ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವ್ಯವಹಾರ ಆಡಳಿತ ನಿರ್ವಹಣೆ ಯಲ್ಲಿ ಕೃತಕ ಬುದ್ಧಿಮತ್ತೆ ಮತ್ತು ವೈಜ್ಞಾನಿಕ ಆವಿಷ್ಕಾರಗಳು ಅವಕಾಶಗಳನ್ನೂ ಸೃಷ್ಟಿಸುತ್ತದೆ ” ಎನ್ನುವ ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗ ಮತ್ತು ಎಸ್.ಡಿ.ಎಮ್-ರೋಟರಿ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ (HRD) ಕೇಂದ್ರವು “ವ್ಯವಹಾರ ಆಡಳಿತ ನಿರ್ವಹಣೆ ಯಲ್ಲಿ ಕೃತಕ ಬುದ್ಧಿಮತ್ತೆ (Artificial Intelligence) ಮತ್ತು ವೈಜ್ಞಾನಿಕ ಆವಿಷ್ಕಾರಗಳು (Scientific Innovations) ಅವಕಾಶಗಳನ್ನೂ ಸೃಷ್ಟಿಸುತ್ತದೆ ” ಎನ್ನುವ ವಿಚಾರದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತೃತೀಯ ಬಿಸಿಎ,ಬಿಬಿಎ ಮತ್ತು ಬಿಕಾಂ ವಿದ್ಯಾರ್ಥಿಗಳಿಗಾಗಿ ಆ.4 ರಂದು ಆಯೋಜಿಸಿತು.

ಬೆಂಗಳೂರಿನ ಅಲ್ಲೈನ್ಸ್ ವಿಶ್ವವಿದ್ಯಾಲಯದ ಗಣಕ ವಿಜ್ಞಾನ ವಿಭಾಗದ ಪ್ರಾದ್ಯಾಪಕ ಡಾ ನಾಗರಾಜ ಎಸ್ ರವರು ಸಂಪನ್ಯೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು ಮತ್ತು ಅವರು ಕೃತಕ ಬುದ್ಧಿಮತ್ತೆ (Artificial Intelligence) ಮತ್ತು ವೈಜ್ಞಾನಿಕ ಆವಿಷ್ಕಾರಗಳು (Scientific Innovations) ತಾಂತ್ರಿಕ ಪ್ರಗತಿಯ ಹೊಸ ಯುಗವನ್ನು ನಿರೂಪಿಸುತ್ತಿದ್ದು, ಇವುಗಳನ್ನು ಆಧರಿಸಿದ ಭವಿಷ್ಯದ ಅವಕಾಶಗಳು ಉದ್ಯೋಗ, ಶಿಕ್ಷಣ, ಆರೋಗ್ಯ, ಕೈಗಾರಿಕೆ ಹಾಗೂ ಪರಿಸರದ ಕ್ಷೇತ್ರಗಳಲ್ಲಿ ಅಪಾರವಾಗಿವೆ. ಹೊಸತನ, ಸಂಶೋಧನೆ ಮತ್ತು ಡಿಜಿಟಲ್ ರೂಪಾಂತರಗಳ ಮೂಲಕ ಇವು ಮಾನವ ಜೀವನದ ಗುಣಮಟ್ಟವನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಎಂಬುದನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಪ್ರೊ ವಿಶ್ವನಾಥ ಪಿ ರವರು ವಹಿಸಿದ್ದರು. ಕೃತಕ ಬುದ್ಧಿಮತ್ತೆ ಹಾಗೂ ವೈಜ್ಞಾನಿಕ ಆವಿಷ್ಕಾರಗಳು ಕೌಶಲ್ಯ ಪರಿವರ್ತನೆಗೆ ಕಾರಣವಾಗುತ್ತವೆ ಎಂಬ ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಶೈಲೇಶ್ ಕುಮಾರ ರವರು ಉಪಸ್ಥಿತರಿದ್ದರು. ಎಸ್.ಡಿ,ಎಮ್-ರೋಟರಿ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ (HRD) ಕೇಂದ್ರವು ನಿರ್ದೇಶಕರಾದ ಡಾ.. ನಾಗರಾಜ ಪೂಜಾರಿ ಕಾರ್ಯಕ್ರಮವನ್ನು ಸಂಘಟಿಸಿದ್ದರು ಮತ್ತು ವೃತ್ತಿ ಮಾರ್ಗದರ್ಶನ ಕೇಂದ್ರದ ಸದಸ್ಯರು ಮತ್ತು ಜೈವಿಕ ತಂತ್ರಜ್ಞಾನ ವಿಭಾಗದ ಉಪನ್ಯಾಸಕ ದೀಕ್ಷಿತ್ ರೈ ಕಾರ್ಯಕ್ರಮವನ್ನು ನಿರ್ವಹಿಸಿದರು.

Related posts

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ಎನ್ ಎಸ್ ಎಸ್ ಘಟಕ ಮತ್ತು ರೋವರ್ಸ್ ಹಾಗೂ ರೇಂಜರ್ಸ್ ಬಂಗೇರ ದಳದ ವತಿಯಿಂದ ಗಾಂಧಿಜಯಂತಿಯ ಪ್ರಯುಕ್ತ ಸ್ವಚ್ಚತಾ ಹೀ ಭಾರತ ಅಭಿಯಾನ

Suddi Udaya

ಜ.6: 49ನೇ ವರ್ಷದ ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ನಾಪತ್ತೆಯಾಗಿದ್ದ ತೋಟತ್ತಾಡಿ ಯುವಕನ ಮೃತದೇಹ ಅಣಿಯೂರು ನದಿಯಲ್ಲಿ ಪತ್ತೆ

Suddi Udaya

ಅಲ್ ಬದ್ರಿಯ್ಯೀನ್ ಫ್ಯಾಮಿಲಿ ಗ್ರೂಪ್; ಅಧ್ಯಕ್ಷರಾಗಿ ಅಶ್ರಫ್ ಆಲಿಕುಂಞಿ ಪುನರಾಯ್ಕೆ

Suddi Udaya

ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಬೊಂಟ್ರೊಟ್ಟು ಕ್ಷೇತ್ರದಿಂದ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ

Suddi Udaya

ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು ಇವರಿಗೆ “ಹವ್ಯಕ ವೇದ ರತ್ನ” ಪ್ರಶಸ್ತಿ ಪ್ರದಾನ

Suddi Udaya
error: Content is protected !!