32.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿವರದಿಸಮಸ್ಯೆ

ಶಿಶಿಲದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ ಬಂಡಿಹೊಳೆ ಕೆಮ್ಮಣ್ಣು ಎಂಬಲ್ಲಿ ಬರೆ ಜರಿದು ರಸ್ತೆ ಬಂದ್

ಶಿಶಿಲ: ಇಂದು (ಆ. 5)ಸಂಜೆ ಪ್ರಾರಂಭವಾದ ಮಳೆ ಎಡೆಬಿಡದೆ ಬರುತ್ತಿದ್ದು ಶಿಶಿಲ ಪರಿಸರದಲ್ಲಿ ಆತಂಕದ ಸನ್ನಿವೇಶ ನಿರ್ಮಾಣವಾಗಿದೆ.ಶಿಶಿಲೇಶ್ವರ ದೇವಸ್ಥಾನದೊಳಗೆ ನೀರು ನುಗ್ಗಿ ಪರಿಸ್ಥಿತಿ ಹದಗೆಟ್ಟಿರುತ್ತದೆ. ಬಂಡಿಹೊಳೆ ಕೆಮ್ಮಣ್ಣು ಎಂಬಲ್ಲಿ ಬರೆ ರಸ್ತೆಗೆ ಜರಿದು ಅರಸಿನಮಕ್ಕಿ- ಶಿಶಿಲ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ.

ಬರ್ಗುಳ ಎಂಬಲ್ಲಿ ಅರಣ್ಯದಿಂದ ಬರುವ ನೀರು ರಸ್ತೆಯನ್ನು ಸಂಪೂರ್ಣವಾಗಿ ಆವರಿಸಿ ಹೊಳೆಯಂತಾಗಿ ವಾಹನ ಸಂಚರಿಸಲು ಆಗದಂತ ಪರಿಸ್ಥಿತಿ ಉಂಟಾಗಿದೆ. ಮುಚ್ಚಿರಡ್ಕ ಕೃಷ್ಣಪ್ಪ ಗೌಡರವರ ಮನೆಯ ಬಳಿ ಗುಡ್ಡ ಜರಿದು ಮನೆಗೆ ಅಲ್ಪ ಪ್ರಮಾಣದ ಹಾನಿಯಾಗಿದೆ. ರಸ್ತೆ -ಹಳ್ಳ ತೋಡುಗಳು ನೀರಿನಿಂದ ತುಂಬಿವೆ.

ಪರಿಸ್ಥಿತಿಯನ್ನು ನಿಭಾಯಿಸಲು ಗ್ರಾ.ಪಂ. ಅಧ್ಯಕ್ಷ ಸುಧೀನ್, ಶೌರ್ಯ ವಿಪತ್ತು ನಿರ್ವಹಣಾ ತಂಡ, ಗ್ರಾ.ಪಂ ಹಾಗೂ ಗ್ರಾಮಸ್ಥರು ಶ್ರಮಿಸುತ್ತಿದ್ದಾರೆ. ರಸ್ತೆಗೆ ಬಿದ್ದ ಮಣ್ಣನ್ನು ತೆಗೆಯಲು ಹಿಟಾಚಿ ಮೂಲಕ ಪ್ರಯತ್ನಿಸಲಾಗುತ್ತಿದೆ.ಅರಸಿನಮಕ್ಕಿಯಿಂದ ಬೂಡುಮುಗೇರು ಕಡೆ ಬರುವಲ್ಲಿ ಕೂಡಾ ಬರೆ ಜರಿದು ರಸ್ತೆಗೆ ಮಣ್ಣು ಬಿದ್ದಿದ್ದೆ. ಪಟ್ರಮೆ ಮಸೀದಿ ಬಳಿ ನದಿ ನೀರು ರಸ್ತೆಗೆ ಬಂದಿರುತ್ತದೆ. ಮಣಿಯೇರು ರಸ್ತೆ, ಕೂಟೇಲು ಬಳಿ ನೀರು ತುಂಬಿ ಸಂಪರ್ಕ ಕಡಿದಿದೆ.

Related posts

‌ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಮ್ ಇದರ 60ನೇ ವರ್ಷದ ವಾರ್ಷಿಕ ಹಾಗೂ ಗುರುಮಂದಿರದ ಪ್ರತಿಷ್ಠಾ ವಾರ್ಷಿಕದ ಅಂಗವಾಗಿ ಗುರುಪೂಜೆ ಹಾಗೂ ವಾರ್ಷಿಕ ಮಹಾಸಭೆ

Suddi Udaya

ಉರುವಾಲು ಗ್ರಾಮದ ಬನಾರಿಯಲ್ಲಿ ರಸ್ತೆಗೆ ಉರುಳಿದ ಬೃಹತ್ ಮರ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್‌ನಲ್ಲಿ ತೆನೆ ಹಬ್ಬ: ಬೆಳ್ತಂಗಡಿ ನಗರದಲ್ಲಿ ಸಂಭ್ರಮದ ಮೆರವಣಿಗೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಗೆ ಪ್ರೌಢಶಾಲೆ ಮಂಜೂರುಗೊಳಿಸುವಂತೆ ವಿನುತ ಬಂಗೇರ ರವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಬಳಂಜ: ನಾಲ್ಕೂರು ಬೊಳ್ಳಾಜೆ, ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಹೆಜ್ಜೆಗುರುತು: ಅರಣ್ಯ ಇಲಾಖೆಗೆ ಮಾಹಿತಿ, ಚಿರತೆಯ ಸೆರೆಗೆ ಬೋನ್ ಅಳವಡಿಕೆ

Suddi Udaya

ಸುಬ್ರಹ್ಮಣ್ಯದಲ್ಲಿ ಡೆಂಗು ಹಾಗೂ ಸಾಂಕ್ರಾಮಿಕ ರೋಗ ಹರಡದಂತೆ ಸ್ವಚ್ಛತಾ ಕಾರ್ಯ

Suddi Udaya
error: Content is protected !!