23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಅನುಗ್ರಹದಲ್ಲಿ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪೋಷಕರ ಸಭೆ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆಯಲ್ಲಿ ಆ.2ರಂದು ಪೂರ್ವಪ್ರಾಥಮಿಕ ವಿದ್ಯಾರ್ಥಿಗಳ ಪೋಷಕರ ಸಭೆಯು ಅನುಗ್ರಹ ಶಾಲಾ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಫಾ| ಅಬೆಲ್ ಲೋಬೋ ಅವರು ವಹಿಸಿದ್ದರು. ಪ್ರಾಂಶುಪಾಲರಾದ ಫಾ| ವಿಜಯ್ ಲೋಬೊ, ಹಾಗೂ, ಶಿಕ್ಷಕಿ ಗ್ರೇಸಿ ಸಾಲ್ದಾನ ಅವರು ಉಪಸ್ಥಿತರಿದ್ದರು. ಪ್ರಾರ್ಥನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು .

ಕಾರ್ಯಕ್ರಮದಲ್ಲಿ ಮಕ್ಕಳ ಪಠ್ಯ – ಪಠ್ಯೇತರ ಚಟುವಟಿಕೆಗಳ ಬಗ್ಗೆ ತರಗತಿಯ ಶಿಕ್ಷಕಿಯರಾದಂತಹ ಗೀತಾ, ವಿನ್ನಿ ಹಾಗೂ ಅಕ್ಷತರವರು ವಿವರಿಸಿದರು. ಹಾಗೆ ಶಾಲಾ ಪ್ರಾಂಶುಪಾಲರಾದ ಫಾದರ್ ವಿಜಯ್ ಲೋಬೊರವರು ಪೋಷಕರಿಗೆ ಪಠ್ಯೇತರ ಚಟುವಟಿಕೆಗಳ ಬಗ್ಗೆ ಹಾಗೂ ಪೋಷಕರು ಮಾಡಬೇಕಾದ ಕೆಲವು ಜವಾಬ್ದಾರಿಗಳನ್ನು ತಿಳಿಸಿಕೊಟ್ಟರು.

ಪೋಷಕರ ಅನಿಸಿಕೆ ಸಲಹೆ ಸೂಚನೆಯನ್ನು ಕೇಳಲಾಯಿತು. ಶಿಕ್ಷಕಿ ಅಕ್ಷತಾ ಕಾರ್ಯಕ್ರಮವನ್ನು ನಿರೂಪಿಸಿ, ಗ್ರೇಸಿ ಸಲ್ದಾನ ವಂದಿಸಿದರು. ಶಿಕ್ಷಕಿ ಪ್ರಣಿತಾ ಡಿಸೋಜ ಸಹಕರಿಸಿದರು.

Related posts

ಬಜಿರೆ: ನಾಟಿ ವೈದ್ಯ ದುಗ್ಗಪ್ಪ ಗೌಡ ನಿಧನ

Suddi Udaya

ನಾಲ್ಕೂರು: ತುಂಡಾಗಿ ಬಿದ್ದ ವಿದ್ಯುತ್‌ ತಂತಿಯಿಂದ ತೋಟದಲ್ಲಿ ಮೆಯುತ್ತಿದ್ದ ಹಸುವಿಗೆ ವಿದ್ಯುತ್ ತಗುಲಿ ಸಾವು

Suddi Udaya

ಮಿತ್ತಬಾಗಿಲು: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಧ್ಯಂತರ ಕ್ಷೇತ್ರ ಪ್ರತಿನಿಧಿ ಸಭೆ, ನೂತನ ಸಮಿತಿ ರಚನೆ

Suddi Udaya

ಕುಪ್ಪೆಟ್ಟಿ :ಕುಪ್ಪೆಟ್ಟಿ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ(CRP)ಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಧ್ಯಾ ಬಿ. ಗೋಳಿತೊಟ್ಟು ಶಾಲೆಗೆ ವರ್ಗಾವಣೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!