿ ತಾಮನ್ಕರ್ ಅವರು ತಮ್ಮ “ಪರಂಪರಾ” ಮನೆಯಲ್ಲಿ ಅರ್ಹ ಕುಟುಂಬಗಳಿಗೆ ಆಹಾರದ ಕಿಟ್ ಹಾಗೂ ಪ್ರತಿಭಾ ಸಂಪನ್ನ ಅರ್ಹ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾ ನಿಧಿ ವಿತರಿಸಿದರು.
ಈ ಕಾರ್ಯಕ್ರಮದಲ್ಲಿ ಮುಂಡಾಜೆ ಪರಿಸರದ ನಾಲ್ಕು ವಿದ್ಯಾರ್ಥಿಗಳಿಗೆ ತಲಾ ರೂ. 5000 ದಂತೆ ವಿದ್ಯಾರ್ಥಿ ಸಹಾಯ ಹಸ್ತ, ಮೂರು ಮಂದಿ ಅರ್ಹ ನಾಗರಿಕರಿಗೆ ಆಹಾರ ಕಿಟ್ಟ್ ಹಾಗೂ ಒಬ್ಬ ನಾಗರಿಕರಿಗೆ ರೂ.5000 ಆರೋಗ್ಯ ಸಹಾಯ ಹಸ್ತವನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಗಣೇಶ್ ಬಂಗೇರ ಅಧ್ಯಕ್ಷರು ಗ್ರಾಮ ಪಂಚಾಯತ್ ಮುಂಡಾಜೆ, ನಾಮದೇವ ರಾವ್ ಸಂಚಾಲಕರು ಯಂಗ್ ಚಾಲೆಂಜರ್ಸ್ ಮುಂಡಾಜೆ, ಉದ್ಯಮಿ ಅರೆಕ್ಕಲ್ ರಾಮಚಂದ್ರ ಭಟ್, ದಿಶಾ ಪಟವರ್ಧನ್ ಗ್ರಾಮ ಪಂಚಾಯತ್ ಸದಸ್ಯರು ಮುಂಡಾಜೆ ಯವರು ಭಾಗವಹಿಸಿ ಶುಭ ಕೋರಿದರು.ಇಂತಹ ಕಾರ್ಯಕ್ರಮಗಳು ಇತರರಿಗೆ ಮಾದರಿಯಾಗಲಿ ಎಂದು ಹಾರೈಸಿದರು. ಶಂಕರ್ ತಾಮನ್ಕರರವರು ಸ್ವಾಗತ ಮತ್ತು ವಂದನಾರ್ಪಣೆಯನ್ನು ಮಾಡಿದರು.

Related posts

ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್ ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಘಟಕಕ್ಕೆ ಭೇಟಿ

Suddi Udaya

ಬೆಳ್ತಂಗಡಿ: ನವೋದಯ ವಿದ್ಯಾಲಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

Suddi Udaya

ನಾರಿ ಶಕ್ತಿ ವಂದನ್‌ ಸಮ್ಮೇಳನ: ವಿವಿಧ ಕ್ಷೇತ್ರದ ಮಹಿಳೆಯರೊಂದಿಗೆ ಕ್ಯಾ. ಚೌಟ ವಿಶೇಷ ಸಂವಾದ

Suddi Udaya

ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ: ಮಿತ್ತಬಾಗಿಲು ನಿವಾಸಿ ಕಬೀರ್ ಬಂಧನ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಮೈಲು ತುತ್ತು ವಿತರಣೆ ಹಾಗೂ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಅರಸಿನಮಕ್ಕಿ: ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya
error: Content is protected !!